ETV Bharat / state

ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ: ಕೋಟಾ ಶ್ರೀನಿವಾಸ ಪೂಜಾರಿ

ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂಬ ಸಂಕಟದಿಂದ ಶಾಸಕರು ರಾಜೀನಾಮೆ ನೀಡಿದ್ದಾರೆ ಎಂದು ಮಾಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

author img

By

Published : Jul 6, 2019, 10:16 PM IST

ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ

ಹಾಸನ: ನಾವು ಯಾವ ಆಪರೇಷನ್ ಕಮಲ ಮಾಡಿಲ್ಲ. ಮೈತ್ರಿ ಸರ್ಕಾರದಲ್ಲಿ ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ ಅಂತಾ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ರು.

ಹಾಸನ ನಗರದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಳ್ಳಲಾಗಿರುವ ಕ್ಷೇತ್ರದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸವಾಗದೇ ಬೇಸತ್ತು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಕ್ಕೂ ಬಿಜೆಪಿಗೂ ಯಾವ ಸಂಬಂಧವಿಲ್ಲ. ಕಾಂಗ್ರೆಸ್-ಜೆಡಿಎಸ್ ಕಚ್ಚಾಟದಿಂದ ಮನನೊಂದು ಬಿಜೆಪಿ-ಜೆಡಿಎಸ್ ಶಾಸಕರು ಸ್ವೀಕರ್ ಬಳಿ ಹೋಗಿ ರಾಜೀನಾಮೆ ನೀಡಿದ್ದಾರೆ ಎಂದ್ರು. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಹಾಗೂ ಬಡವರ ಕೆಲಸಗಳು ಮಾಡುತ್ತಿಲ್ಲ ಎಂದು ಮನಸ್ಸಿನಲ್ಲಿ ನೋವು, ಸಂಕಟವನ್ನು ಇಟ್ಟುಕೊಂಡು ರಾಜೀನಾಮೆಗೆ ಮುಂದಾಗಿದ್ದಾರೆ. ಇದರಲ್ಲಿ ನಾವು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆಪರೇಷನ್ ಕಮಲವನ್ನು ಮಾಡಿಲ್ಲ.

ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ: ಕೋಟಾ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್-ಬಿಜೆಪಿ ಸೇರಿ 13 ಜನ ಶಾಸಕರು ರಾಜೀನಾಮೆ ಕೊಟ್ಟರೆ ಸರ್ಕಾರ ಪತನವಾಗುತ್ತದೆ. ಅಷ್ಟು ಜನ ಶಾಸಕರ ರಾಜೀನಾಮೆ ಅಂಗಿಕರವಾದರೆ ಸ್ವಾಭಾವಿಕವಾಗಿ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ನಂತರದಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿಗೆ ಆಹ್ವಾನಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಕೇಂದ್ರ ಬಜೆಟ್‍ನಲ್ಲಿ ಅಪೂರ್ವವಾದ ಅವಕಾಶ ಸಿಕ್ಕಿದೆ ಎಂದ್ರು.

ಹಾಸನ: ನಾವು ಯಾವ ಆಪರೇಷನ್ ಕಮಲ ಮಾಡಿಲ್ಲ. ಮೈತ್ರಿ ಸರ್ಕಾರದಲ್ಲಿ ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ ಅಂತಾ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ರು.

ಹಾಸನ ನಗರದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಳ್ಳಲಾಗಿರುವ ಕ್ಷೇತ್ರದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸವಾಗದೇ ಬೇಸತ್ತು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಕ್ಕೂ ಬಿಜೆಪಿಗೂ ಯಾವ ಸಂಬಂಧವಿಲ್ಲ. ಕಾಂಗ್ರೆಸ್-ಜೆಡಿಎಸ್ ಕಚ್ಚಾಟದಿಂದ ಮನನೊಂದು ಬಿಜೆಪಿ-ಜೆಡಿಎಸ್ ಶಾಸಕರು ಸ್ವೀಕರ್ ಬಳಿ ಹೋಗಿ ರಾಜೀನಾಮೆ ನೀಡಿದ್ದಾರೆ ಎಂದ್ರು. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಹಾಗೂ ಬಡವರ ಕೆಲಸಗಳು ಮಾಡುತ್ತಿಲ್ಲ ಎಂದು ಮನಸ್ಸಿನಲ್ಲಿ ನೋವು, ಸಂಕಟವನ್ನು ಇಟ್ಟುಕೊಂಡು ರಾಜೀನಾಮೆಗೆ ಮುಂದಾಗಿದ್ದಾರೆ. ಇದರಲ್ಲಿ ನಾವು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಆಪರೇಷನ್ ಕಮಲವನ್ನು ಮಾಡಿಲ್ಲ.

