ETV Bharat / state

ವಿಚಾರ ಮತ್ತು ವಿವೇಕಯುತ ಶಿಕ್ಷಣ ಇಂದಿನ ಅಗತ್ಯ; ಡಾ. ಆರ್. ಓಬಳೇಶ ಘಟ್ಟಿ

author img

By

Published : Feb 14, 2021, 6:32 PM IST

ಲೋಕದ ಡೊಂಕು ನಾನೇಕೆ ತಿದ್ದಬೇಕು ಎಂಬ ಮನೋಧೋರಣೆಯಿಂದ ಸಾಹಿತಿಗಳು, ಬೋಧಕರು ಹೊರ ಬಂದು ಆರೋಗ್ಯಕರ ಸಮಾಜ ಕಟ್ಟಬೇಕು ಎಂದು ಡಾ. ಆರ್. ಓಬಳೇಶ ಘಟ್ಟಿ ಕರೆ ನೀಡಿದರು.

Hassan
ಇದು ಕಲಿಯುಗವಲ್ಲ, ಭ್ರಷ್ಟಾಚಾರ ಯುಗ: ಡಾ. ಆರ್. ಓಬಳೇಶಘಟ್ಟಿ

ಹಾಸನ: ಶಿಲಾಯುಗವಾಯ್ತು, ಸುವರ್ಣ ಯುಗವಾಯ್ತು ಈಗ ಭ್ರಷ್ಟಾಚಾರ ಯುಗವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್​ ಸಮ್ಮೆಳನಾಧ್ಯಕ್ಷ ಡಾ. ಆರ್. ಓಬಳೇಶ ಘಟ್ಟಿ ಆತಂಕ ವ್ಯಕ್ತಪಡಿಸಿದರು.

ಹಾಸನ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಡಾ. ಆರ್. ಓಬಳೇಶ ಘಟ್ಟಿ..

​ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಭವನದಲ್ಲಿ ನಡೆದ ಹಾಸನ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾರ್ಥಕ್ಕಾಗಿ, ಯಾರದ್ದೋ ಹಿತಾಸಕ್ತಿಗಾಗಿ, ಸಾಹಿತ್ಯವಾಗಬಾರದು. ನಾವೆಲ್ಲಾ ಒಂದಲ್ಲ ಒಂದು ದಿನ ಇಲ್ಲಿಂದ ಶಾಶ್ವತವಾಗಿ ನಿರ್ಗಮಿಸುವವರೆ. ಆದರೆ ಮುಂದಿನ ಪೀಳಿಗೆಗೆ ಒಳ್ಳೆಯದನ್ನು ಕೊಡಬೇಕಾಗುತ್ತದೆ. ಒಳ್ಳೆಯದನ್ನು ಉಳಿಸಿ ಹೋಗಬೇಕಾಗುತ್ತದೆ.

ಸಾಹಿತಿಗಳು ಮತ್ತು ಸಾಹಿತ್ಯ ಸಂಘಟಕರ ಬಗ್ಗೆ ತೀವ್ರವಾಗಿ ಮಾತನಾಡುವ ಕಾಲ ಬಂದು ಬಿಟ್ಟಿದೆ. ಸಾಹಿತ್ಯ ಮತ್ತು ಶಿಕ್ಷಣ ಕಲುಷಿತವಾದರೆ ನಮ್ಮ ಜೀವನ ಆಯೋಮಯವಾದೀತು. ಹೀಗಾಗಿ ನಾವುಗಳು ಎಚ್ಚರಿಕೆಯಿಂದ ಸಾಗಬೇಕಾಗಿದೆ. ಶಿಕ್ಷಣ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆಯೊಂದಿಗೆ ವಿಚಾರ ಮತ್ತು ವಿವೇಕಯುತ ಶಿಕ್ಷಣ ನೀಡಬೇಕು. ತಂತ್ರಜ್ಞಾನದ ಯುಗದಲ್ಲಿ ಮಾನವೀಯತೆ ದೂರವಿಟ್ಟು ಸ್ವಾರ್ಥ ಜೀವನಕ್ಕೆ ಮೊರೆ ಹೋಗುತ್ತಿದ್ದೇವೆ. ವಿದ್ಯೆ, ವಿವೇಕ ಮತ್ತು ಪ್ರಾಮಾಣಿಕತೆಗೆ ಬೆಲೆಯಿಲ್ಲದೆ ಪರಿತಪಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸಾಹಿತ್ಯ ಮತ್ತು ಶಿಕ್ಷಣ ಮುಂಚೂಣಿಗೆ ಬರಬೇಕು. ಸಾಹಿತ್ಯ, ಶಿಕ್ಷಣ ದುರ್ಬಲವಾದರೆ ಸಾಮಾಜಿಕ ಸ್ವಾಸ್ಥ್ಯ ಅಯೋಮಯವಾಗಲಿದೆ ಎಂದು ಎಚ್ಚರಿಸಿದರು.

