ETV Bharat / state

ಹಾಸನದಲ್ಲಿ ಹೊಸ ಬಡಾವಣೆ ನಿರ್ಮಾಣ: ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತಾವನೆ

ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಹಾಸನವೂ ಒಂದು. ಆದ್ದರಿಂದ ನಿವೇಶನಗಳಿಗಾಗಿ ಬೇಡಿಕೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ನಗರ ಸಮೀಪ ನೂತನ ಕೃಷ್ಣ ನಗರ ಬಡಾವಣೆ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ ಯೋಜನೆ ರೂಪಿಸುತ್ತಿದೆ.

author img

By

Published : Jul 9, 2019, 9:05 PM IST

Updated : Jul 9, 2019, 11:05 PM IST

ಸುದ್ದಿಗಾರರೊಂದಿಗೆ ಮಾತನಾಡಿದ ಹಾಸನ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ.

ಹಾಸನ: ನಗರ ಸಮೀಪ ನೂತನ ಕೃಷ್ಣ ನಗರ ಬಡಾವಣೆ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ ಯೋಜನೆ ರೂಪಿಸಿದೆ ಎಂದು ಹಾಸನ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಸಮೀಪದ ಕೆಂಚಟ್ಟಳ್ಳಿ, ಬೂವನಹಳ್ಳಿ, ಸಮುದ್ರವಳ್ಳಿ, ಗೇಕರವಳ್ಳಿಯ ಗ್ರಾಮದ ಸುಮಾರು 1,218 ಎಕರೆ ಪ್ರದೇಶದಲ್ಲಿ 15,000 ನಿವೇಶನ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಡಾವಣೆ ನಿರ್ಮಾಣ ಪ್ರಸ್ತಾವನೆಗೆ ಶೀಘ್ರ ಒಪ್ಪಿಗೆ ದೊರೆತರೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹಾಸನ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ.

ಕೃಷ್ಣ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡುವುದಾಗಿ ನಾಲ್ಕು ಗ್ರಾಮದ 2000 ಅಧಿಕ ರೈತರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಕೆಲವು ರೈತರು ಜಮೀನು ನೀಡಲು ಹಿಂದೇಟು ಹಾಕಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆದು ಎಲ್ಲ ರೀತಿಯ ಅಡೆತಡೆಗಳನ್ನು ನಿವಾರಿಸಿ ಬಡಾವಣೆ ನಿರ್ಮಾಣದ ಕಾರ್ಯವನ್ನು ಆದಷ್ಟು ಬೇಗ ಪ್ರಾರಂಭಿಸುವ ವಿಶ್ವಾಸವಿದೆ ಎಂದು ವಿವರಿಸಿದರು.

ಸರ್ಕಾರದ ನಿಯಮದಂತೆ ಶೇ.50ರ ಅನುಪಾತದಲ್ಲಿ ರೈತರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಉದ್ಯಾನವನಕ್ಕೆ ಬೇಕಾದ ಭೂಮಿ ಮೀಸಲಿರಿಸಿ ಉಳಿದ ಸುಮಾರು 600 ಎಕರೆಯಲ್ಲಿ ನಿವೇಶನ ನಿರ್ಮಾಣ ಮಾಡಲಾಗುವುದು. ಅಷ್ಟೇ ಅಲ್ಲದೆ, ಬಡಾವಣೆಯಲ್ಲಿ ಇತ್ತೀಚೆಗೆ ಹುತಾತ್ಮರಾದ ಸೈನಿಕರ ಕುಟುಂಬಕ್ಕೆ ನಿವೇಶನ ನೀಡುವ ಉದ್ದೇಶವನ್ನೂ ಹೊಂದಿದ್ದೇವೆ. ಈ ಹಿಂದೆ ಪ್ರಾಧಿಕಾರದಿಂದ ನಿರ್ಮಾಣವಾದ ಎಸ್.ಎಂ.ಕೃಷ್ಣ ನಗರದ ನಿವೇಶನ ಮಾರಾಟದಿಂದ ಪ್ರಾಧಿಕಾರಕ್ಕೆ ಸುಮಾರು ₹ 250 ಕೋಟಿ ಲಾಭವಾಗಿದೆ. ಅಲ್ಲಿನ ಬಹುತೇಕ ನಿವೇಶನ ಹಂಚಿಕೆ ಮಾಡಲಾಗಿದೆ. ನಿವೇಶನ ಪಡೆದು ಪ್ರಾಧಿಕಾರಕ್ಕೆ ಹಣ ಪಾವತಿಸದ ನಿವೇಶನವನ್ನು ವಶಕ್ಕೆ ಪಡೆ ಹರಾಜು ಮಾಡಲಾಗುವುದು ಎಂದು ತಿಳಿಸಿದರು.

