ETV Bharat / state

ಜೀವನದಲ್ಲಿ ಜಿಗುಪ್ಸೆ: ಪತ್ನಿಗೆ ಕರೆ ಮಾಡಿ ನೇಣಿಗೆ ಶರಣಾದ ವ್ಯಕ್ತಿ

ಪತ್ನಿಗೆ ಕರೆ ಮಾಡಿ ನನ್ನಿಂದ ಜೀವನ ನಡೆಸಲು ಸಾಧ್ಯವಿಲ್ಲ ನನ್ನನ್ನು ಕ್ಷಮಿಸಿಬಿಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.

author img

By

Published : Jun 22, 2019, 5:31 AM IST

ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ನೇಣಿಗೆ ಶರಣು

ಹಾಸನ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಅರೆಹಳ್ಳಿ ಗ್ರಾಮದ ಸಂತೋಷ ನಗರದ ನಿವಾಸಿ ಶಿವಾಜಿ (38), ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಾಫಿ ತೋಟದಲ್ಲಿ ಪತಿ-ಪತ್ನಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದರು. ಕೆಲ ತಿಂಗಳ ಹಿಂದೆ ಸಂಸಾರದಲ್ಲಿ ಉಲ್ಬಣಿಸಿದ ಕೆಲವು ಸಮಸ್ಯೆಗಳಿಂದ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದರು ಎನ್ನಲಾಗಿದೆ.

ಶಿವಾಜಿ ಪತ್ನಿ ಕೆಲಸಕ್ಕೆ ಹೋದ ಬಳಿಕ ಆಕೆಗೆ ಕರೆ ಮಾಡಿ ನನ್ನಿಂದ ಜೀವನ ನಡೆಸಲು ಸಾಧ್ಯವಿಲ್ಲ ನನ್ನನ್ನು ಕ್ಷಮಿಸಿಬಿಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆಯನ್ನು ಕಟ್ ಮಾಡಿದ್ದಾನೆ.

ಇದರಿಂದ ವಿಚಲಿತಗೊಂಡ ಪತ್ನಿ ಲತಾ ಕಾಫಿ ತೋಟದಿಂದ ಗಾಬರಿಗೊಂಡು ವಾಪಸ್ ಮನೆಗೆ ಬಂದಿದ್ದಾಳೆ. ಆದರೆ ಅಷ್ಟರೊಳಗೆ ಪತಿ ಶಿವಾಜಿ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹರಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಸನ: ಜೀವನದಲ್ಲಿ ಜಿಗುಪ್ಸೆ ಹೊಂದಿ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಅರೆಹಳ್ಳಿ ಗ್ರಾಮದ ಸಂತೋಷ ನಗರದ ನಿವಾಸಿ ಶಿವಾಜಿ (38), ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿ. ಕಾಫಿ ತೋಟದಲ್ಲಿ ಪತಿ-ಪತ್ನಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದರು. ಕೆಲ ತಿಂಗಳ ಹಿಂದೆ ಸಂಸಾರದಲ್ಲಿ ಉಲ್ಬಣಿಸಿದ ಕೆಲವು ಸಮಸ್ಯೆಗಳಿಂದ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದರು ಎನ್ನಲಾಗಿದೆ.

ಶಿವಾಜಿ ಪತ್ನಿ ಕೆಲಸಕ್ಕೆ ಹೋದ ಬಳಿಕ ಆಕೆಗೆ ಕರೆ ಮಾಡಿ ನನ್ನಿಂದ ಜೀವನ ನಡೆಸಲು ಸಾಧ್ಯವಿಲ್ಲ ನನ್ನನ್ನು ಕ್ಷಮಿಸಿಬಿಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಹೇಳಿ ಕರೆಯನ್ನು ಕಟ್ ಮಾಡಿದ್ದಾನೆ.

