ETV Bharat / state

ಹಾಸನದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವ ಈಶ್ವರಪ್ಪ

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು, ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ಹಾಸನದಲ್ಲಿ ನಡೆಸಿದ್ರು.

author img

By

Published : Jan 22, 2020, 8:06 PM IST

Minister K.S. Eshwarappa
ಸಭೆ ನಡೆಸಿದ ಸಚಿವ ಕೆ.ಎಸ್​. ಈಶ್ವರಪ್ಪ

ಹಾಸನ: ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೃಕೆ ಸಮಸ್ಯೆಗಳಿಲ್ಲದಂತೆ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಈಗಾಗಲೇ ಪ್ರಾರಂಭಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವರು ನಡೆಸಿದ್ರು. ಜಿಲ್ಲೆಯಲ್ಲಿ ಕಾವೇರಿ ಮತ್ತು ಹೇಮಾವತಿ ನದಿ ಹರಿಯುತ್ತಿದ್ದರೂ, ಹಲವೆಡೆ ಇನ್ನೂ ಕುಡಿಯುವ ನೀರಿನ ಸಮಸ್ಯೆಗಳಿವೆ. ಅದನ್ನು ಶೀಘ್ರ ಬಗೆಹರಿಸಿ ಯಾವುದಾದರೊಂದು ಯೋಜನೆಯಲ್ಲಿ ನೀರು ನೀಡಿ ಎಂದರು.

ಸಭೆ ನಡೆಸಿದ ಸಚಿವ ಕೆ.ಎಸ್​. ಈಶ್ವರಪ್ಪ

ಹಾಲಿ ಚಾಲ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ, ಅಮೃತ ಯೋಜನೆ, ಜಲಧಾರೆ ಹಾಗೂ ಇತರ ಯೋಜನೆಗಳಲ್ಲಿ ಪ್ರಾರಂಭಿಸಲಾಗಿರುವ ಕೆಲಸಗಳು ಬೇಗ ಮುಗಿಯಬೇಕು. ಅರಸೀಕೆರೆ ತಾಲೂಕಿನಲ್ಲಿ ಯಗಚಿ, ಹೇಮಾವತಿ ಜಲಾಶಯದಿಂದ ನೀರು ಪೂರೈಸುವ ಬಹುಗ್ರಾಮಗಳಿಗೆ ಕುಡಿಯುವ ನೀರು ಯೋಜನೆಗಳನ್ನು ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುವುದು. ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಿ ಎಂದು ಸಚಿವರು ಸೂಚನೆ ನೀಡಿದರು.

ಹಾಸನ ಕ್ಷೇತ್ರ ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಹಾಸನ ನಗರ ಬೆಳೆಯುತ್ತಿದೆ ಇದಕ್ಕೆ ಹೊಂದಿಕೊಂಡಿರುವ 8 ಗ್ರಾಮ ಪಂಚಾಯಿತಿಗಳಲ್ಲಿ, ಸುಮಾರು 80 ಸಾವಿರ ಜನರಿದ್ದಾರೆ. ಪ್ರತಿ ದಿನ ಕೊಳವೆ ಬಾವಿ ನೀರನ್ನೇ ಆಶ್ರಯಿಸಬೇಕಾಗಿದೆ. ಹಾಲಿ ಚಾಲ್ತಿಯಲ್ಲಿರುವ ಅಮೃತ ಯೋಜನೆಯನ್ನು ಈ ಭಾಗದ ನೀರು ಪೂರೈಕೆಗೆ ವಿಸ್ತರಣೆ ಮಾಡಲು ಕಷ್ಟವಾಗಿದೆ. ಹಾಗಾಗಿ ಹೇಮಾವತಿ ನದಿಯಿಂದ ಹಾಸನ ಕಸಬಾ ಸಾಲಗಾಮೆ, ಕಟ್ಟಾಯ ಹೋಬಳಿಗಳಿಗೆ ನೀರು ಪೂರೈಸುವ ಹೊಸ ಯೋಜನೆ ಜಾರಿಗೊಳಿಸಿ ಎಂದು ಹೇಳಿದರು.

