ETV Bharat / state

ಪಶು ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಲೆ: ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

author img

By

Published : Dec 5, 2019, 8:17 PM IST

ತೆಲಂಗಾಣದ ಹೈದರಾಬಾದ್​ನಲ್ಲಿ ನಡೆದ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ಹಾಸನದಲ್ಲಿ ಸ್ಪಂದನಾ ಸಿರಿ ವೇದಿಕೆ ನೇತೃತ್ವದಲ್ಲಿ ವಿವಿಧ ಮಹಿಳಾ ಸ್ವಯಂಸೇವಾ ಸಂಸ್ಥೆ ಮತ್ತು ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.

ಪಶು ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ, protest against hyderabad veterinary doctor
ಪಶು ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ಹಾಸನ: ತೆಲಂಗಾಣದ ಹೈದರಾಬಾದ್​ನಲ್ಲಿ ನಡೆದ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ನಗರದಲ್ಲಿ ಸ್ಪಂದನಾ ಸಿರಿ ವೇದಿಕೆ ನೇತೃತ್ವದಲ್ಲಿ ವಿವಿಧ ಮಹಿಳಾ ಸ್ವಯಂಸೇವಾ ಸಂಸ್ಥೆ ಮತ್ತು ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪಶು ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿತು. ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಸುಟ್ಟು ಹಾಕಿರುವ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಆರೋಪಿಗಳಿಗೆ ರಸ್ತೆಯಲ್ಲಿ ಕಲ್ಲು ಹೊಡೆದು ಶಿಕ್ಷಿಸಬೇಕು ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆ ಮೇಲೆ ಅತ್ಯಾಚಾರ ನಡೆದಾಗ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಮಾಜದಲ್ಲಿ ಕಾನೂನು, ನ್ಯಾಯಾಲಯಗಳಿವೆ. ಆದರೆ ಅದನ್ನು ಹೊರತುಪಡಿಸಿ ಪುರುಷರಲ್ಲಿ ಜವಾಬ್ದಾರಿ ಬರಬೇಕು. ಹೆಣ್ಣು ಎಂದರೆ ಏನು? ಆಕೆಯ ಸ್ಥಾನಮಾನ ಏನು? ಆಕೆ ಕೇವಲ ಲೈಂಗಿಕ ಕ್ರಿಯೆಗೆ ಮಾತ್ರ ಸೀಮಿತವಲ್ಲ ಎಂಬುದರ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಸ್ಪಂದನ ಸಿರಿ ವೇದಿಕೆಯ ಹಾಸನ ಜಿಲ್ಲಾ ಮಹಿಳಾ ಸ್ವಯಂಸೇವಾ ಸಂಸ್ಥೆ ಅಧ್ಯಕ್ಷೆ ಸುಮಾ ಆಗ್ರಹಿಸಿದರು.

ಹಾಸನ: ತೆಲಂಗಾಣದ ಹೈದರಾಬಾದ್​ನಲ್ಲಿ ನಡೆದ ಪಶು ವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣ ಖಂಡಿಸಿ ನಗರದಲ್ಲಿ ಸ್ಪಂದನಾ ಸಿರಿ ವೇದಿಕೆ ನೇತೃತ್ವದಲ್ಲಿ ವಿವಿಧ ಮಹಿಳಾ ಸ್ವಯಂಸೇವಾ ಸಂಸ್ಥೆ ಮತ್ತು ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಪಶು ವೈದ್ಯೆ ಅತ್ಯಾಚಾರ ಪ್ರಕರಣ ಖಂಡಿಸಿ ಹಾಸನದಲ್ಲಿ ಪ್ರತಿಭಟನೆ

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣ ತಲುಪಿತು. ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಬರ್ಬರವಾಗಿ ಸುಟ್ಟು ಹಾಕಿರುವ ಆರೋಪಿಗಳಿಗೆ ಉಗ್ರ ಶಿಕ್ಷೆಯಾಗಬೇಕು. ಆರೋಪಿಗಳಿಗೆ ರಸ್ತೆಯಲ್ಲಿ ಕಲ್ಲು ಹೊಡೆದು ಶಿಕ್ಷಿಸಬೇಕು ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.

ಮಹಿಳೆ ಮೇಲೆ ಅತ್ಯಾಚಾರ ನಡೆದಾಗ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಮಾಜದಲ್ಲಿ ಕಾನೂನು, ನ್ಯಾಯಾಲಯಗಳಿವೆ. ಆದರೆ ಅದನ್ನು ಹೊರತುಪಡಿಸಿ ಪುರುಷರಲ್ಲಿ ಜವಾಬ್ದಾರಿ ಬರಬೇಕು. ಹೆಣ್ಣು ಎಂದರೆ ಏನು? ಆಕೆಯ ಸ್ಥಾನಮಾನ ಏನು? ಆಕೆ ಕೇವಲ ಲೈಂಗಿಕ ಕ್ರಿಯೆಗೆ ಮಾತ್ರ ಸೀಮಿತವಲ್ಲ ಎಂಬುದರ ಬಗ್ಗೆ ಅರಿವು ಮೂಡಿಸಬೇಕಿದೆ ಎಂದು ಸ್ಪಂದನ ಸಿರಿ ವೇದಿಕೆಯ ಹಾಸನ ಜಿಲ್ಲಾ ಮಹಿಳಾ ಸ್ವಯಂಸೇವಾ ಸಂಸ್ಥೆ ಅಧ್ಯಕ್ಷೆ ಸುಮಾ ಆಗ್ರಹಿಸಿದರು.