ಶಾಸಕರೇ ಬೇಸತ್ತು ರಾಜೀನಾಮೆ ನೀಡಿದ್ದಾರೆ: ಕೋಟಾ ಶ್ರೀನಿವಾಸ ಪೂಜಾರಿ

ಕಾಂಗ್ರೆಸ್-ಬಿಜೆಪಿ ಸೇರಿ 13 ಜನ ಶಾಸಕರು ರಾಜೀನಾಮೆ ಕೊಟ್ಟರೆ ಸರ್ಕಾರ ಪತನವಾಗುತ್ತದೆ. ಅಷ್ಟು ಜನ ಶಾಸಕರ ರಾಜೀನಾಮೆ ಅಂಗಿಕರವಾದರೆ ಸ್ವಾಭಾವಿಕವಾಗಿ ಸರ್ಕಾರ ಬಹುಮತ ಕಳೆದುಕೊಳ್ಳುತ್ತದೆ. ನಂತರದಲ್ಲಿ ಸರ್ಕಾರ ರಚನೆಗಾಗಿ ಬಿಜೆಪಿಗೆ ಆಹ್ವಾನಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದೇ ವೇಳೆ ಕೇಂದ್ರ ಬಜೆಟ್‍ನಲ್ಲಿ ಅಪೂರ್ವವಾದ ಅವಕಾಶ ಸಿಕ್ಕಿದೆ ಎಂದ್ರು.

Intro:ಹಾಸನ: ನಾವು ಯಾವ ಆಪರೇಷನ್ ಕಮಲ ಮಾಡಿಲ್ಲ
ಶಾಸಕರೆ ಬೇಸತ್ತು ರಾಜೀನಾಮೆ ನೀಡಿದ್ದಾರೆ ಅಂತ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದ್ರು.

ಹಾಸನ ನಗರದಲ್ಲಿ ಬಿಜೆಪಿ ಪಕ್ಷದಿಂದ ಹಮ್ಮಿಕೊಳ್ಳಲಾಗಿರುವ ಕ್ಷೇತ್ರದ ಸದಸ್ಯತ್ವ ಅಭಿಯಾನ ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸವಾಗದೇ ಬೇಸತ್ತು ಶಾಸಕರುಗಳೇ ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್-ಜೆಡಿಎಸ್ ಶಾಸಕರು ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಾಮಾನಕ್ಕೂ ಬಿಜೆಪಿಗೂ ಯಾವ ಸಂಬಂಧವಿಲ್ಲ. ಕಾಂಗ್ರೆಸ್-ಜೆಡಿಎಸ್ ಕಚ್ಚಾಟದಿಂದ ಮನನೊಂದು ಬಿಜೆಪಿ-ಜೆಡಿಎಸ್ ಶಾಸಕರು ನೂಂದು ಸ್ವೀಕರ್ ಬಳಿ ಹೋಗಿ ರಾಜೀನಾಮೆ ನೀಡಿದ್ದಾರೆ. ರಾಜ್ಯದಲ್ಲಿ ಯಾವ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಹಾಗೂ ಬಡವರ ಕೆಲಸಗಳು ಮಾಡುತ್ತಿಲ್ಲ ಎಂದು ಮನಸ್ಸಿನಲ್ಲಿ ನೋವು, ಸಂಕಟವನ್ನು ಇಟ್ಟುಕೊಂಡು ರಾಜೀನಾಮೆಗೆ ಮುಂದಾಗಿದ್ದಾರೆ ಎಂದರು.

ಈ ವೇಳೆ ಸ್ಪೀಕರ್ ಕೊಠಡಿಗೆ ಹೋದಂತ ಸಮಯದಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಶಾಸಕರ ಬಳಿ ಇದ್ದ ರಾಜೀನಾಮೆ ಪತ್ರವನ್ನು ಬಲವಂತವಾಗಿ ಕಸಿದುಕೊಂಡು ಹರಿದು ಹಾಕಿದ್ದಾರೆ. ಇಂತಹ ಸನ್ನಿವೇಶ ಗಮನಿಸಿದರೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಆತಂಕ ಉಂಟು ಮಾಡಿದೆ.
ಇದರಲ್ಲಿ ನಾವು ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಬಿಜೆಪಿ ಆಪರೇಷನ್ ಕಮಲವನ್ನು ಮಾಡಿರುವುದಿಲ್ಲ. ಇತರೆ ಪಕ್ಷದ ಆಂತರಿಕ ವಿಚಾರಗಳಲ್ಲಿ ಬಿಜೆಪಿಯ ಯಾವ ಪಾತ್ರ ಇರುವುದಿಲ್ಲ. ಸಮನ್ವಯ ಸಮಿತಿ ಅಧ್ಯಕ್ಷರಾದ ಮಾಜಿ ಸಿಎಂ ಸಿದ್ದರಾಮಯ್ಯ ವಿಫಲರಾಗಿದ್ದಾರೆ ಎಂದು ದೂರಿದರು.