ಹಾಸನ: ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೃಕೆ ಸಮಸ್ಯೆಗಳಿಲ್ಲದಂತೆ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಈಗಾಗಲೇ ಪ್ರಾರಂಭಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆಯನ್ನು ಸಚಿವರು ನಡೆಸಿದ್ರು. ಜಿಲ್ಲೆಯಲ್ಲಿ ಕಾವೇರಿ ಮತ್ತು ಹೇಮಾವತಿ ನದಿ ಹರಿಯುತ್ತಿದ್ದರೂ, ಹಲವೆಡೆ ಇನ್ನೂ ಕುಡಿಯುವ ನೀರಿನ ಸಮಸ್ಯೆಗಳಿವೆ. ಅದನ್ನು ಶೀಘ್ರ ಬಗೆಹರಿಸಿ ಯಾವುದಾದರೊಂದು ಯೋಜನೆಯಲ್ಲಿ ನೀರು ನೀಡಿ ಎಂದರು.

ಸಭೆ ನಡೆಸಿದ ಸಚಿವ ಕೆ.ಎಸ್​. ಈಶ್ವರಪ್ಪ

ಹಾಲಿ ಚಾಲ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ, ಅಮೃತ ಯೋಜನೆ, ಜಲಧಾರೆ ಹಾಗೂ ಇತರ ಯೋಜನೆಗಳಲ್ಲಿ ಪ್ರಾರಂಭಿಸಲಾಗಿರುವ ಕೆಲಸಗಳು ಬೇಗ ಮುಗಿಯಬೇಕು. ಅರಸೀಕೆರೆ ತಾಲೂಕಿನಲ್ಲಿ ಯಗಚಿ, ಹೇಮಾವತಿ ಜಲಾಶಯದಿಂದ ನೀರು ಪೂರೈಸುವ ಬಹುಗ್ರಾಮಗಳಿಗೆ ಕುಡಿಯುವ ನೀರು ಯೋಜನೆಗಳನ್ನು ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುವುದು. ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಿ ಎಂದು ಸಚಿವರು ಸೂಚನೆ ನೀಡಿದರು.

ಹಾಸನ ಕ್ಷೇತ್ರ ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಹಾಸನ ನಗರ ಬೆಳೆಯುತ್ತಿದೆ ಇದಕ್ಕೆ ಹೊಂದಿಕೊಂಡಿರುವ 8 ಗ್ರಾಮ ಪಂಚಾಯಿತಿಗಳಲ್ಲಿ, ಸುಮಾರು 80 ಸಾವಿರ ಜನರಿದ್ದಾರೆ. ಪ್ರತಿ ದಿನ ಕೊಳವೆ ಬಾವಿ ನೀರನ್ನೇ ಆಶ್ರಯಿಸಬೇಕಾಗಿದೆ. ಹಾಲಿ ಚಾಲ್ತಿಯಲ್ಲಿರುವ ಅಮೃತ ಯೋಜನೆಯನ್ನು ಈ ಭಾಗದ ನೀರು ಪೂರೈಕೆಗೆ ವಿಸ್ತರಣೆ ಮಾಡಲು ಕಷ್ಟವಾಗಿದೆ. ಹಾಗಾಗಿ ಹೇಮಾವತಿ ನದಿಯಿಂದ ಹಾಸನ ಕಸಬಾ ಸಾಲಗಾಮೆ, ಕಟ್ಟಾಯ ಹೋಬಳಿಗಳಿಗೆ ನೀರು ಪೂರೈಸುವ ಹೊಸ ಯೋಜನೆ ಜಾರಿಗೊಳಿಸಿ ಎಂದು ಹೇಳಿದರು.

