ETV Bharat / state

ಕಣ್ಮುಂದೆ ಕುಸಿದು ಬಿದ್ದ ಶಾಲೆ ಕಟ್ಟಡದ ಭಾಗ: ಪ್ರಾಣಾಪಾಯದಿಂದ ಮಕ್ಕಳು ಪಾರು

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಚನ್ನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡದ ಗೋಡೆ ಕುಸಿದಿದ್ದು, ಭಾರಿ ಅಪಾಯದಿಂದ ಮಕ್ಕಳು ಪಾರಾಗಿದ್ದಾರೆ.

author img

By

Published : Sep 24, 2019, 12:21 PM IST

ನೆಲಕ್ಕುರುಳಿದ ಸರ್ಕಾರಿ ಶಾಲಾ ಕಟ್ಟಡ

ಹಾಸನ: ಶಾಲಾ ಕಟ್ಟಡದ ಒಂದು ಭಾಗ ನೆಲಕ್ಕುರುಳಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

primary school building collapsed in Hassan
ನೆಲಕ್ಕುರುಳಿದ ಸರ್ಕಾರಿ ಶಾಲಾ ಕಟ್ಟಡದ ಭಾಗ

ತಾಲೂಕಿನ ಚನ್ನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡದಲ್ಲಿ ಇಂದು ಶಾಲೆ ಪ್ರಾರಂಭವಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. ಹಾಗಾಗಿ ಮಕ್ಕಳು ಪ್ರಾಣಾಪಾಯದಿಂದ ದೊಡ್ಡ ದುರಂತ ತಪ್ಪಿದೆ.

ಶಾಲಾ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿದ್ದು, ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಈ ಶಾಲೆಯಲ್ಲಿ ಸುಮಾರು 20 ರಿಂದ 25 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಭಯದ ನಡುವೆಯೇ ಪಾಠ ಕೇಳುವಂತಹ ಪರಿಸ್ಥಿತಿ ಇದೆ. ಸೆಪ್ಟಂಬರ್ 23ರಂದು ತಾಲೂಕಿನಾದ್ಯಂತ ಸುರಿದ ಮಳೆಗೆ ಗೋಡೆ ಮತ್ತಷ್ಟು ಬಿರುಕು ಬಿಟ್ಟಿದ್ದು, ಬೆಳಗ್ಗೆ ಶಾಲೆ ಪ್ರಾರಂಭವಾಗುವ ಮುನ್ನ ನೆಲಕ್ಕೆ ಅಪ್ಪಳಿಸಿದೆ.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಹಾಸನ: ಶಾಲಾ ಕಟ್ಟಡದ ಒಂದು ಭಾಗ ನೆಲಕ್ಕುರುಳಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.

primary school building collapsed in Hassan
ನೆಲಕ್ಕುರುಳಿದ ಸರ್ಕಾರಿ ಶಾಲಾ ಕಟ್ಟಡದ ಭಾಗ

ತಾಲೂಕಿನ ಚನ್ನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡದಲ್ಲಿ ಇಂದು ಶಾಲೆ ಪ್ರಾರಂಭವಾಗುವ ಮುನ್ನವೇ ಈ ದುರ್ಘಟನೆ ಸಂಭವಿಸಿದೆ. ಹಾಗಾಗಿ ಮಕ್ಕಳು ಪ್ರಾಣಾಪಾಯದಿಂದ ದೊಡ್ಡ ದುರಂತ ತಪ್ಪಿದೆ.

ಶಾಲಾ ಕಟ್ಟಡದ ಗೋಡೆಗಳು ಬಿರುಕು ಬಿಟ್ಟಿದ್ದು, ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದ್ರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಈ ಶಾಲೆಯಲ್ಲಿ ಸುಮಾರು 20 ರಿಂದ 25 ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ಭಯದ ನಡುವೆಯೇ ಪಾಠ ಕೇಳುವಂತಹ ಪರಿಸ್ಥಿತಿ ಇದೆ. ಸೆಪ್ಟಂಬರ್ 23ರಂದು ತಾಲೂಕಿನಾದ್ಯಂತ ಸುರಿದ ಮಳೆಗೆ ಗೋಡೆ ಮತ್ತಷ್ಟು ಬಿರುಕು ಬಿಟ್ಟಿದ್ದು, ಬೆಳಗ್ಗೆ ಶಾಲೆ ಪ್ರಾರಂಭವಾಗುವ ಮುನ್ನ ನೆಲಕ್ಕೆ ಅಪ್ಪಳಿಸಿದೆ.

ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Intro:Body:

ಹಾಸನ: ನೋಡ ನೋಡುತ್ತಿದ್ದಂತೆ ಶಾಲಾಕಟ್ಟಡ ಒಂದು ಬಿದ್ದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನಲ್ಲಿ ನಡೆದಿದೆ.  ತಾಲೂಕಿನ ಚನ್ನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಕಟ್ಟಡ ಬಿದ್ದು ಹೋಗಿದ್ದು ಶಾಲೆ ಪ್ರಾರಂಭವಾಗುವ ಮುನ್ನ ದುರ್ಘಟನೆ ಸಂಭವಿಸಿದ್ದರಿಂದ ಸಂಭವಿಸಬಹುದಾದ ದೊಡ್ಡ ದುರಂತ ಒಂದು ತಪ್ಪಿದೆ.



ಕಳೆದ ಮೂರ್ನಾಲ್ಕು ವರ್ಷಗಳಿಂದ ಶಾಲೆಯ ಕಟ್ಟಡ ಬಿರುಕು ಬಿಟ್ಟಿದ್ದು ಈ ಬಗ್ಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ. ಇನ್ನು ಈ ಶಾಲೆಯಲ್ಲಿ ಸುಮಾರು 20ರಿಂದ 25 ಮಕ್ಕಳು ವ್ಯಾಸಂಗ ಮಾಡುತ್ತಿದ್ದು,  ಭಯದ ನಡುವೆಯೇ ಪಾಠ ಪ್ರವಚನ ಕೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ನಿನ್ನೆ ತಾಲೂಕಿನಾದ್ಯಂತ ಸುರಿದ ಮಳೆಗೆ ಗೋಡೆ ಮತ್ತಷ್ಟು ಬಿರುಕು ಬಿಟ್ಟಿದ್ದು ಇಂದು ಬೆಳಗ್ಗೆ ಗ್ರಾಮಸ್ಥರು ನೋಡುನೋಡುತ್ತಿದ್ದಂತೆಯೇ ಶಾಲಾ ಕಟ್ಟಡ ಕಣ್ಣ ಮುಂದೆಯೇ ಬಿದ್ದುಹೋಗಿದೆ. 



ಘಟನಾ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಪುಷ್ಪಲತಾ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.