ETV Bharat / state

ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ: ಪರಮೇಶ್ವರ್​ ಆರೋಪ - param

ಬಿಜೆಪಿಗೆ ಭಯ ಹುಟ್ಟಿಸಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್ ಮುಖಂಡರ ಮೇಲೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗಳಿಂದ ದಾಳಿ ನಡೆಸಲಾಗುತ್ತಿದೆ.  ತಮ್ಮ ಸ್ವಾರ್ಥಕ್ಕೆ ಇಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಡಿಸಿಎಂ ಪರಮೇಶ್ವರ್​​ ಆರೋಪಿಸಿದರು.

ಪರಮೇಶ್ವರ್
author img

By

Published : Apr 13, 2019, 4:19 PM IST

ಹಾಸನ: ನರೇಂದ್ರ ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭಾಷಣಗಳಲ್ಲಿ ಸೈನಿಕರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದ್ದು, ಇದನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

ಮೈತ್ರಿ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮಾ ಹಾಗೂ ಬಾಲಕೋಟ್ ದಾಳಿಯನ್ನು ಮೋದಿ ಅವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ. ಆಯೋಗವೂ ಸೈನಿಕರು, ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದೆ. ಬಿಜೆಪಿಗೆ ಭಯ ಹುಟ್ಟಿಸಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್ ಮುಖಂಡರ ಮೇಲೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗಳಿಂದ ದಾಳಿ ನಡೆಸಲಾಗುತ್ತಿದೆ. ತಮ್ಮ ಸ್ವಾರ್ಥಕ್ಕೆ ಇಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.

ಜಿ.ಪರಮೇಶ್ವರ್

ಮೈತ್ರಿ ಸರ್ಕಾರದಲ್ಲಿ ಪರ್ಸೆಂಟೇಜ್ ವ್ಯವಹಾರವಿದೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿ, ನಾನು ಅವರನ್ನು ಪ್ರಶ್ನಿಸುತ್ತೇನೆ. ನಿಮಗೆ ಎಲ್ಲಾ ಮಾಹಿತಿಗಳು ಕ್ಷಣಾರ್ಧದಲ್ಲಿ ಸಿಗುತ್ತವೆ. ಮೈತ್ರಿ ಸರ್ಕಾರ ಯಾವ ಯೋಜನೆಯಲ್ಲಿ, ಯಾವ ಕ್ಷೇತ್ರದಲ್ಲಿ ಪರ್ಸೆಂಟೇಜ್ ತೆಗೆದುಕೊಂಡಿದೆ ಸಾಬೀತು ಮಾಡಬೇಕು. ದೇಶದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜನ ಚುನಾಯಿಸಿದ ಸರ್ಕಾರ ರಾಜ್ಯದಲ್ಲಿ ಇದೆ. ದೇಶದ ಸಂವಿಧಾನದಲ್ಲಿ ಒಕ್ಕೂಟ ವ್ಯವಸ್ಥೆ ಇದೆ. ಸಂವಿಧಾನದ ಗಣತಂತ್ರ ವ್ಯವಸ್ಥೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಣ್ಣ, ತಮ್ಮಂದಿರು, ಕುಟುಂಬದ ರೀತಿ ಇರಬೇಕು. ಹೀಗಿರುವಾಗ ನೀವು ಒಂದು ರಾಜ್ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಹಾಸನ: ನರೇಂದ್ರ ಮೋದಿ ಅಧಿಕಾರ ದುರ್ಬಳಕೆ ಮಾಡಿಕೊಂಡು ಭಾಷಣಗಳಲ್ಲಿ ಸೈನಿಕರ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಲಿದ್ದು, ಇದನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು.

ಮೈತ್ರಿ ನಾಯಕರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪುಲ್ವಾಮಾ ಹಾಗೂ ಬಾಲಕೋಟ್ ದಾಳಿಯನ್ನು ಮೋದಿ ಅವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ. ಆಯೋಗವೂ ಸೈನಿಕರು, ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದೆ. ಬಿಜೆಪಿಗೆ ಭಯ ಹುಟ್ಟಿಸಿರುವ ಕಾಂಗ್ರೆಸ್‌ ಹಾಗೂ ಜೆಡಿಎಸ್ ಮುಖಂಡರ ಮೇಲೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗಳಿಂದ ದಾಳಿ ನಡೆಸಲಾಗುತ್ತಿದೆ. ತಮ್ಮ ಸ್ವಾರ್ಥಕ್ಕೆ ಇಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ಆರೋಪಿಸಿದರು.