Intro:ಹಾಸನ: ಸಹೋದರಿ ಪ್ರಿಯಾಂಕ ರೆಡ್ಡಿ ಮೇಲೆ ನಡೆದ ದೌರ್ಜನ್ಯ ಮತ್ತು ಬರ್ಬರ ಹತ್ಯೆಯನ್ನು ಖಂಡಿಸಿ ಸ್ಪಂದನಾ ಸಿರಿ ವೇಧಿಕೆ ನೇತೃತ್ವದಲ್ಲಿ ವಿವಿಧ ಮಹಿಳಾ ಸ್ವಯಂಸೇವಾ ಸಂಸ್ಥೆ ಮತ್ತು ಸಂಘಟನೆಗಳಿಂದ ಪ್ರತಿಭಟಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಛೇರಿ ಆವರಣಕ್ಕೆ ಬಂದ ಅವರು, ಮಹಿಳೆಯನ್ನು ಅತ್ಯಾಚಾರ ಮಾಡಿ ಬರ್ಬರವಾಗಿ ಸುಟ್ಟು ಹಾಕಲಾಗಿದೆ. ಇದು ಪ್ರತಿಯೊಬ್ಬರಿಗೂ ಪಾಠವಾಗಬೇಕು. ಇದಕ್ಕೆ ಕಠಿಣ ಕಾನೂನು ಜಾರಿಗೆ ತಂದು ಉಗ್ರವಾದ ಶಿಕ್ಷೆಯಾಗಬೇಕು. ಗಲ್ಲು ಶಿಕ್ಷೆಯಾದರೇ ನೆನಪಾಗುವುದಿಲ್ಲ. ಸಾರ್ವಜನಿಕರಿಂದ ಶಿಕ್ಷೆ ಸಿಗುವಂತಾಗಬೇಕು. ರಸ್ತೆ ರಸ್ತೆಯಲ್ಲಿ ಕಲ್ಲು ಹೊಡೆದು ಆತನಿಗೆ ಶಿಕ್ಷೆ ಕೊಡಬೇಕು ಎಂದು ಸಹೋಧರಿ ಪ್ರಿಯಾಂಕ ರೆಡ್ಡಿ ಮೇಲೆ ನಡೆದ ದೌರ್ಜನ್ಯ ಮತ್ತು ಬರ್ಬರ ಹತ್ಯೆಯ ಬಗ್ಗೆ ಮಾತನಾಡಿ ಆಕ್ರೋಶವ್ಯಕ್ತಪಡಿಸಿದರು. ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಲ್ಲಿ ನೋಡಿದರೇ ಶಿಕ್ಷೆ ನೆನಪಾಗಬೇಕು. ಮಹಿಳೆ ಮೇಲೆ ಅತ್ಯಾಚಾರ ನಡೆದಾಗ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಸಮಾಜದಲ್ಲಿ ಕಾನೂನು, ನ್ಯಾಯಾಲಯಗಳಿವೆ. ಆದರೇ ಅದನ್ನು ಹೊರತುಪಡಿಸಿ ಪುರುಷರಲ್ಲಿ ಜವಬ್ಧಾರಿ ಬರಬೇಕು ಎಂದರು. ಒಂದು ಕುಟುಂಬದಲ್ಲಿರುವ ಎಲ್ಲಾ ಪುರುಷರಿಗೂ ಮೊದಲು ತಿಳುವಳಿಕೆ ಬರಬೇಕು. ಹೆಣ್ಣು ಎಂದರೇ ಏನು, ಆಕೆಯ ಸ್ಥಾನಮಾನ ಏನು, ಕೇವಲ ಲೈಂಗಿಕಕ್ಕೆ ಮಾತ್ರ ಸೀಮಿತವಲ್ಲ ಎಂಬುದನು ಅರಿವು ಮೂಡಿಸುವುದು ಪ್ರಮುಖವಾಗಿದೆ. ಪ್ರತಿ ಹೆಣ್ಣು ಮಕ್ಕಳು ಅವರ ಕುಟುಂಬದಿಂದಲೇ ಜಾಗೃತಿ ಮೂಡಿಸುವ ಕೆಲಸ ಮಾಡಬೇಕು ಎಂದು ಮನವಿ ಮಾಡಿದರು.

ಬೈಟ್ : ಸ್ಪಂದನ ಸಿರಿ ವೇದಿಕೆಯ ಹಾಸನ ಜಿಲ್ಲಾ ಸ್ವಯಂ ಸೇವಾ ಮಹಿಳಾ ಸಂಸ್ಥೆ ಅಧ್ಯಕ್ಷೆ, ಸುಮಾ.Body:- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Conclusion:೦

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.