ಹಾಸನ: ನಗರ ಸಮೀಪ ನೂತನ ಕೃಷ್ಣ ನಗರ ಬಡಾವಣೆ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧಿಕಾರ ಯೋಜನೆ ರೂಪಿಸಿದೆ ಎಂದು ಹಾಸನ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಸಮೀಪದ ಕೆಂಚಟ್ಟಳ್ಳಿ, ಬೂವನಹಳ್ಳಿ, ಸಮುದ್ರವಳ್ಳಿ, ಗೇಕರವಳ್ಳಿಯ ಗ್ರಾಮದ ಸುಮಾರು 1,218 ಎಕರೆ ಪ್ರದೇಶದಲ್ಲಿ 15,000 ನಿವೇಶನ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಬಡಾವಣೆ ನಿರ್ಮಾಣ ಪ್ರಸ್ತಾವನೆಗೆ ಶೀಘ್ರ ಒಪ್ಪಿಗೆ ದೊರೆತರೆ ಕಾಮಗಾರಿ ಪ್ರಾರಂಭಿಸಲಾಗುವುದು ಎಂದರು.

ಸುದ್ದಿಗಾರರೊಂದಿಗೆ ಮಾತನಾಡಿದ ಹಾಸನ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಕೆ.ಎಂ.ರಾಜೇಗೌಡ.

ಕೃಷ್ಣ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡುವುದಾಗಿ ನಾಲ್ಕು ಗ್ರಾಮದ 2000 ಅಧಿಕ ರೈತರು ಒಪ್ಪಿಗೆ ಸೂಚಿಸಿದ್ದಾರೆ. ಆದರೆ, ಕೆಲವು ರೈತರು ಜಮೀನು ನೀಡಲು ಹಿಂದೇಟು ಹಾಕಿದ್ದಾರೆ. ಅವರನ್ನು ವಿಶ್ವಾಸಕ್ಕೆ ಪಡೆದು ಎಲ್ಲ ರೀತಿಯ ಅಡೆತಡೆಗಳನ್ನು ನಿವಾರಿಸಿ ಬಡಾವಣೆ ನಿರ್ಮಾಣದ ಕಾರ್ಯವನ್ನು ಆದಷ್ಟು ಬೇಗ ಪ್ರಾರಂಭಿಸುವ ವಿಶ್ವಾಸವಿದೆ ಎಂದು ವಿವರಿಸಿದರು.

ಸರ್ಕಾರದ ನಿಯಮದಂತೆ ಶೇ.50ರ ಅನುಪಾತದಲ್ಲಿ ರೈತರಿಗೆ ನಿವೇಶನ ಹಂಚಿಕೆ ಮಾಡಲಾಗುವುದು. ಉದ್ಯಾನವನಕ್ಕೆ ಬೇಕಾದ ಭೂಮಿ ಮೀಸಲಿರಿಸಿ ಉಳಿದ ಸುಮಾರು 600 ಎಕರೆಯಲ್ಲಿ ನಿವೇಶನ ನಿರ್ಮಾಣ ಮಾಡಲಾಗುವುದು. ಅಷ್ಟೇ ಅಲ್ಲದೆ, ಬಡಾವಣೆಯಲ್ಲಿ ಇತ್ತೀಚೆಗೆ ಹುತಾತ್ಮರಾದ ಸೈನಿಕರ ಕುಟುಂಬಕ್ಕೆ ನಿವೇಶನ ನೀಡುವ ಉದ್ದೇಶವನ್ನೂ ಹೊಂದಿದ್ದೇವೆ. ಈ ಹಿಂದೆ ಪ್ರಾಧಿಕಾರದಿಂದ ನಿರ್ಮಾಣವಾದ ಎಸ್.ಎಂ.ಕೃಷ್ಣ ನಗರದ ನಿವೇಶನ ಮಾರಾಟದಿಂದ ಪ್ರಾಧಿಕಾರಕ್ಕೆ ಸುಮಾರು ₹ 250 ಕೋಟಿ ಲಾಭವಾಗಿದೆ. ಅಲ್ಲಿನ ಬಹುತೇಕ ನಿವೇಶನ ಹಂಚಿಕೆ ಮಾಡಲಾಗಿದೆ. ನಿವೇಶನ ಪಡೆದು ಪ್ರಾಧಿಕಾರಕ್ಕೆ ಹಣ ಪಾವತಿಸದ ನಿವೇಶನವನ್ನು ವಶಕ್ಕೆ ಪಡೆ ಹರಾಜು ಮಾಡಲಾಗುವುದು ಎಂದು ತಿಳಿಸಿದರು.

Intro:ಹಾಸನ; ವೇಗವಾಗಿ ಬೆಳೆಯುತ್ತಿರುವ ಹಾಸನ ನಗರದಲ್ಲಿ ನಿವೇಶನದ ಬೇಡಿಕೆ ದಿನೆ ದಿನೆ ಹೆಚ್ಚುತ್ತಿದ್ದು, ಆ ನಿಟ್ಟಿನಲ್ಲಿ ನಗರ ಸಮೀಪ ನೂತನ ಕೃಷ್ಣ ನಗರ ಬಡಾವಣೆ ನಿರ್ಮಾಣಕ್ಕೆ ನಗರಾಭಿವೃದ್ಧಿ ಪ್ರಾಧೀಕಾರವು ಯೋಜನೆ ರೂಪಿಸಿದೆ ಎಂದು ಹುಡಾ ಅಧ್ಯಕ್ಷ ಕೆ.ಎಂ. ರಾಜೇಗೌಡ ತಿಳಿಸಿದರು.

