ETV Bharat / state

ರಾಷ್ಟ್ರೀಯ ಹೆದ್ದಾರಿ 75ರ ಮರು ಡಾಂಬರೀಕರಣಕ್ಕೆ ಆಗ್ರಹಿಸಿ ಪ್ರತಿಭಟನೆ - ನೆನೆಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ

ರಾಷ್ಟ್ರೀಯ ಹೆದ್ದಾರಿ 75ರ ಹಾಸನ-ಸಕಲೇಶಪುರ ರಸ್ತೆ ಮರು ಡಾಂಬರೀಕರಣ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ವಿವಿಧ ಸಂಘಟನೆಗಳು ಅನಿರ್ಧಿಷ್ಟಾವಧಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

ಪ್ರತಿಭಟನೆ
author img

By

Published : Oct 24, 2019, 4:52 AM IST

ಸಕಲೇಶಪುರ: 3 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನ ಮರುಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿ, ಸಾಮಾಜಿಕ ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಾಮಾಜಿಕ ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಮೂರು ವರ್ಷಗಳಿಂದ ರಸ್ತೆಯಲ್ಲಿ ಸಾವು ನೋವುಗಳ ಸಂಭವಿಸಿದ್ದು ಅವರ ಗೋಳುಗಳನ್ನ ಜನಪ್ರತಿನಿಧಿಗಳು ಕೇಳದಂತಾಗಿದ್ದಾರೆ. ಕಳೆದ 2 ತಿಂಗಳ ಹಿಂದೆ ಪ್ರತಿಭಟನೆ ಮಾಡಿದ್ದು, ಕಾಮಗಾರಿ ನಡೆಸಿರುವ ರಾಜ್ ಕಮಲ್ ಕಂಪನಿಯವರು ದಿವಾಳಿಯಾಗಿದ್ದಾರೆ. ಆದ್ದರಿಂದ ಪರ್ಯಾಯ ವ್ಯವಸ್ಥೆಯನ್ನ ಮಾಡುವ ಭರವಸೆ ನೀಡಿದ್ದರು. ಅದು ಭರವಸೆಯಾಗಿಯೇ ಉಳಿದಿದ್ದು, ರಸ್ತೆ ಕಾಮಗಾರಿ ಮುಗಿಸಲು ಯಾವುದೆ ಕ್ರಮ ಕೈಗೊಂಡಿಲ್ಲ. ಒಂದು ಕಡೆ ಕಾಡಾನೆ ಸಮಸ್ಯೆ, ಮತ್ತೊಂದೆಡೆ ಅತಿವೃಷ್ಠಿ-ಅನಾವೃಷ್ಠಿಯಿಂದ ಕಾಫಿತೋಟಗಳು ಹಾಳಾಗಿದ್ದು ಸರ್ಕಾರ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ ಎಂದರು.

ರಸ್ತೆ ತಡೆದು ಪ್ರತಿಭಟನೆ ನಡೆಸಿದರು

ಇನ್ನು ಡಿಸೆಂಬರ್ ಅಂತ್ಯದಲ್ಲಿ ಮುಕ್ತಾಯವಾಗಬೇಕಿದ್ದ ಕಾಮಗಾರಿ ಸ್ಥಗಿತಗೊಂಡಿದೆ. ಚತುಷ್ಪಥ ರಸ್ತೆ ಪೂರ್ಣಗೊಳಿಸಬೇಕೆಂಬ ಬೇಡಿಕೆ ನಮ್ಮದಲ್ಲ. ನಮ್ಮ ಒಂದೇ ಒಂದು ಆಗ್ರಹವೆಂದರೆ ಇರುವ ರಸ್ತೆಯಲ್ಲಿ ಜನರು ಸುರಕ್ಷಿತವಾಗಿ ಪ್ರಯಾಣಿಸಬೇಕು. ಈ ನಿಟ್ಟಿನಲ್ಲಿ ರಸ್ತೆ ಡಾಂಬರೀಕರಣವನ್ನ ಕೂಡಲೆ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳು ಬರೀ ಸುಳ್ಳು ಹೇಳುವುದರಲ್ಲಿ ಕಾಲ ಕಳೆಯುತ್ತಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಕಾಮಗಾರಿ ಪ್ರಾರಂಭಿಸಬೇಕು ಇಲ್ಲದಿದ್ದದಲ್ಲಿ ನಿರಂತರ ಚಳುವಳಿಯ ಮೂಲಕ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಸಕಲೇಶಪುರ: 3 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನ ಮರುಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿ, ಸಾಮಾಜಿಕ ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