Intro:ಹಾಸನ  ಜಿಲ್ಲೆಯ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರು ಪೂರೃಕೆ ಸಮಸ್ಯೆಗಳಿಲ್ಲದಂತೆ ಅಧಿಕಾರಿಗಳು ನಿಗಾವಹಿಸಬೇಕು ಹಾಗೂ ಈಗಾಗಲೇ ಪ್ರಾರಂಭಗೊಂಡಿರುವ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತ್ ರಾಜ್ ಇಲಾಖೆ ಯೋಜನೆಗಳ ಅನುಷ್ಠಾನ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು ಜಿಲ್ಲೆಯಲ್ಲಿ ಕಾವೇರಿ ಮತ್ತು ಹೇಮಾವತಿ ನದಿ ಹರಿಯುತ್ತಿದ್ದರೂ ಹಲವೆಡೆ ಇನ್ನೂ ಕುಡಿಯುವ ನೀರಿನ ಸಮಸ್ಯೆಗಳಿವೆ ಅದನ್ನು ಶೀಘ್ರ ಬಗೆಹರಿಸಿ ಯಾವುದಾದರೊಂದು ಯೋಜನೆಯಲ್ಲಿ ನೀರು ನೀಡಿ ಎಂದರು.
ಹಾಲಿ ಚಾಲ್ತಿಯಲ್ಲಿರುವ ಬಹುಗ್ರಾಮ ಕುಡಿಯುವ ನೀರು ಯೋಜನೆ, ಅಮೃತ ಯೋಜನೆ     ಜಲಧಾರೆ ಹಾಗೂ ಇತರೆ ಯೋಜನೆಗಳಲ್ಲಿ ಪ್ರಾರಂಭಿಸಲಾಗಿರುವ ಕೆಲಸಗಳು ಬೇಗ ಮುಗಿಯಬೇಕು. ಅರಸೀಕೆರೆ ತಾಲ್ಲೂಕಿನಲ್ಲಿ ಯಗಚಿ, ಹೇಮಾವತಿ ಜಲಾಶಯದಿಂದ ನೀರು ಪೂರೈಸುವ ಬಹುಗ್ರಾಮಗಳಿಗೆ ಕುಡಿಯುವ ನೀರು ಯೋಜನೆಗಳನ್ನು ಪೂರ್ಣಗೊಳಿಸಲು ಬೇಕಾಗಿರುವ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲಾಗುವುದು, ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಗಿಸಿ ಎಂದು ಸಚಿವರು ಸೂಚನೆ ನೀಡಿದರು.
ಶಾಸಕ ಕೆ.ಎಂ. ಶಿವಲಿಂಗೇಗೌಡ ಹಾಗೂ ಬಾಲಕೃಷ್ಣ ಅರಸೀಕೆರೆ ಮತ್ತು ಚನ್ನರಾಯಪಟ್ಟಣ ತಾಲ್ಲೂಕುಗಳ ಬರ ಪರಿಸ್ಥಿತಿ, ಕುಡಿಯುವ ನೀರಿನ ಸಮಸ್ಯೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆಗಳ ಹಾಗೂ ಅಗತ್ಯ ಅನುದಾನಗಳ ಬಗ್ಗೆ ಸಚಿವರ ಗಮನಕ್ಕೆ ತಂದು ಮನವಿ ಮಾಡಿದರು.