ನಗರದ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮಧ್ಯಾಹ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರ ಸಮೀಪದ ಕೆಂಚಟ್ಟಳ್ಳಿ, ಬೂವನಹಳ್ಳಿ, ಸಮುದ್ರವಳ್ಳಿ, ಗೇಕರವಳ್ಳಿಯ ಗ್ರಾಮದ ಸುಮಾರು 1218 ಎಕರೆ ಪ್ರದೇಶದಲ್ಲಿ ಒಟ್ಟು 15000 ನಿವೇಶನ ನಿರ್ಮಾಣದ ಯೋಜನೆ ರೂಪಿಸಲಾಗಿದೆ. ಈ ಬಗ್ಗೆ ಸಂಪುರ್ಣ ವಿವರವನ್ನು ರಾಜ್ಯ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಸಹ ಕಳುಹಿಸಲಾಗಿದೆ. ಬಡಾವಣೆ ನಿರ್ಮಾಣ ಪ್ರಸ್ತಾವನೆಗೆ ಅದೃಷ್ಟವಶಾತ್ ಶೀಘ್ರ ಒಪ್ಪಿಗೆ ದೊರೆತರೆ ಕಾಮಗಾರಿ ಪ್ರಾರಂಭಿಸ ಲಾಗುವುದು ಜೊತೆಗೆ ಕೃಷ್ಣ ಬಡಾವಣೆ ನಿರ್ಮಾಣಕ್ಕೆ ಭೂಮಿ ನೀಡುವುದಾಗಿ ನಾಲ್ಕು ಗ್ರಾಮದ ಸುಮಾರು 2000ಕ್ಕೂ ಹೆಚ್ಚು ರೈತರು ಒಪ್ಪಿಗೆ ಸೂಚಿಸಿದ್ದಾರೆ ಎಂದ್ರು.

ಕೆಲವು ರೈತರು ಜಮೀನು ನೀಡಲು ಹಿಂದೇಟು ಹಾಕಿದ್ದು ಅವರನ್ನು ವಿಶ್ವಾಸಕ್ಕೆ ಪಡೆದು ಎಲ್ಲಾ ರೀತಿಯ ಅಡೆತಡೆಗಳನ್ನು ನಿವಾರಿಸಿ ಬಡಾವಣೆ ನಿರ್ಮಾಣದ ಕಾರ್ಯವನ್ನ ಆದಷ್ಟು ಬೇಗ ಪ್ರಾರಂಭಿಸುವ ವಿಶ್ವಾಸವಿದೆ. ಸರ್ಕಾರದ ನಿಯಮದಂತೆ ಶೇ. 50ರಷ್ಟು ಅನುಪಾತದಲ್ಲಿ ರೈತರಿಗೆ ನಿವೇಶನ ಹಂಚಿಕೆ ಮಾಡಲಾಗಿವುದು. ಸಿಎ ಹಾಗೂ ಉದ್ಯಾನವನಕ್ಕೆ ಬೇಕಾದ ಭೂಮಿ ಮೀಸಲಿರಿಸಿ ಉಳಿದ ಸುಮಾರು 600 ಎಕರೆಯಲ್ಲಿ ನಿವೇಶನ ನಿರ್ಮಾಣ ಮಾಡ ಲಾಗುವುದು ಎಂದು ಹೇಳಿದರು.

ಈ ಬಡಾವಣೆಯಲ್ಲಿಯೇ ಇತ್ತೀಚೆಗೆ ಹುತಾತ್ಮರಾದ 5 ಸೈನಿಕರ ಕುಟುಂಬಕ್ಕೆ ನಿವೇಶನ ನೀಡುವ ಉದ್ದೇಶವಿದೆ. ಹಿಂದೆ ಪ್ರಾಧಿಕಾರದಿಂದ ನಿರ್ಮಾಣವಾದ ಎಸ್.ಎಂ. ಕೃಷ್ಣ ನಗರದ ನಿವೇಶನ ಮಾರಾಟದಿಂದ ಪ್ರಾಧಿಕಾರಕ್ಕೆ ಸುಮಾರು 250ಕೋಟಿ ಲಾಭವಾಗಿದೆ. ಅಲ್ಲಿನ ಬಹುತೇಕ ನಿವೇಶನ ಹಂಚಿಕೆ ಮಾಡಲಾಗಿದೆ. ನಿವೇಶನ ಪಡೆದು ಇದುವರೆಗೆ ಪ್ರಾಧಿಕಾರಕ್ಕೆ ಹಣ ಪಾವತಿ ಮಾಡದ ನಿವೇಶನವನ್ನು ವಶಕ್ಕೆ ಪಡದು ಮುರು ಹರಾಜು ಮಾಡಲಾಗುವುದು ಎಂದು ವಿವರ ನೀಡಿದರು.

ಬೈಟ್ : ಕೆ.ಎಂ.ರಾಜೇಗೌಡ, ಹಾಸನ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ.


Body:0


Conclusion:0
Last Updated : Jul 9, 2019, 11:05 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.