ಲೋಕದ ಡೊಂಕು ನಾನೇಕೆ ತಿದ್ದಬೇಕು ಎಂಬ ಮನೋಧೋರಣೆಯಿಂದ ಸಾಹಿತಿಗಳು, ಬೋಧಕರು ಹೊರ ಬಂದು ಆರೋಗ್ಯಕರ ಸಮಾಜ ಕಟ್ಟಬೇಕು. ಸಾಹಿತ್ಯ ಮತ್ತು ಶಿಕ್ಷಣ ಕಲುಷಿತವಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್‌.ಪ್ರಮೀಳಾ ನಾಯ್ಡು ಮಾತನಾಡಿ, ಕನ್ನಡ ಗಟ್ಟಿಯಾಗಬೇಕಾದರೆ ಸಾಹಿತ್ಯದ ಮೂಲಕ ಸಾಧ್ಯ. ಹೆಚ್ಚು ಸಮ್ಮೇಳನ ಆಯೋಜಿಸಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕು. ಯುವ ಜನತೆ ಹೆಚ್ಚು ಪುಸ್ತಕಗಳನ್ನು ಓದಬೇಕು ಮತ್ತು ಲೇಖನಗಳನ್ನು ಬರೆಯಬೇಕು ಎಂದರು.

ಇನ್ನು ಸಮ್ಮೇಳನಾಧ್ಯಕ್ಷ ಓಬಳೇಶ ಘಟ್ಟಿ ಅವರನ್ನು ಸಾರೋಟ್‌ನಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಸಮ್ಮೇಳನ ಅಂಗವಾಗಿ ಎರಡು ಪುಸ್ತಕ ಮಳಿಗೆ ತೆರೆಯಲಾಗಿತ್ತು.

ಹಾಸನ: ಶಿಲಾಯುಗವಾಯ್ತು, ಸುವರ್ಣ ಯುಗವಾಯ್ತು ಈಗ ಭ್ರಷ್ಟಾಚಾರ ಯುಗವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್​ ಸಮ್ಮೆಳನಾಧ್ಯಕ್ಷ ಡಾ. ಆರ್. ಓಬಳೇಶ ಘಟ್ಟಿ ಆತಂಕ ವ್ಯಕ್ತಪಡಿಸಿದರು.

ಹಾಸನ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿದ ಡಾ. ಆರ್. ಓಬಳೇಶ ಘಟ್ಟಿ..

​ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್​ ಭವನದಲ್ಲಿ ನಡೆದ ಹಾಸನ ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸ್ವಾರ್ಥಕ್ಕಾಗಿ, ಯಾರದ್ದೋ ಹಿತಾಸಕ್ತಿಗಾಗಿ, ಸಾಹಿತ್ಯವಾಗಬಾರದು. ನಾವೆಲ್ಲಾ ಒಂದಲ್ಲ ಒಂದು ದಿನ ಇಲ್ಲಿಂದ ಶಾಶ್ವತವಾಗಿ ನಿರ್ಗಮಿಸುವವರೆ. ಆದರೆ ಮುಂದಿನ ಪೀಳಿಗೆಗೆ ಒಳ್ಳೆಯದನ್ನು ಕೊಡಬೇಕಾಗುತ್ತದೆ. ಒಳ್ಳೆಯದನ್ನು ಉಳಿಸಿ ಹೋಗಬೇಕಾಗುತ್ತದೆ.