ಸಾಮಾಜಿಕ ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ಮಾತನಾಡಿ, ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ರಸ್ತೆ ಸಂಪೂರ್ಣ ಗುಂಡಿಮಯವಾಗಿದೆ. ಮೂರು ವರ್ಷಗಳಿಂದ ರಸ್ತೆಯಲ್ಲಿ ಸಾವು ನೋವುಗಳ ಸಂಭವಿಸಿದ್ದು ಅವರ ಗೋಳುಗಳನ್ನ ಜನಪ್ರತಿನಿಧಿಗಳು ಕೇಳದಂತಾಗಿದ್ದಾರೆ. ಕಳೆದ 2 ತಿಂಗಳ ಹಿಂದೆ ಪ್ರತಿಭಟನೆ ಮಾಡಿದ್ದು, ಕಾಮಗಾರಿ ನಡೆಸಿರುವ ರಾಜ್ ಕಮಲ್ ಕಂಪನಿಯವರು ದಿವಾಳಿಯಾಗಿದ್ದಾರೆ. ಆದ್ದರಿಂದ ಪರ್ಯಾಯ ವ್ಯವಸ್ಥೆಯನ್ನ ಮಾಡುವ ಭರವಸೆ ನೀಡಿದ್ದರು. ಅದು ಭರವಸೆಯಾಗಿಯೇ ಉಳಿದಿದ್ದು, ರಸ್ತೆ ಕಾಮಗಾರಿ ಮುಗಿಸಲು ಯಾವುದೆ ಕ್ರಮ ಕೈಗೊಂಡಿಲ್ಲ. ಒಂದು ಕಡೆ ಕಾಡಾನೆ ಸಮಸ್ಯೆ, ಮತ್ತೊಂದೆಡೆ ಅತಿವೃಷ್ಠಿ-ಅನಾವೃಷ್ಠಿಯಿಂದ ಕಾಫಿತೋಟಗಳು ಹಾಳಾಗಿದ್ದು ಸರ್ಕಾರ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ ಎಂದರು.

ರಸ್ತೆ ತಡೆದು ಪ್ರತಿಭಟನೆ ನಡೆಸಿದರು

ಇನ್ನು ಡಿಸೆಂಬರ್ ಅಂತ್ಯದಲ್ಲಿ ಮುಕ್ತಾಯವಾಗಬೇಕಿದ್ದ ಕಾಮಗಾರಿ ಸ್ಥಗಿತಗೊಂಡಿದೆ. ಚತುಷ್ಪಥ ರಸ್ತೆ ಪೂರ್ಣಗೊಳಿಸಬೇಕೆಂಬ ಬೇಡಿಕೆ ನಮ್ಮದಲ್ಲ. ನಮ್ಮ ಒಂದೇ ಒಂದು ಆಗ್ರಹವೆಂದರೆ ಇರುವ ರಸ್ತೆಯಲ್ಲಿ ಜನರು ಸುರಕ್ಷಿತವಾಗಿ ಪ್ರಯಾಣಿಸಬೇಕು. ಈ ನಿಟ್ಟಿನಲ್ಲಿ ರಸ್ತೆ ಡಾಂಬರೀಕರಣವನ್ನ ಕೂಡಲೆ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳು ಬರೀ ಸುಳ್ಳು ಹೇಳುವುದರಲ್ಲಿ ಕಾಲ ಕಳೆಯುತ್ತಿದ್ದಾರೆ. ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಕಾಮಗಾರಿ ಪ್ರಾರಂಭಿಸಬೇಕು ಇಲ್ಲದಿದ್ದದಲ್ಲಿ ನಿರಂತರ ಚಳುವಳಿಯ ಮೂಲಕ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

Intro:ರಾಷ್ಟ್ರೀಯ ಹೆದ್ದಾರಿ 75 ಮರು ಡಾಂಬರಿಕರಣಕ್ಕೆ ಆಗ್ರಹಿಸಿ ಪ್ರತಿಭಟನೆ:
ಸಕಲೇಶಪುರ : ರಾಷ್ಟ್ರೀಯ ಹೆದ್ದಾರಿ 75 ರ ಹಾಸನ-ಸಕಲೇಶಪುರ ರಸ್ತೆ ಮರು ಡಾಂಬರಿಕರಣ ಕಾಮಗಾರಿಯನ್ನು ತಕ್ಷಣವೇ ಪ್ರಾರಂಭಿಸಬೇಕೆಂದು ಒತ್ತಾಯಿಸಿ ವಿವಿದ ಸಂಘಟನೆಗಳು ಇಂದಿನಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ಪ್ರಾರಂಭಿಸಿದ್ದಾರೆ.

3 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ರಾಷ್ಟ್ರೀಯ ಹೆದ್ದಾರಿ ರಸ್ತೆಯನ್ನ ಮರುಡಾಂಬರೀಕರಣ ಮಾಡಬೇಕು ಎಂದು ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಯಡೇಹಳ್ಳಿ ಮಂಜುನಾಥ್ ನೇತೃತ್ವದಲ್ಲಿ ವಿವಿಧ ಸಂಘ ಸಂಸ್ಥೆಗಳ ಮುಖಂಡರುಗಳು ಬಾಳ್ಳುಪೇಟೆಯ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕೆಲಕಾಲ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ರು.

ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿದ್ದು ರಸ್ತೆ ಸಂಪೂರ್ಣ ಗುಂಡಿಮಯವಾಗಿದ್ದು, ರಾಷ್ಟ್ರೀಯ ಹೆದ್ದಾರಿ ಸಾವಿನ ರಹದಾರಿಯಾಗಿದೆ. ಮೂರು ವರ್ಷಗಳಿಂದ ರಸ್ತೆಯಲ್ಲಿ ಸಾವು ನೋವುಗಳ ಸಂಭವಿಸಿದ್ದು ಅವರ ಗೋಳುಗಳನ್ನ ಜನಪ್ರತಿನಿಧಿಗಳು ಕೇಳದಂತಾಗಿದ್ದಾರೆ. ಕಳೆದ 2 ತಿಂಗಳ ಹಿಂದೆ ಪ್ರತಿಭಟನೆ ಮಾಡಿದ್ದು, ಕಾಮಗಾರಿ ನಡೆಸಿರುವ ರಾಜ್ ಕಮಲ್ ಕಂಪನಿಯವರು ದಿವಾಳಿಯಾಗಿದ್ದಾರೆ. ಅದ್ದರಿಂದ ಪರ್ಯಾಯ ವ್ಯವಸ್ಥೆಯನ್ನ ಮಾಡುವ ಭರವಸೆ ನೀಡಿದ್ರು. ಅದು ಭರವಸೆಯಾಗಿಯೇ ಉಳಿದಿದ್ದು, ರಸ್ತೆ ಕಾಮಗಾರಿ ಮುಗಿಸಲು ಯಾವುದೆ ಕ್ರಮ ಕೈಗೊಂಡಿಲ್ಲ. ಒಂದು ಕಡೆ ಕಾಡಾಣೆ ಸಮಸ್ಯೆ, ಮತ್ತೊಂದೆಡೆ ಅತಿವೃಷ್ಠಿ-ಅನಾವೃಷ್ಠಿಯಿಂದ ಕಾಫಿತೋಟಗಳು ಹಾಳಾಗಿದ್ದು ಸರ್ಕಾರ ಸೂಕ್ತ ಪರಿಹಾರ ಒದಗಿಸುವಲ್ಲಿ ವಿಫಲವಾಗಿದೆ ಎಂದ್ರು.

ಇನ್ನು ಡಿಸೆಂಬರ್ ಅಂತ್ಯದಲ್ಲಿ ಮುಕ್ತಾಯವಾಗಬೇಕಿದ್ದ ಕಾಮಗಾರಿ ಸ್ಥಗಿತಗೊಂಡಿದೆ. ಚತುಷ್ಠಥ ರಸ್ತೆ ಪೂರ್ಣಗೊಳಿಸಬೇಕೆಂಬ ಬೇಡಿಕೆ ನಮ್ಮದಲ್ಲ. ನಮ್ಮ ಒಂದೇ ಒಂದು ಆಗ್ರಹವೆಂದರೆ ಇರುವ ರಸ್ತೆಯಲ್ಲಿ ಜನರು ಸುರಕ್ಷಿತವಾಗಿ ಪ್ರಯಾಣಿಸಬೇಕು. ಈ ನಿಟ್ಟಿನಲ್ಲಿ ರಸ್ತೆ ಮರುಡಾಂಬರಿಕರಣವನ್ನ ಕೂಡಲೆ ಕೈಗೆತ್ತಿಕೊಳ್ಳಬೇಕು. ಅಧಿಕಾರಿಗಳು ಬರಿ ಸುಳ್ಳು ಹೇಳುವುದರಲ್ಲಿ ಕಾಲ ಕಳೆಯುತ್ತಿದ್ದಾರೆ, ತಕ್ಷಣವೇ ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ತಕ್ಷಣ ಕಾಮಗಾರಿ ಪ್ರಾರಂಭಿಸಬೇಕು ಇಲ್ಲದಿದ್ದ ಪಕ್ಷದಲ್ಲಿ ನಿರಂತರ ಚಳುವಳಿಯ ಮೂಲಕ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಶಾಸಕ ಗುರುದೇವ್, ಬಾಳ್ಳು ಬಸವಣ್ಣ, ಹಾನುಬಾಳು ಭಾಸ್ಕರ್, ವೆಂಕಟೇಶ್, ರಾಮಕೃಷ್ಣ, ನೇತ್ರಾ ಮಂಜುನಾಥ್ ಹಾಗೂ ಇತರರು ಉಪಸ್ಥಿತರಿದ್ದರು.


Body:7203289


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.