ಹಾಸನ: ಶಾಲೆಗೆ ಹೊರಟಿದ್ದ ತಾಯಿ-ಮಗ ಅಪಘಾತದಲ್ಲಿ ಮೃತಪಟ್ಟ ದಾರುಣ ಘಟನೆ ಹಾಸನದ ಬಳಿ ನಡೆದಿದೆ.
ನಗರದ ಬಿ.ಟಿ. ಕೊಪ್ಪಲು ಸಮೀಪ ಸೀಮಾ (32) ಮತ್ತು ಇವರ ಪುತ್ರ ಮಯೂರ (10) ಮೃತಪಟ್ಟಿದ್ದಾರೆ. ಮಗನನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಸೀಮಾ ಕರೆದೊಯ್ಯುತ್ತಿದ್ದರು. ಮಾರ್ಗಮಧ್ಯೆ ಲಾರಿ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದರಿಂದ, ಸ್ಥಳದಲ್ಲೇ ತಾಯಿ-ಮಗ ದುರಂತ ಅಂತ್ಯ ಕಂಡಿದ್ದಾರೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಓದಿ: ನೀರಿನ ನಲ್ಲಿ ವಿಚಾರಕ್ಕೆ ಗ್ರಾಪಂ ಸದಸ್ಯನ ಮೇಲೆ ಹಲ್ಲೆ: ಬೆಂಬಲಿಗರಿಂದ ಪೊಲೀಸ್ ಠಾಣೆಗೆ ಮುತ್ತಿಗೆ ಯತ್ನ