ETV Bharat / state

ಉಪ ವಿಭಾಗಧಿಕಾರಿ ನಾಗರಾಜು ವರ್ಗಾವಣೆ ಆದೇಶ ರದ್ಧತಿಗೆ ಆಗ್ರಹಿಸಿ ಪ್ರತಿಭಟನೆ

author img

By

Published : Oct 27, 2019, 8:48 AM IST

ದಕ್ಷ, ಪ್ರಾಮಾಣಿಕ  ಉಪ ವಿಭಾಗಧಿಕಾರಿ ಹೆಚ್.ಎಲ್.ನಾಗರಾಜು ಅವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅಪಮಾನ ಮಾಡಲಾಗಿದ್ದು, ಕೂಡಲೇ ವರ್ಗಾವಣೆ ಆದೇಶ ರದ್ದು ಮಾಡುವಂತೆ ಆಗ್ರಹಿಸಿ ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಉಪವಿಭಾಗಧಿಕಾರಿ ಹೆಚ್.ಎಲ್. ನಾಗರಾಜು ವರ್ಗಾವಣೆ ರದ್ದತಿಗೆ ಆಗ್ರಹ: ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಹಾಸನ: ದಕ್ಷ, ಪ್ರಾಮಾಣಿಕ ಉಪ ವಿಭಾಗಧಿಕಾರಿ ಹೆಚ್.ಎಲ್.ನಾಗರಾಜು ಅವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅಪಮಾನ ಮಾಡಲಾಗಿದ್ದು, ಕೂಡಲೇ

ವರ್ಗಾವಣೆ ಆದೇಶ ರದ್ದು ಮಾಡುವಂತೆ ಆಗ್ರಹಿಸಿ ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಹಾಸನದ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಹೆಚ್.ಎಲ್.ನಾಗರಾಜು ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ರಾಜ್ಯದಲ್ಲೇ ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿರುವ ಹೆಚ್.ಎಲ್.ನಾಗರಾಜು ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿರುವುದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ವರ್ಗಾವಣೆ ಮಾಡುವುದು ಶಿಕ್ಷೆಯ ಒಂದು ವಿಧಾನ ಎಂಬ ಮಾತು ಚಾಲ್ತಿಯಲ್ಲಿದೆ. ಪ್ರಾಮಾಣಿಕ ಅಧಿಕಾರಿಗಳಾದ ಡಾ. ನಾಗರಾಜ್ ಅವರು ಇಂತಹ ಶಿಕ್ಷೆಗೆ ನಿಜವಾಗಿಯೂ ಭಾಜನರೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನಾಂಬ ದೇವಾಲಯದ ಆಡಳಿತಾಧಿಕಾರಿಗಳೂ ಆಗಿರುವ ಡಾ. ನಾಗರಾಜು ಅವರು, ದೇವಸ್ಥಾನದ ಯಶಸ್ಸಿಗಾಗಿ ಹಗಲಿರುಳು ಶ್ರಮಿಸಿದ್ದಾರೆ ಎಂಬ ಕಾರಣಕ್ಕಾಗಿ ಅವರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಅಕ್ಟೋಬರ್ 30ರವರೆಗೆ ಕಾರ್ಯನಿರ್ವಹಿಸಲು ಸರಕಾರದಿಂದ ಆದೇಶವಾಗಿದೆ. ಒಬ್ಬ ಅಧಿಕಾರಿಯನ್ನು ದೇವಸ್ಥಾನದ ಕೆಲಸಕ್ಕಷ್ಟೇ ದುಡಿಸಿಕೊಂಡು ಕಳುಹಿಸುವುದು ಮಾನವೀಯ ಲಕ್ಷಣವಲ್ಲ. ಉಪ ವಿಭಾಗಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಕಂದಾಯ ಅದಾಲತ್‌ನಲ್ಲಿ 30 ಸಾವಿರಕ್ಕೂ ಅಧಿಕ ಪ್ರಕರಣಗಳನ್ನ ತ್ವರಿತವಾಗಿ ಇತ್ಯರ್ಥಗೊಳಿಸಿ, ಬಡವರ ಬಾಳಿನ ನಂದಾ ದೀಪವಾಗಿದ್ದಾರೆ. ಇಲಾಖೆಯ ನೌಕರರ ಜೊತೆಗೆ ಸಾರ್ವಜನಿಕ ವಲಯದಲ್ಲೂ ಕೂಡ ವಿಶ್ವಾಸ ಗಳಿಸಿಕೊಂಡಿರುವ ನಾಗರಾಜು ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಮತ್ತೆ ಹಾಸನ ಉಪ ವಿಭಾಗಾಧಿಕಾರಿಗಳಾಗಿ ನಿಯುಕ್ತಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