ಜಿ.ಪರಮೇಶ್ವರ್

ಮೈತ್ರಿ ಸರ್ಕಾರದಲ್ಲಿ ಪರ್ಸೆಂಟೇಜ್ ವ್ಯವಹಾರವಿದೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿ, ನಾನು ಅವರನ್ನು ಪ್ರಶ್ನಿಸುತ್ತೇನೆ. ನಿಮಗೆ ಎಲ್ಲಾ ಮಾಹಿತಿಗಳು ಕ್ಷಣಾರ್ಧದಲ್ಲಿ ಸಿಗುತ್ತವೆ. ಮೈತ್ರಿ ಸರ್ಕಾರ ಯಾವ ಯೋಜನೆಯಲ್ಲಿ, ಯಾವ ಕ್ಷೇತ್ರದಲ್ಲಿ ಪರ್ಸೆಂಟೇಜ್ ತೆಗೆದುಕೊಂಡಿದೆ ಸಾಬೀತು ಮಾಡಬೇಕು. ದೇಶದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜನ ಚುನಾಯಿಸಿದ ಸರ್ಕಾರ ರಾಜ್ಯದಲ್ಲಿ ಇದೆ. ದೇಶದ ಸಂವಿಧಾನದಲ್ಲಿ ಒಕ್ಕೂಟ ವ್ಯವಸ್ಥೆ ಇದೆ. ಸಂವಿಧಾನದ ಗಣತಂತ್ರ ವ್ಯವಸ್ಥೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಣ್ಣ, ತಮ್ಮಂದಿರು, ಕುಟುಂಬದ ರೀತಿ ಇರಬೇಕು. ಹೀಗಿರುವಾಗ ನೀವು ಒಂದು ರಾಜ್ಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Intro:ಮೋದಿ ಅವರು ಅಧಿಕಾರ ದುರ್ಬಳಕೆ: ಜಿ.ಪರಮೇಶ್ವರ್ ಆರೋಪ