ಹಾಸನ ಕ್ಷೇತ್ರ ಶಾಸಕ ಪ್ರೀತಂ ಜೆ. ಗೌಡ ಮಾತನಾಡಿ, ಹಾಸನ ನಗರ ಬೆಳೆಯುತ್ತಿದೆ ಇದಕ್ಕೆ ಹೊಂದಿಕೊಂಡಿರುವ ೮ ಗ್ರಾಮ ಪಂಚಾಯಿತಿಗಳಲ್ಲಿ ಸುಮಾರು ೮೦ ಸಾವಿರ ಜನರಿದ್ದು, ಪ್ರತಿ ದಿನ ಕೊಳವೆ ಬಾವಿ ನೀರನ್ನೇ ಆಶ್ರಯಿಸಬೇಕಾಗಿದೆ. ಹಾಲಿ ಚಾಲ್ತಿಯಲ್ಲಿರುವ ಅಮೃತ ಯೋಜನೆಯನ್ನು ಈ ಭಾಗದ ನೀರು ಪೂರೈಕೆಗೆ ವಿಸ್ತರಣೆ ಮಾಡಲು ಕಷ್ಟವಾಗಿದೆ ಹಾಗಾಗಿ ಹೇಮಾವತಿ ನದಿಯಿಂದ ಹಾಸನ ಕಸಬಾ ಸಾಲಗಾಮೆ, ಕಟ್ಟಾಯ ಹೋಬಳಿಗಳಿಗೆ ನೀರು ಪೂರೈಸುವ ಹೊಸ ಯೋಜನೆ ಜಾರಿಗೊಳಿಸಿ ಎಂದು ಹೇಳಿದರು.
ಶಾಸಕ ಎ.ಟಿ. ರಾಮಸ್ವಾಮಿ ಮಾತನಾಡಿ, ಅರಕಲಗೂಡು ಕ್ಷೇತ್ರದಲ್ಲಿ ಕಾವೇರಿ-ಹೇಮಾವತಿ ನದಿ ಹರಿದರೂ ಇನ್ನೂ ಅನೇಕ ಗ್ರಾಮಗಳಲ್ಲಿ ಕುಡಿಯುವ ನೀರು ಪೋರೈಕೆಯಾಗಿಲ, ಹಾಗಾಗಿ ಇದನ್ನು ಪೂರಕವಾಗಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕು, ಕೆರೆಗಳನ್ನು ತುಂಬಿಸುವ ಕಾಮಗಾರಿಗಳು ನಡೆಯಬೇಕು ಎಂದರು.
ಇದೇ ವೇಳೆ ಸಭೆಯಲ್ಲಿ ಅರಸೀಕೆರೆ ಹಾಗೂ ಇತರೆ ಕಡೆಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸದೆ ಇರುವ ಬಗ್ಗೆ ಶಾಸಕರು ಪ್ರಸ್ತಾಪಿಸಿದರು.
ಸಚಿವರಾದ ಈಶ್ವರಪ್ಪ ಅವರು ಮಾತನಾಡಿ ಈ ಬಗ್ಗೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿಯಲ್ಲಿ ವ್ಯತ್ಯಾಸವಿದ್ದು ೮ ದಿನಗಳೊಳಗೆ ಸಮಗ್ರ ಪರಿಶೀಲನೆ ನಡೆಸಿ ತಮಗೆ ವರದಿ ಸಲ್ಲಿಸುವಂತೆ ಸೂಚನೆ ನೀಡಿದರು.
ಪ್ರತಿ ಗ್ರಾಮ ಪಂಚಾಯಿತಿಗೆ ಕಸ ವಿಲೇವಾರಿ ಘಟಕ ಸ್ಥಾಪನೆಗೆ ಕೇಂದ್ರ ಸರ್ಕಾರದಿಂದ ೨೦ ಲಕ್ಷ ರೂಪಾಯಿಗಳ ನೆರವು ನೀಡಲಾಗುವುದು, ಆದರೆ ಜಿಲ್ಲೆಯಲ್ಲಿ ೨೬೭ ಪಂಚಾಯಿತಿಗಳಲ್ಲಿ ಕೇವಲ ೩೫ ಗ್ರಾಮ ಪಂಚಾಯಿತಿಗಳಲ್ಲಿ ಮಾತ್ರ ಪ್ರಗತಿ ಸಾಧಿಸಲಾಗಿದೆ. ಹಾಗಾಗಿ ಶಾಸಕರುಗಳು ವಿಶೇಷ ಗಮನ ಹರಿಸಿ ಎಲ್ಲಾ ಪಂಚಾಯಿತಿಗಳಲ್ಲಿ ಜಾಗ ಒದಗಿಸಬೇಕು. ಹಲವು ಗ್ರಾಮ ಪಂಚಾಯಿತಿಗಳು ಸೇರಿ ಒಂದೇ ಕಡೆ ವ್ಯವಸ್ಥಿತ ಘಟಕ ಸ್ಥಾಪಿಸಬಹುದು ಎಂದು ಸಚಿವರು ಹೇಳಿದರು.