ಹಾಸನ: ದಕ್ಷ, ಪ್ರಾಮಾಣಿಕ ಉಪ ವಿಭಾಗಧಿಕಾರಿ ಹೆಚ್.ಎಲ್.ನಾಗರಾಜು ಅವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅಪಮಾನ ಮಾಡಲಾಗಿದ್ದು, ಕೂಡಲೇ

ವರ್ಗಾವಣೆ ಆದೇಶ ರದ್ದು ಮಾಡುವಂತೆ ಆಗ್ರಹಿಸಿ ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ

ಹಾಸನದ ಉಪ ವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಡಾ. ಹೆಚ್.ಎಲ್.ನಾಗರಾಜು ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ರಾಜ್ಯದಲ್ಲೇ ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿರುವ ಹೆಚ್.ಎಲ್.ನಾಗರಾಜು ಅವರನ್ನು ಸ್ಥಳ ತೋರಿಸದೆ ವರ್ಗಾವಣೆ ಮಾಡಿರುವುದು ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ವರ್ಗಾವಣೆ ಮಾಡುವುದು ಶಿಕ್ಷೆಯ ಒಂದು ವಿಧಾನ ಎಂಬ ಮಾತು ಚಾಲ್ತಿಯಲ್ಲಿದೆ. ಪ್ರಾಮಾಣಿಕ ಅಧಿಕಾರಿಗಳಾದ ಡಾ. ನಾಗರಾಜ್ ಅವರು ಇಂತಹ ಶಿಕ್ಷೆಗೆ ನಿಜವಾಗಿಯೂ ಭಾಜನರೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಾಸನಾಂಬ ದೇವಾಲಯದ ಆಡಳಿತಾಧಿಕಾರಿಗಳೂ ಆಗಿರುವ ಡಾ. ನಾಗರಾಜು ಅವರು, ದೇವಸ್ಥಾನದ ಯಶಸ್ಸಿಗಾಗಿ ಹಗಲಿರುಳು ಶ್ರಮಿಸಿದ್ದಾರೆ ಎಂಬ ಕಾರಣಕ್ಕಾಗಿ ಅವರ ವರ್ಗಾವಣೆಯನ್ನು ತಾತ್ಕಾಲಿಕವಾಗಿ ತಡೆ ಹಿಡಿಯಲಾಗಿದೆ. ಅಕ್ಟೋಬರ್ 30ರವರೆಗೆ ಕಾರ್ಯನಿರ್ವಹಿಸಲು ಸರಕಾರದಿಂದ ಆದೇಶವಾಗಿದೆ. ಒಬ್ಬ ಅಧಿಕಾರಿಯನ್ನು ದೇವಸ್ಥಾನದ ಕೆಲಸಕ್ಕಷ್ಟೇ ದುಡಿಸಿಕೊಂಡು ಕಳುಹಿಸುವುದು ಮಾನವೀಯ ಲಕ್ಷಣವಲ್ಲ. ಉಪ ವಿಭಾಗಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಕಂದಾಯ ಅದಾಲತ್‌ನಲ್ಲಿ 30 ಸಾವಿರಕ್ಕೂ ಅಧಿಕ ಪ್ರಕರಣಗಳನ್ನ ತ್ವರಿತವಾಗಿ ಇತ್ಯರ್ಥಗೊಳಿಸಿ, ಬಡವರ ಬಾಳಿನ ನಂದಾ ದೀಪವಾಗಿದ್ದಾರೆ. ಇಲಾಖೆಯ ನೌಕರರ ಜೊತೆಗೆ ಸಾರ್ವಜನಿಕ ವಲಯದಲ್ಲೂ ಕೂಡ ವಿಶ್ವಾಸ ಗಳಿಸಿಕೊಂಡಿರುವ ನಾಗರಾಜು ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಮತ್ತೆ ಹಾಸನ ಉಪ ವಿಭಾಗಾಧಿಕಾರಿಗಳಾಗಿ ನಿಯುಕ್ತಿಗೊಳಿಸಬೇಕೆಂದು ಆಗ್ರಹಿಸಿದ್ದಾರೆ.