ಹಾಸನ: ನರೇಂದ್ರ ಮೋದಿ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡು ಭಾಷಣಗಳಲ್ಲಿ ಸೈನಿಕರ ಬಗ್ಗೆ ಮಾತನಾಡುತ್ತಿದ್ದಾರೆ.ಇದು ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಆಗಲಿದ್ದು,ಈ ಇದನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತರುತ್ತೇವೆ ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದರು. 
ಪುಲ್ವಾಮ ಹಾಗೂ ಬಾಲಕೋಟ್ ದಾಳಿಯನ್ನು ಮೋದಿ ಅವರು ರಾಜಕೀಯವಾಗಿ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ನಾವು ಚುನಾವಣಾ ಆಯೋಗದ ಗಮನಕ್ಕೆ ತಂದಿದ್ದೇವೆ. ಆಯೋಗವೂ ಸೈನಿಕರು, ದೇಶದ ಭದ್ರತೆಗೆ ಸಂಬಂಧಿಸಿದ ವಿಷಯಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದಿದೆ. ಬಿಜೆಪಿಗೆ ಭಯ ಹುಟ್ಟಿಸುವ ಕಾಂಗ್ರೆಸ್‌ ಹಾಗೂ ಜೆಡಿಎಸ್ ಮುಖಂಡರ ಮೇಲೆ ಜಾರಿ ನಿರ್ದೇಶನಾಲಯ ಹಾಗೂ ಆದಾಯ ತೆರಿಗೆ ಇಲಾಖೆಗಳಿಂದ ದಾಳಿ ನಡೆಸಲಾಗುತ್ತಿದೆ. ತಮ್ಮ ಸ್ವಾರ್ಥಕ್ಕೆ ಇಂತಹ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ಎಂದು ನಗರದಲ್ಲಿ ಮೈತ್ರಿ ನಾಯಕರು ಜಂಟಿ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.
ಮೈತ್ರಿ ಸರ್ಕಾರದಲ್ಲಿ ಪರ್ಸಂಟೇಜ್ ವ್ಯವಹಾರವಿದೆ ಎಂಬ ಪ್ರಧಾನಿ ಮೋದಿ ಆರೋಪಕ್ಕೆ ಪ್ರತಿಕ್ರಿಯಿಸಿ, ನಾವು ಅವರನ್ನು ಪ್ರಶ್ನಿಸುತ್ತೇನೆ. ನಿಮಗೆ ಎಲ್ಲಾ ಮಾಹಿತಿಗಳು ಕ್ಷಣಾರ್ಧದಲ್ಲಿ ಸಿಗುತ್ತವೆ.ಮೈತ್ರಿ ಸರ್ಕಾರ ಯಾವ ಯೋಜನೆಯಲ್ಲಿ, ಯಾವ ಕ್ಷೇತ್ರದಲ್ಲಿ ನಮ್ಮ ಸರ್ಕಾರ ಪರ್ಸೆಂಟೇಜ್ ತೆಗೆದುಕೊಂಡಿದೆ ಸಾಭೀತುಪಡಿಸಬೇಕು.ಇಲ್ಲವಾದರೆ ಇದೊಂದು ಅಕ್ಷಮ್ಯ ದೇಶದ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಜನ ಚುನಾವಯಿಸುವ ಸರ್ಕಾರ ರಾಜ್ಯದಲ್ಲಿ ಇದೆ. ದೇಶದ ಸಂವಿಧಾನದಲ್ಲಿ ಒಕ್ಕೂಟ ವ್ಯವಸ್ಥೆ ಇದೆ. ಸಂವಿಧಾನದ ಗಣತಂತ್ರ ವ್ಯವಸ್ಥೆಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಅಣ್ಣ,ತಮ್ಮಂದಿರು, ಕುಟುಂಬದ ರೀತಿ ಇರಬೇಕು. ಹೀಗಿರುವಾಗ ನೀವು ಒಂದು ರಾಜ್ಯದ ಬಗ್ಗೆ  ಅವಹೇಳಕಾರಿ ಹೇಳಿಕೆ ನೀಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. 
