ETV Bharat / state

ಶುಂಠಿ ಶುದ್ಧೀಕರಣದಿಂದ ಕಲುಷಿತಗೊಂಡ ಕೆರೆ ನೀರು.. ಸ್ಥಳಕ್ಕೆ ಅಧಿಕಾರಿಗಳ ಭೇಟಿ,ಪರಿಶೀಲನೆ.. - Mudigare Ginger Cleansing Unit News

ಬಂಟೇನಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುದಿಗೆರೆಯಲ್ಲಿ ಶುಂಠಿ ಶುದ್ಧೀಕರಣ ಘಟಕದಲ್ಲಿ ಶುಂಠಿ ತೊಳೆದ ನೀರಿನಿಂದ ಕೆರೆ ಕಲುಷಿತವಾಗಿದೆ ಎಂಬ ವರದಿ ಈಟಿವಿ ಭಾರತ್​ನಲ್ಲಿ ಪ್ರಕಟವಾದ ಹಿನ್ನೆಲೆ, ಎಚ್ಚೆತ್ತ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿದ್ರು.

ಶುಂಠಿ ಶುದ್ಧೀಕರಣದಿಂದ ಕಲುಷಿತಗೊಂಡ ಕೆರೆ ನೀರು..ಸ್ಥಳಕ್ಕೆ ಅಧಿಕಾರಿಗಳ ಭೇಟಿ,ಪರಿಶೀಲನೆ
author img

By

Published : Oct 12, 2019, 9:06 PM IST

ಹಾಸನ: ಬಂಟೇನಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುದಿಗೆರೆ ಶುಂಠಿ ಶುದ್ಧೀಕರಣ ಘಟಕದಲ್ಲಿ ಶುಂಠಿ ತೊಳೆದ ನೀರಿನಿಂದ ಕೆರೆ ಕಲುಷಿತವಾಗಿದೆ ಎಂಬ ವರದಿ ಈಟಿವಿ ಭಾರತ್​ನಲ್ಲಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿದ್ರು.

ಶುಂಠಿ ಶುದ್ಧೀಕರಣದಿಂದ ಕಲುಷಿತಗೊಂಡ ಕೆರೆ ನೀರು.. ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಶುಂಠಿ ತೊಳೆದ ನೀರು ಹರಿದು ಕೆರೆ ಕಲುಷಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಬಂಟೇನಹಳ್ಳಿ ಗ್ರಾಮ ಪಂಚಾಯತ್‌ ಪಿಡಿಒ ರಾಜಶೇಖರ್​ರೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಶುಂಠಿ ಶುದ್ಧೀಕರಿಸುವ ಘಟಕವನ್ನು ಸ್ಥಾಪಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ಗ್ರಾಮ ಪಂಚಾಯತ್‌ನಿಂದ ಎರಡು ಬಾರಿ ನೋಟಿಸ್ ನೀಡಲಾಗಿದೆ.

ಈ ವ್ಯಕ್ತಿ ಕೆರೆಯನ್ನು ಕೂಡಾ ಒತ್ತುವರಿ ಮಾಡಿದ್ದು, ಮುಂದಿನ ಆದೇಶದವರೆಗೂ ಶುಂಠಿ ಶುದ್ಧೀಕರಣ ಘಟಕದಲ್ಲಿ ಶುಂಠಿ ತೊಳೆಯುವುದನ್ನ ಕೂಡಲೇ ನಿಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೇ, ಒಂದು ವಾರದಲ್ಲಿ ಕಲುಷಿತವಾಗಿರುವ ಕೆರೆಯನ್ನ ಶುಂಠಿ ಶುದ್ದೀಕರಣ ಘಟಕದ ಮಾಲೀಕರು ಅವರ ಸ್ವಂತ ಹಣದಿಂದ ಸ್ವಚ್ಛಗೊಳಿಸಬೇಕು. ಉದಾಸೀನ ತೋರಿದಲ್ಲಿ ತೀವ್ರ ತರಹದ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಹಾಸನ: ಬಂಟೇನಹಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮುದಿಗೆರೆ ಶುಂಠಿ ಶುದ್ಧೀಕರಣ ಘಟಕದಲ್ಲಿ ಶುಂಠಿ ತೊಳೆದ ನೀರಿನಿಂದ ಕೆರೆ ಕಲುಷಿತವಾಗಿದೆ ಎಂಬ ವರದಿ ಈಟಿವಿ ಭಾರತ್​ನಲ್ಲಿ ಪ್ರಕಟವಾಗಿತ್ತು. ಇದರಿಂದ ಎಚ್ಚೆತ್ತ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿದ್ರು.