ಶಾಸಕರುಗಳು ಮಾತನಾಡಿ ಯೋಜನೆ ಅನುಷ್ಠಾನದ ಬಗ್ಗೆ ಸೂಕ್ತ ಮಾರ್ಗ ಸೂಚಿಯನ್ನು ಪೂರೈಸಿ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿ ಎಂದರಲ್ಲದೆ ಸರ್ಕಾರಿ ಉದ್ದೇಶಗಳಿಗೆ ಈಗ ಜಾಗ ಕಾಯ್ದಿರಿಸದಿದ್ದರೆ ಮುಂದೆ ಯೋಜನೆಗಳ ಅನುಷ್ಠಾನ ಕಷ್ಟವಾಗಲಿದೆ ಎಂದರು.
ಗ್ರಾಮೀಣಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಸ್ಚಚ್ಛತೆ ಬಗ್ಗೆ ಗರಿಷ್ಠ ನಿಗಾವಹಿಸಬೇಕು ಹಸಿಕಸ, ಒಣ ಕಸಗಳ ವರ್ಗೀಕರಣ, ಪ್ಲಾಸ್ಟಿಕ್ ಸಂಪೂರ್ಣ ನಿಷೇಧ ಮತ್ತು ವ್ಯವಸ್ಥಿತ ವಿಲೇವಾರಿಯಾಗಬೇಕು, ಅದೇರೀತಿ ಶೌಚಾಲಯಗಳ ನಿರ್ಮಾಣ ಸೌಲಭ್ಯದಿಂದ ಹೊರಗುಳಿದಿರುವ ಜನರನ್ನು ಗುರುತಿಸಿ ಸವಲತ್ತು ನೀಡಿ ಎಂದರು.
ಉದ್ಯೋಗ ಖಾತರಿ ಯೋಜನೆ ಅನುಷ್ಠಾನ ವೇಳೆ ೬೦:೪೦ ರ ಅನುಪಾತ ನಿರ್ವಹಣೆ ಮಾಡಬೇಕು, ಕೇಂದ್ರದ ಮಾನದಂಡದನ್ವಯ ನೈಸರ್ಗಿಕ ಸಂಪನ್ಮೂಲ ರಕ್ಷಣೆ ಬಗ್ಗೆ ಹೆಚ್ಚು ಆದ್ಯತೆ ನೀಡಿ ಎಂದರು.
ಶಾಸಕ ಪ್ರೀತಂ ಜೆ ಗೌಡ ಹಾಗೂ ಎ.ಟಿ. ರಾಮಸ್ವಾಮಿ ಮಾತನಾಡಿ ಈ ಅನುಪಾತವನ್ನು ತಾಲ್ಲೂಕುವಾರು ಅನ್ವಯ ಮಾಡಿ ನಿಗಧಿಪಡಿಸಿಕೊಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಯಾಗಿ ಸಚಿವರಾದ ಕೆ.ಎಸ್. ಈಶ್ವರಪ್ಪ ಅವರು ಎಲ್ಲಾ ತಾಲ್ಲೂಕುಗಳನ್ನು ಪ್ರತ್ಯೇಕ ಸಮಾನ ಅನುಪಾತ ನಿಗಧಿಪಡಿಸಿ ಕಾಮಗಾರಿ ಅನುಮೋದನೆ ನೀಡುವಂತೆ ಸೂಚಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಕೆರೆಗಳ ಅಭಿವೃದ್ಧಿಗೆ ಉಪಸಮಿತಿಗಳನ್ನು ರಚಿಸಬೇಕು ಹಾಗೂ ಪ್ರತಿ ಅಭಿವೃದ್ಧಿ ಕಾಮಗಾರಿಗಳ ದಾಖಲಾತಿಗಳನ್ನು ನೀಡಬೇಕು ಎಂದು ಪ್ರಧಾನ ಕಾರ್ಯದರ್ಶಿ ಎಲ್.