ನಾವು ಕಾಂಗ್ರೆಸ್‌ ಅವಧಿಯಲ್ಲಿ ಅನುಷ್ಠಾನಗೊಳಿಸಿದ ಕಾರ್ಯಕ್ರಮಗಳು, ಯೋಜನೆ ಹಾಗೂ ಅಭಿವದ್ಧಿ ಮುಂಡಿಟ್ಟುಕೊಂಡು ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ. ಬಿಜೆಪಿ ಮತ್ತೊಮ್ಮೆ ಮೋದಿ ಎಂಬ ಅಜೆಂಡಾ ಮುಂದಿಟ್ಟುಕೊಂಡು ಮತ ಕೇಳಲು ಮುಂದಾಗಿದ್ದಾರೆ. ಕಳೆದ 5 ವರ್ಷಗಳಿಂದ ಜನತೆಗೆ ಅವರು ಕೊಟ್ಟಿರುವ ಕಾರ್ಯಕ್ರಮಗಳು ಏನು?. ನಾವು ಮೋದಿಗೆ ಮತ ಕೊಡಬೇಕೊ ಅಥವಾ ದೇಶದ ಅಭಿವದ್ಧಿ ಹಾಗೂ ಸಿದ್ಧಾಂತಕ್ಕೆ ಮತ ಕೊಡಬೇಕಾ ಎಂಬುದಕ್ಕೆ ಜನತೆ ಉತ್ತರಿಸುವರು ಎಂದರು.
ದೇಶದಾದ್ಯಂತ 2019 ರ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಇದು ಬಹಳ ಪ್ರಾಮುಖ್ಯತೆಯಿಂದ ಕೂಡಿದೆ. ಚುನಾವಣೆಯನ್ನ ಇಡೀ ವಿಶ್ವವೇ ಗಮನಿಸುತ್ತಿದೆ.ಭಾರತ ಬಹುದೊಡ್ಡ ಆರ್ಥಿಕ ಶಕ್ತಿಯಾಗಿ ಬೆಳೆಯುತ್ತಿರು ಸಂದರ್ಭದಲ್ಲಿ ಚುನಾವಣೆ ಬಂದಿದೆ. ಒಂದು ದಾರಿ ಅಭಿವದ್ಧಿ ಕಡೆ ಆದರೆ, ಮತ್ತೊಂದು ಸರ್ವಾಧಿಕಾರದ ಧೋರಣೆ ಉದ್ದೇಶ ಇಟ್ಟುಕೊಂಡು ಸಮಾಜ ವಿಭಜಿಸಲು ಹೊರಟಿರುವ ಇನ್ನೊಂದು ದಾರಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಪ್ರತ್ಯೇಕ ಪ್ರತ್ಯೇಕ ಲಿಂಗಾಯತ ಹಾಗೂ ವೀರಶೈವ ಧರ್ಮದ ವಿಚಾರಕ್ಕೆ ಗಹಸಚಿವ ಎಂ.ಬಿ.ಪಾಟೀಲ್ ಹಾಗೂ ಇಂಧನ ಸಚಿವ ಡಿ.ಕೆ.ಶಿವಕುಮಾರ್ ನಡುವಿನ ಹೇಳಿಕೆ ಮಾತನಾಡಿ, ಅದು ಇದೀಗ ಪ್ರಸ್ತುತ. ಅದು ಅವರ ವೈಯಕ್ತಿಕ ಅಭಿಪ್ರಾಯ.ನಾನು ಕೆಪಿಸಿಸಿ ಅಧ್ಯಕ್ಷನಾಗಿದ್ದಾಗ ಪ್ರತ್ಯೇಕ ಲಿಂಗಾಯತ ಹಾಗೂ ವೀರಶೈವ ಧರ್ಮದ ಹೋರಾಟಗಳು ನಡೆಯುತ್ತಿರುವಾಗ ನಾನು ಇದನ್ನೇ ಹೇಳಿದ್ದೆ. ಇದೀಗ ಚುನಾವಣೆ ನಡೆಯುತ್ತಿರುವುದು ದೇಶದ ಹಿತಕ್ಕಾಗಿ. ಇದರ ಬಗ್ಗೆ ಮೊದಲು ಯೋಚಿಸೋಣ ಎಂದರು. 
ನನ್ನ 30 ವರ್ಷಗಳ ರಾಜಕಾರಣ ಅನುಭವದಲ್ಲಿ ಅಭಿವದ್ಧಿ,ಸಾಮಾಜಿಕ ನ್ಯಾಯದ ಕಡೆ ತೀರ್ಪು ಬರುತ್ತಿದೆ. ಈ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರ ಆ ದಾರಿಯನ್ನೇ ಕಂಡುಕೊಂಡಿದೆ.ಹಾಸನ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ಆರ್ ಬಹುಮತಗಳಿಂದ ಗೆಲುವು ಸಾಧಿಸುವರು ಎಂದು ಭವಿಷ್ಯ ನುಡಿದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್‌ ಹಿರಿಯ ಮುಖಂಡ ಹೆಚ್.ಸಿ.ಮಹದೇವಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್‌.ಎಂ.ಆನಂದ್,ಕೆಪಿಸಿಸಿ ಉಪಾಧ್ಯಕ್ಷ ಬಿ.ಶಿವರಾಂ, ಜಿಲ್ಲಾ ಘಟಕದ ಅಧ್ಯಕ್ಷ  ಜಾವಗಲ್ ಮಂಜುನಾಥ್, ಮುಖಂಡರಾದ ಹೆಚ್‌.ಕೆ.ಜವರೇಗೌಡ,ಹೆಚ್‌.ಕೆ.ಮಹೇಶ್ ಇತರರು ಇದ್ದರು. 

– ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ.


Body:0


Conclusion:0

For All Latest Updates

TAGGED:

param
ETV Bharat Logo

Copyright © 2025 Ushodaya Enterprises Pvt. Ltd., All Rights Reserved.