Intro:ಹಾಸನ: ದಕ್ಷ, ಪ್ರಮಾಣಿಕ, ಕರ್ತವ್ಯ ನಿಷ್ಠ, ದೇಶ ಪ್ರೇಮಿಯಾಗಿರುವ ಉಪವಿಭಾಗಧಿಕಾರಿ ಹೆಚ್.ಎಲ್. ನಾಗರಾಜು ರವರಿಗೆ ಸ್ಥಳ ತೋರಿಸದೇ ವರ್ಗಾವಣೆ ಮಾಡಿ ಅಪಮಾನ ಮಾಡಲಾಗಿದ್ದು, ಕೂಡಲೇ ರದ್ದು ಮಾಡುವಂತೆ ಆಗ್ರಹಿಸಿ ವಿವಿಧ ಜನಪರ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
    ಹಾಸನದ ಉಪವಿಭಾಗಾಧಿಕಾರಿಗಳಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಎಚ್.ಎಲ್.ನಾಗರಾಜು ಅವರನ್ನು ದಿಢೀರ್ ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದು ಅಚ್ಚರಿಯ ಬೆಳವಣಿಗೆಯಾಗಿದೆ. ರಾಜ್ಯದಲ್ಲೇ ಪ್ರಾಮಾಣಿಕ ಅಧಿಕಾರಿ ಎನಿಸಿಕೊಂಡಿರುವ ಹೆಚ್.ಎಲ್. ನಾಗರಾಜು ಅವರನ್ನು ಜಾಗ ತೋರಿಸದೆ ವರ್ಗಾವಣೆ ಮಾಡಿರುವುದು ಜಿಲ್ಲೆ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಇಂತಹ ವರ್ಗಾವಣೆ ಮಾಡುವುದು ಶಿಕ್ಷೆಯ ಒಂದು ವಿಧಾನ ಎಂಬ ಮಾತು ಚಾಲ್ತಿಯಲ್ಲಿದೆ. ಪ್ರಾಮಾಣಿಕ ಅಧಿಕಾರಿಗಳಾದ ಡಾ. ನಾಗರಾಜ್ ಅವರು ಇಂತಹ ಶಿಕ್ಷೆಗೆ ನಿಜವಾಗಿಯೂ ಬಾಜನರೆ? ಎಂಬುದು ಗೊಂದಲಕ್ಕೆ ಕಾರಣವಾಗಿದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ಉಪವಿಭಾಗಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡ ದಿನದಿಂದ ಕಂದಾಯ ಅದಾಲತ್‌ನಲ್ಲಿ ಮೂವತ್ತು ಸಾವಿರಕ್ಕೂ ಅಧಿಕ ಪ್ರಕರಣಗಳನ್ನ ತ್ವರಿತವಾಗಿ ಇತ್ಯರ್ಥಗೊಳಿಸಿ, ಬಡವರ ಬಾಳಿನ ನಂದಾದೀಪವಾಗಿದ್ದಾರೆ. ಕಂದಾಯ ಇಲಾಖೆಯಲ್ಲಿ ಕೇವಲ ಇವರ ಹೆಸರಿನಿಂದಾಗಿಯೇ ಭ್ರಷ್ಠಾಚಾರ ರಹಿತವಾದ ಸಾಕಷ್ಟು ಕೆಲಸಗಳಾದ ನಿದರ್ಶನಗಳಿವೆ. ಇಲಾಖೆಯ ನೌಕರರ ಜೊತೆಗೆ ಸಾರ್ವಜನಿಕ ವಲಯದಲ್ಲೂ ಕೂಡ ವಿಶ್ವಾಸಗಳಿಸಿಕೊಂಡಿರುವ ನಾಗರಾಜ್ ಅವರ ವರ್ಗಾವಣೆಯನ್ನು ರದ್ದುಗೊಳಿಸಿ ಮತ್ತೆ ಹಾಸನ ಉಪ ವಿಭಾಗಾಧಿಕಾರಿಗಳಾಗಿ ನಿಯುಕ್ತಿಗೊಳಿಸಬೇಕೆಂಬುದು ಜಿಲ್ಲೆಯ ಜನರ ಆಶಯವಾಗಿದೆ.
       ಇಲಾಖೆಯ ಕೆಲಸದ ಜೊತೆಗೆ  ಹತ್ತಾರು ಕೆರೆಗಳು, ಕಲ್ಯಾಣಿಗಳ ಪುನರುಜ್ಜೀವನಕ್ಕೆ ಕಾರಣವಾದ, ಸಾವಿರಾರು ಗಿಡಗಳನ್ನು ನೆಟ್ಟು ಅರಣ್ಯೀಕರಣಕ್ಕೆ ಕಟಿಬದ್ದರಾದ, ಹಲವಾರು ಪರಿಸರಪರ ಜಾಗೃತಿ ಕೆಲಸಗಳ ಮೂಲಕ ಕಳೆದ ಎರೆಡೂವರೆ ವರ್ಷಗಳಿಂದ ನಾಡಿನಲ್ಲಿ ಹೆಸರು ಮಾಡಿರುವ ಹಸಿರುಭೂಮಿ ಪ್ರತಿಷ್ಠಾನದ ಮುಖ್ಯ ಜವಾಬ್ದಾರಿಯನ್ನು ತಾವೇ ವಹಿಸಿಕೊಂಡು ಸರ್ಕಾರ ಮತ್ತು ಜನ ಸಹಭಾಗಿತ್ವಕ್ಕಾಗಿ ಎಲ್ಲರನ್ನೂ ಒಗ್ಗೂಡಿಸಿ ಸಾಮುದಾಯಿಕ ಕೆಲಸಗಳ ನೇತ್ರತ್ವವಹಿಸಿ ಪ್ರೇರಕ ಶಕ್ತಿಯಾಗಿ ಕೆಲಸ ಮಾಡುತ್ತಿರುವ ಇವರು ಹಸಿರುಭೂಮಿ ಪ್ರತಿಷ್ಠಾನದ  ಗೌರವಾಧ್ಯಕ್ಷರು ಕೂಡ ಆಗಿದ್ದಾರೆ. ಜಿಲ್ಲೆಯ ಪರಿಸರ ಸಂಬಂಧಿ ಕೆಲಸಗಳಿಗೆ ಇದುವರೆಗೂ ಸಂಪೂರ್ಣ ಬೆಂಬಲವಾಗಿ ನಿಂತಿದ್ದಾರೆ ಎಂದರು.