ಇದರಿಂದ ವಿಚಲಿತಗೊಂಡ ಪತ್ನಿ ಲತಾ ಕಾಫಿ ತೋಟದಿಂದ ಗಾಬರಿಗೊಂಡು ವಾಪಸ್ ಮನೆಗೆ ಬಂದಿದ್ದಾಳೆ. ಆದರೆ ಅಷ್ಟರೊಳಗೆ ಪತಿ ಶಿವಾಜಿ ಮನೆಯ ಮೇಲ್ಛಾವಣಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಬೇಲೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ. ಹರಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹಾಸನ: ಜೀವನದಲ್ಲಿ ಜಿಗುಪ್ಸೆ ಹೊಂದಿದ್ದ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಶಿವಾಜಿ(38) ಆತ್ಮಹತ್ಯೆಮಾಡಿಕೊಂಡ ವ್ಯಕ್ತಿಯಾಗಿದ್ದು, ತಾಲೂಕಿನ ಅರೆಹಳ್ಳಿ ಗ್ರಾಮದ ಸಂತೋಷ ನಗರದ ನಿವಾಸಿಯಾಗಿದ್ದಾನೆ. ಕಾಫಿ ತೋಟದಲ್ಲಿ ಪತಿ-ಪತ್ನಿ ಕೆಲಸ ಮಾಡಿಕೊಂಡು ಸಂಸಾರ ನಡೆಸುತ್ತಿದ್ದರು. ಕೆಲತಿಂಗಳ ಹಿಂದೆ ಸಂಸರದಲ್ಲಿ ಉಲ್ಬಣಿಸಿದ ಕೆಲವು ಸಮಸ್ಯೆಗಳಿಂದ ಮಾನಸಿಕವಾಗಿ ತೊಳಲಾಟಕ್ಕೆ ಸಿಲುಕಿದ್ದು, ಇಂದು ಮಧ್ಯಾಹ್ನ ಪತ್ನಿ ತನ್ನ ತಂಗಿಗೆ ಕರೆಮಾಡಿ ಮನೆಯಲ್ಲಿ ಹಬ್ಬವನ್ನು ಇಟ್ಟುಕೊಂಡಿದ್ದೇವೆ ದಯಮಾಡಿ ನೀನೊಬ್ಬ ಎಂದು ಕರೆದಿದ್ದಾಳೆ.

ಈ ಮಾತನ್ನು ಕೇಳಿಸಿಕೊಂಡ ಪತಿ ಶಿವಾಜಿ ಪತ್ನಿ ಕೆಲಸಕ್ಕೆ ಹೋದ ಬಳಿಕ ಪತ್ನಿಗೆ ಕರೆ ಮಾಡಿ ನನ್ನಿಂದ ಜೀವನ ನಡೆಸಲು ಸಾಧ್ಯವಿಲ್ಲ ನನ್ನನ್ನು ಕ್ಷಮಿಸಿಬಿಡು ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ಹೇಳಿ ಕರೆಯನ್ನು ಕಟ್ ಮಾಡಿದ್ದಾನೆ.

ಇದರಿಂದ ವಿಚಲಿತಗೊಂಡ ಪತ್ನಿ ಲತಾ ಕಾಫಿ ತೋಟದಿಂದ ಗಾಬರಿಯಿಂದ ವಾಪಸ್ ಮನೆಗೆ ಬಂದಿದ್ದಾಳೆ ಆದರೆ ಅಷ್ಟರೊಳಗೆ ಪತಿ ಶಿವಾಜಿ ಮನೆಯ ಮೇಲ್ಚಾವಣಿಯ ಕಂಬಕ್ಕೆ ನೇಣು ಬಿಗಿದುಕೊಂಡ ಹಿನ್ನೆಲೆಯಲ್ಲಿ ಶಿವಾಜಿಯ ಪ್ರಾಣಪಕ್ಷಿ ಹಾರಿಹೋಗಿತ್ತು.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಕೆಳಗಿಳಿಸಿ ಮರಣೋತ್ತರ ಪರೀಕ್ಷೆಗೆ ಬೇಲೂರಿನ ಸರ್ಕಾರಿ ಆಸ್ಪತ್ರೆ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು ಸದ್ಯ ಹರಿಹಳ್ಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಿಕೊಂಡಿದ್ದಾರೆ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.