ಕೆ. ಅತೀಕ್ ಹೇಳಿದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶ್ವೇತಾದೇವರಾಜ್ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯಿವ ನೀರು ಸರಬರಾಜು ಹಾಗೂ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಅನುಷ್ಠಾನಕ್ಕೆ ಇಂಜಿನಿಯರ್‌ಗಳ ಕೊರತೆ ಇದೆ ಅದನ್ನು ಆದಷ್ಟು ಬೇಗ ಭರ್ತಿಮಾಡಿ ಕೊಡಿ ಎಂದು ಕೋರಿದರು.
ಇದಲ್ಲದೆ ಜಿಲ್ಲೆಯ ಗ್ರಾಮಾಭಿವೃದ್ಧಿ ಯೋಜನೆಗಳಿಗೆ ಹೆಚ್ಚಿನ ಅನುದಾನ ಒದಗಿಸುವಂತೆ ಮನವಿ ಮಾಡಿದರು.
     ಇದೇ ವೇಳೆ ಪಂಚಾಯಿತ್ ರಾಜ್ ಇಲಾಖೆಯ ಕಾಮಗಾರಿಗಳ ಅನುಷ್ಠಾನದ ವೇಳೆ ಹೆಚ್ಚಿನ ತೆರಿಗೆ ಕಡಿತ ಮಾಡಲಾಗುತ್ತದೆ. ಅದರ ನಿರ್ಮಿತಿ ಕೇಂದ್ರ ೧೮ರಷ್ಟು ಕಡಿತ ಮಾಡುತ್ತದೆ. ಹಾಗಾಗಿ ಏಕರೂಪದಲ್ಲಿ ಇದನ್ನು ನಿಗದಿಪಡಿಸುವಂತೆ ಶಾಸಕರು ಕೋರಿದರು.
ಗ್ರಾಮೀಣ ಅಭಿವೃದ್ಧಿ ಇಲಾಖೆ ವ್ಯಾಪ್ತಿಯ ಎಲ್ಲಾ ಯೋಜನೆಗಳ ಬಗ್ಗೆ ಅತ್ಯಂತ ಅಚ್ಚುಕಟ್ಟಾಗಿ ಸಂಕ್ಷಿಪ್ತ ಮಾಹಿತಿಯನ್ನು ಒದಗಿಸಿದರು. ಪ್ರಮುಖವಾಗಿ ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ, ಸ್ವಚ್ಛ ಭಾರತ್ ಅಭಿಯಾನ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ, ಗ್ರಾಮ ವಿಕಾಸ ಮತ್ತು ಗ್ರಾಮೀಣ ಸಂಪರ್ಕ, ವಸತಿ ಯೋಜನೆ ಮತ್ತು ಪಂಚಾಯತ್ ರಾಜ್ ವಿಷಯಗಳ ಕುರಿತು ಪ್ರಗತಿ ಪರಿಶೀಲಿಸಲಾಯಿತು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಅವರು ಜಿಲ್ಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಯುವಜನರ ಪ್ರಗತಿ, ಅನುದಾನ ಹಂಚಿಕೆ, ಕಾಮಗಾರಿಗಳ ಪ್ರಗತಿಯ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ. 


Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.