ಇವರು ಶಾಲಾ ವಿದ್ಯಾರ್ಥಿಗಳ ಬಗ್ಗೆಯೂ ಅತೀವ ಕಾಳಜಿ ಹೊಂದಿರುವ ಅಧಿಕಾರಿಯಾಗಿದ್ದು, ಹಲವಾರು ಸರಕಾರಿ ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳನ್ನು ಗರಿಷ್ಠಮಟ್ಟದಲ್ಲಿ ಉನ್ನತೀಕರಣಗೊಳಿಸಲು, ವಿದ್ಯಾರ್ಥಿಗಳು ಗರಿಷ್ಠ ಅಂಕ ತೆಗೆದುಕೊಳ್ಳುವಂತಾಗಲು ಅಹರ್ನಿಶಿ ಶ್ರಮಿಸುತ್ತಿದ್ದಾರೆ.
         ಹಾಸನಾಂಬ ದೇವಾಲಯದ ಆಡಳಿತಾಧಿಕಾರಿಗಳೂ ಆಗಿರುವ ಡಾ.ನಾಗರಾಜು ಅವರು, ಅದರ ಯಶಸ್ಸಿಗಾಗಿ ಸಕಲ ಸಿದ್ದತೆಯನ್ನು ಹಗಲಿರುಳೂ ಶ್ರಮಿಸಿ ನೋಡಿಕೊಳ್ಳುತ್ತಾ ಬಂದಿದ್ದಾರೆಂಬ ಕಾರಣದಿಂದ ತಾತ್ಕಾಲಿಕವಾಗಿ ಅವರ ವರ್ಗಾವಣೆಯನ್ನು ತಡೆ ಹಿಡಿದಿದ್ದು, ೨೦೧೯ ಅಕ್ಟೋಬರ್ ೩೦ರವರೆಗೆ ಕಾರ್ಯ ನಿರ್ವಹಿಸಲು ಸರಕಾರದಿಂದ ಆದೇಶವಾಗಿದೆ. ಒಬ್ಬ ಅಧಿಕಾರಿಯಾಗಿ ದೇವಸ್ಥಾನದ ಕೆಲಸಕ್ಕಷ್ಟೇ ದುಡಿಸಿಕೊಂಡು ಕಳುಹಿಸುವುದು ಮಾನವೀಯ ಲಕ್ಷಣವಲ್ಲ ಎಂದು ಹೇಳಿದರು.
       ಜಿಲ್ಲೆಯ ಹಿತದೃಷ್ಟಿಯಿಂದ ಹಾಸನ ಉಪವಿಭಾಗಾಧಿಕಾರಿಗಳು ಹಾಗೂ ಅಪರ ಜಿಲ್ಲಾಧಿಕಾರಿಗಳೂ ಆಗಿ ಸೇವೆ ಸಲ್ಲಿಸುತ್ತಿರುವ ಡಾ.ಎಚ್.ಎಲ್.ನಾಗರಾಜು ಅವರ ವರ್ಗಾವಣೆಯನ್ನು ರದ್ದುಪಡಿಸಿ, ಮತ್ತೆ ಇದೇ ಜಾಗಕ್ಕೆ ನಿಯೋಜಿಸಿ, ಕನಿಷ್ಠ ಇನ್ನೆರಡು ವರ್ಷದವರೆಗಾದರೂ ಅವರನ್ನು ಹಾಸನದಲ್ಲಿಯೇ ಮುಂದುವರೆಸಬೇಕೆಂದು ಜಿಲ್ಲಾಡಳಿತಕ್ಕೆ ಮನವಿ ಮಾಡಲಾಯಿತು.
      ಈಸಂದರ್ಭದಲ್ಲಿ ಹಸಿರುಭೂಮಿ ಪ್ರತಿಷ್ಠಾನದ ಅಧ್ಯಕ್ಷರಾದ ವೈ.ಎನ್.ಸುಬ್ಬಸ್ವಾಮಿ, ಟಿ.ಎಚ್.ಅಪ್ಪಾಜಿಗೌಡ ಇತರರು ಪಾಲ್ಗೊಂಡಿದ್ದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.