ಶುಂಠಿ ಶುದ್ಧೀಕರಣದಿಂದ ಕಲುಷಿತಗೊಂಡ ಕೆರೆ ನೀರು.. ಸ್ಥಳಕ್ಕೆ ಅಧಿಕಾರಿಗಳ ಭೇಟಿ, ಪರಿಶೀಲನೆ

ತಾಲೂಕು ಪಂಚಾಯತ್‌ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಶುಂಠಿ ತೊಳೆದ ನೀರು ಹರಿದು ಕೆರೆ ಕಲುಷಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿದರು. ಬಳಿಕ ಮಾತನಾಡಿದ ಅವರು, ಬಂಟೇನಹಳ್ಳಿ ಗ್ರಾಮ ಪಂಚಾಯತ್‌ ಪಿಡಿಒ ರಾಜಶೇಖರ್​ರೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ. ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಶುಂಠಿ ಶುದ್ಧೀಕರಿಸುವ ಘಟಕವನ್ನು ಸ್ಥಾಪಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ. ಅಲ್ಲದೆ ಈಗಾಗಲೇ ಗ್ರಾಮ ಪಂಚಾಯತ್‌ನಿಂದ ಎರಡು ಬಾರಿ ನೋಟಿಸ್ ನೀಡಲಾಗಿದೆ.

ಈ ವ್ಯಕ್ತಿ ಕೆರೆಯನ್ನು ಕೂಡಾ ಒತ್ತುವರಿ ಮಾಡಿದ್ದು, ಮುಂದಿನ ಆದೇಶದವರೆಗೂ ಶುಂಠಿ ಶುದ್ಧೀಕರಣ ಘಟಕದಲ್ಲಿ ಶುಂಠಿ ತೊಳೆಯುವುದನ್ನ ಕೂಡಲೇ ನಿಲ್ಲಿಸುವಂತೆ ಸೂಚಿಸಿದ್ದಾರೆ. ಅಲ್ಲದೇ, ಒಂದು ವಾರದಲ್ಲಿ ಕಲುಷಿತವಾಗಿರುವ ಕೆರೆಯನ್ನ ಶುಂಠಿ ಶುದ್ದೀಕರಣ ಘಟಕದ ಮಾಲೀಕರು ಅವರ ಸ್ವಂತ ಹಣದಿಂದ ಸ್ವಚ್ಛಗೊಳಿಸಬೇಕು. ಉದಾಸೀನ ತೋರಿದಲ್ಲಿ ತೀವ್ರ ತರಹದ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

Intro:(ಈಟಿವಿ ಭಾರತ ಇಂಪ್ಯಾಕ್ಟ್)


ಹಾಸನ : ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುದಿಗೆರೆಯಲ್ಲಿ ಶುಂಠಿ ತೊಳೆದ ನೀರಿನಿಂದ ಕೆರೆ ಕಲುಷಿತವಾಗಿದೆ ಎಂಬ ವರದಿ ಪ್ರಕಟವಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿದ್ರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್, ಶುಂಠಿ ತೊಳೆದ ನೀರು ಹರಿದು ಕೆರೆ ಕಲುಷಿತವಾಗಿರುವ ಸ್ಥಳಕ್ಕೆ ಭೇಟಿ ನೀಡಿ ಮಾತನಾಡಿ, ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಓ ರಾಜಶೇಖರ್ ರೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ ಯಾವುದೇ ಅನುಮತಿ ಪಡೆಯದೆ ಅನಧಿಕೃತವಾಗಿ ಶುಂಠಿ ಶುದ್ಧೀಕರಿಸುವ ಘಟಕವನ್ನು ಸ್ಥಾಪಿಸಿಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಅಲ್ಲದೆ ಈಗಾಗಲೇ ಗ್ರಾಮ ಪಂಚಾಯಿತಿಯಿಂದ ಎರಡು ಬಾರಿ ನೋಟಿಸ್ ನೀಡಲಾಗಿದೆ ಅಲ್ಲದೇ ಈ ವ್ಯಕ್ತಿ ಕೆರೆಯನ್ನು ಕೂಡಾ ಒತ್ತುವರಿ ಮಾಡಿದ್ದು ಮುಂದಿನ ಆದೇಶದವರೆಗೂ ಶುಂಠಿ ಶುದ್ಧೀಕರಣ ಘಟಕದಲ್ಲಿ ಶುಂಠಿ ತೊಳೆಯದಂತೆ ಕೂಡಲೇ ನಿಲ್ಲಿಸುವಂತೆ ಸೂಚಿಸಿ ಒಂದು ವಾರದಲ್ಲಿ ಕಲುಷಿತವಾಗಿರುವ ಕೆರೆಯನ್ನು ಶುಂಠಿ ಶುದ್ದೀಕರಣ ಘಟಕದ ಮಾಲೀಕರು ಅವರ ಹಣದಿಂದ ಕೆರೆ ಸ್ವಚ್ಛಗೊಳಿಸಬೇಕು ಉದಾಸೀನ ತೋರಿದಲ್ಲಿ ತೀವ್ರ ತರಹದ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದ್ದಾರೆ.

ಬೈಟ್-೧ : ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರವಿಕುಮಾರ್.Body:-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦
ETV Bharat Logo

Copyright © 2025 Ushodaya Enterprises Pvt. Ltd., All Rights Reserved.