ಕಾಂಗ್ರೆಸ್-ಬಿಜೆಪಿ ಸೇರಿ 13 ಜನ ಶಾಸಕರು ರಾಜೀನಾಮೆ ಕೊಟ್ಟರೇ ಸರಕಾರ ಪತನವಾಗುತ್ತದೆ. ನಂತರದಲ್ಲಿ ಸ್ಪೀಕರ್ ರವರು ಸರಕಾರ ರಚನೆ ಮಾಡಲು ಬಿಜೆಪಿಗೆ ಕರೆಯುತ್ತಾರೆ. ರಾಜ್ಯದಲ್ಲಿ ಮೈತ್ರಿ ಸರಕಾರ ರಚನೆಯಾದ ದಿನದಿಂದಲೂ ಗೊಂದಲದ ಗೂಡಾಗಿತ್ತು. ಶಾಸಕರ ರಾಜೀನಾಮೆಯಿಂದ ವಿಶ್ವಾಸದ ಕೊರತೆ ಇಂದು ಬಹಿರಂಗವಾಗಿದೆ ಎಂದರು.

ರಾಜ್ಯದಲ್ಲಿ ಇಷ್ಟೊಂದು ಬರಗಾಲವಿದ್ದರೂ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರನ್ನು ಇಷ್ಟು ದಿವಸ ವಿದೇಶದಲ್ಲಿ ವಾಸ್ತವ್ಯ ಮಾಡಿರುವುದೇ ಅಚ್ಚರಿ. ಅಷ್ಟು ಜನ ಶಾಸಕರ ರಾಜೀನಾಮೆ ಅಂಗಿಕರವಾದರೇ ಸ್ವಾಭಾವಿಕವಾಗಿ ಬಹುಮತ ಕಳೆದುಕೊಳ್ಳುತ್ತದೆ. ನಂತರದಲ್ಲಿ ಸರಕಾರ ರಚನೆಗಾಗಿ ಬಿಜೆಪಿಗೆ ಆಹ್ವಾನಿಸುತ್ತಾರೆ ಎಂದು ವಿಶ್ವಾಸವ್ಯಕ್ತಪಡಿಸಿದರು. ಇಂದಿನ ರಾಜಕೀಯ ಸ್ಥಿತಿ-ಗತಿ ನೋಡಿದರೇ ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷರಾಗಿರುವ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗ್ತಾರೆ ಎಂದು ಭರವಸೆಯ ಮಾತನಾಡಿದ್ರು. ಸ್ಪೀಕರ್ ರಮೇಶ್ ಕುಮಾರ್ ರವರು ಬಾರೀ ಮುತ್ಸದಿಗಳು ಯಾವುದೇ ತಪ್ಪು ಮಾಡಿರುವುದಿಲ್ಲ ಎಂದರು.

ಕೇಂದ್ರದಿಂದ ನೆನ್ನೆ ಮಂಡಿಸಿದ ಬಜೆಟ್‍ನಲ್ಲಿ ಅಪೂರ್ವವಾದ ಅವಕಾಶ ಸಿಕ್ಕಿದೆ. ಆದಾಯ ಮಿತಿಯನ್ನು 5 ಲಕ್ಷಕ್ಕೆ ಏರಿಸಿದೆ. ನೌಕರರಿಗೆ 3 ಸಾವಿರ ರೂ.ಪಿಂಚಣಿಯನ್ನು ಕೊಡಲು ಮುಂದಾಗಿದೆ ಎಂದರು. ದೇಶ ಮತ್ತು ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಹಾಸನದಲ್ಲಿ ಸುಮಾರು 425 ಶಕ್ತಿ ಕೇಂದ್ರಗಳಿವೆ. 925 ಬೂತುಗಳಿದ್ದು, ಎಲ್ಲಾ ಬೂತುಗಳಲ್ಲೂ ಇಂದಿನಿಂದ ಸದಸ್ಯತ್ವ ಅಭಿಯಾನವನ್ನು ಪ್ರಾರಂಭಿಸಲಾಗಿದೆ. 11 ಕೋಟಿ ಸದಸ್ಯರನ್ನ ಹೊಂದಿರುವ ಜಗತ್ತಿನಲ್ಲಿಯೇ ಏಕೈಕ ಪಕ್ಷ ಬಿಜೆಪಿ ಎಂದ್ರು.

ಬೈಟ್ : ಕೋಟಾ ಶ್ರೀನಿವಾಸ ಪೂಜಾರಿ. ಮಾಜಿ ಸಚಿವ

ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕ ಪ್ರೀತಮ್ ಜೆ. ಗೌಡ, ಬಿಜೆಪಿ ಜಿಲ್ಲಾಧ್ಯಕ್ಷ ನವೀಲೆ ಅಣ್ಣಪ್ಪ, ಮುಂತಾದವರಿದ್ದರು. ಇತರರು ಪಾಲ್ಗೊಂಡಿದ್ದರು.Body:0Conclusion:0

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.