ETV Bharat / state

ಶಿರಾಡಿಘಾಟ್​ ತಿರುವಿನಲ್ಲಿ ಮಗುಚಿದ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಬೃಹತ್ ಲಾರಿಯೊಂದು ಶಿರಾಡಿಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿತ್ತು. ಪರಿಣಾಮ ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

author img

By

Published : Dec 1, 2019, 10:30 AM IST

Lorry over turned in Shiradi ghat, ಚಾಲಕನ ನಿಯಂತ್ರಣ ತಪ್ಪಿದ ಲಾರಿ ಪಲ್ಟಿ ಸಂಚಾರ ಅಸ್ತವ್ಯಸ್ತ
ಶಿರಾಡಿಘಾಟ್​ ತಿರುವಿನಲ್ಲಿ ಮಗುಚಿದ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಶಿರಾಡಿಘಾಟ್ ಸಮೀಪ ಲಾರಿಯೊಂದು ಬಿದ್ದು ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಬೃಹತ್ ಲಾರಿಯೊಂದು ಶಿರಾಡಿಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಬೃಹತ್ ಕೈಗಾರಿಕೆಗೆ ಬಳಸುವ ಬಾಯ್ಲರ್ ರೀತಿಯ ಕಬ್ಬಿಣದ ಪೈಪನ್ನು ಲಾರಿಯ ಮೂಲಕ ಸಾಗಿಸಲಾಗುತ್ತಿತ್ತು. ಇಳಿಜಾರು ಪ್ರದೇಶವಾಗಿರುವುದರಿಂದ, ಜೊತೆಗೆ ಕಬ್ಬಿಣದ ಪೈಪು ಭಾರವಿದ್ದ ಹಿನ್ನೆಲೆ ಎಡಭಾಗಕ್ಕೆ ತೂಕ ಹೆಚ್ಚಾಗಿ ಲಾರಿ ತಿರುವಿನಲ್ಲಿ ಮಗುಚಿ ಬಿದ್ದಿದೆ.

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಸಂಚಾರ ದಟ್ಟಣೆ ತಗ್ಗಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಚಾಲಕನ ನಿಯಂತ್ರಣ ತಪ್ಪಿ ಶಿರಾಡಿಘಾಟ್ ಸಮೀಪ ಲಾರಿಯೊಂದು ಬಿದ್ದು ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ಶನಿವಾರ ನಡೆದಿದೆ.

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಬೃಹತ್ ಲಾರಿಯೊಂದು ಶಿರಾಡಿಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡು ಪ್ರಯಾಣಿಕರು ಪರದಾಡುವಂತಾಯಿತು.

ಬೃಹತ್ ಕೈಗಾರಿಕೆಗೆ ಬಳಸುವ ಬಾಯ್ಲರ್ ರೀತಿಯ ಕಬ್ಬಿಣದ ಪೈಪನ್ನು ಲಾರಿಯ ಮೂಲಕ ಸಾಗಿಸಲಾಗುತ್ತಿತ್ತು. ಇಳಿಜಾರು ಪ್ರದೇಶವಾಗಿರುವುದರಿಂದ, ಜೊತೆಗೆ ಕಬ್ಬಿಣದ ಪೈಪು ಭಾರವಿದ್ದ ಹಿನ್ನೆಲೆ ಎಡಭಾಗಕ್ಕೆ ತೂಕ ಹೆಚ್ಚಾಗಿ ಲಾರಿ ತಿರುವಿನಲ್ಲಿ ಮಗುಚಿ ಬಿದ್ದಿದೆ.

ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಸಂಚಾರ ದಟ್ಟಣೆ ತಗ್ಗಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಇನ್ನು ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಚಾಲಕನ ನಿಯಂತ್ರಣ ತಪ್ಪಿ ಶಿರಾಡಿಘಾಟ್ ಸಮೀಪ ಲಾರಿಯೊಂದು ಬಿದ್ದು ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ ಉಂಟಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನಲ್ಲಿ ನಡೆದಿದೆ

ಬೆಂಗಳೂರು ಕಡೆಯಿಂದ ಮಂಗಳೂರಿಗೆ ಹೊರಟಿದ್ದ ಬೃಹತ್ ಲಾರಿಯೊಂದು ಶಿರಾಡಿಘಾಟ್ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಒಂದು ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತಗೊಂಡ ಕಾರಣ ಪ್ರಯಾಣಿಕರು ಪರದಾಡುವಂತಾಯಿತು.

ಬೃಹತ್ ಕೈಗಾರಿಕೆಗೆ ಬಳಸುವ ಬಾಯ್ಲರ್ ರೀತಿಯ ಕಬ್ಬಿಣದ ಬೃಹತ್ ಪೈಪನ್ನು ಅನ್ನ ಲಾರಿಯ ಮೂಲಕ ಸಾಗಿಸಲಾಗುತ್ತಿತ್ತು ಇಳಿಜಾರು ಪ್ರದೇಶವಾಗಿರುವುದರಿಂದ ಜೊತೆಗೆ ತಿರುವಿನಲ್ಲಿ ಚಾಲಕನ ನಿಯಂತ್ರಣ ಭಾರವಾದ ಕಬ್ಬಿಣದ ಪೈಪು ಎಡಭಾಗಕ್ಕೆ ತೂಕ ಹೆಚ್ಚಾಗಿದ್ದರಿಂದ ಲಾರಿ ತಿರುವಿನಲ್ಲಿ ಮಗುಚಿ ಬಿದ್ದಿದೆ.

ಇನ್ನು ಲಾರಿ ಬಿದ್ದ ಹಿನ್ನೆಲೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಆದರೆ ಕೆಲಕಾಲ ಪ್ರಯಾಣಿಕರ ವಾಹನಗಳಿಗೆ ತೊಂದರೆ ಉಂಟಾಗಿದ್ದು ಸ್ಥಳಕ್ಕೆ ಸಕಲೇಶಪುರ ಪೊಲೀಸರು ಭೇಟಿ ನೀಡಿ ಸಂಚಾರ ದಟ್ಟಣೆಯನ್ನು ತಗ್ಗಿಸಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಇನ್ನು ಈ ಸಂಬಂಧ ಸಕಲೇಶಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮಗುಚಿ ಬಿದ್ದಿರುವ ಲಾರಿಯನ್ನು ಉಳಿಸುವ ಕಾರ್ಯವನ್ನು ಪೊಲೀಸರು ಮಾಡುತ್ತಿದ್ದು ಸಾರ್ವಜನಿಕರು ಕೂಡ ಸಾಥ್ ನೀಡಿದ್ದಾರೆ.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.