ಸಾಹಿತಿಗಳು ಮತ್ತು ಸಾಹಿತ್ಯ ಸಂಘಟಕರ ಬಗ್ಗೆ ತೀವ್ರವಾಗಿ ಮಾತನಾಡುವ ಕಾಲ ಬಂದು ಬಿಟ್ಟಿದೆ. ಸಾಹಿತ್ಯ ಮತ್ತು ಶಿಕ್ಷಣ ಕಲುಷಿತವಾದರೆ ನಮ್ಮ ಜೀವನ ಆಯೋಮಯವಾದೀತು. ಹೀಗಾಗಿ ನಾವುಗಳು ಎಚ್ಚರಿಕೆಯಿಂದ ಸಾಗಬೇಕಾಗಿದೆ. ಶಿಕ್ಷಣ ಪದ್ಧತಿಯಲ್ಲಿ ಅಮೂಲಾಗ್ರ ಬದಲಾವಣೆಯೊಂದಿಗೆ ವಿಚಾರ ಮತ್ತು ವಿವೇಕಯುತ ಶಿಕ್ಷಣ ನೀಡಬೇಕು. ತಂತ್ರಜ್ಞಾನದ ಯುಗದಲ್ಲಿ ಮಾನವೀಯತೆ ದೂರವಿಟ್ಟು ಸ್ವಾರ್ಥ ಜೀವನಕ್ಕೆ ಮೊರೆ ಹೋಗುತ್ತಿದ್ದೇವೆ. ವಿದ್ಯೆ, ವಿವೇಕ ಮತ್ತು ಪ್ರಾಮಾಣಿಕತೆಗೆ ಬೆಲೆಯಿಲ್ಲದೆ ಪರಿತಪಿಸುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಸಾಹಿತ್ಯ ಮತ್ತು ಶಿಕ್ಷಣ ಮುಂಚೂಣಿಗೆ ಬರಬೇಕು. ಸಾಹಿತ್ಯ, ಶಿಕ್ಷಣ ದುರ್ಬಲವಾದರೆ ಸಾಮಾಜಿಕ ಸ್ವಾಸ್ಥ್ಯ ಅಯೋಮಯವಾಗಲಿದೆ ಎಂದು ಎಚ್ಚರಿಸಿದರು.

ಲೋಕದ ಡೊಂಕು ನಾನೇಕೆ ತಿದ್ದಬೇಕು ಎಂಬ ಮನೋಧೋರಣೆಯಿಂದ ಸಾಹಿತಿಗಳು, ಬೋಧಕರು ಹೊರ ಬಂದು ಆರೋಗ್ಯಕರ ಸಮಾಜ ಕಟ್ಟಬೇಕು. ಸಾಹಿತ್ಯ ಮತ್ತು ಶಿಕ್ಷಣ ಕಲುಷಿತವಾಗದಂತೆ ಎಚ್ಚರವಹಿಸಬೇಕು ಎಂದು ಸಲಹೆ ನೀಡಿದರು.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆರ್‌.ಪ್ರಮೀಳಾ ನಾಯ್ಡು ಮಾತನಾಡಿ, ಕನ್ನಡ ಗಟ್ಟಿಯಾಗಬೇಕಾದರೆ ಸಾಹಿತ್ಯದ ಮೂಲಕ ಸಾಧ್ಯ. ಹೆಚ್ಚು ಸಮ್ಮೇಳನ ಆಯೋಜಿಸಿ ಕನ್ನಡ ಭಾಷೆ ಗಟ್ಟಿಗೊಳಿಸಬೇಕು. ಯುವ ಜನತೆ ಹೆಚ್ಚು ಪುಸ್ತಕಗಳನ್ನು ಓದಬೇಕು ಮತ್ತು ಲೇಖನಗಳನ್ನು ಬರೆಯಬೇಕು ಎಂದರು.

ಇನ್ನು ಸಮ್ಮೇಳನಾಧ್ಯಕ್ಷ ಓಬಳೇಶ ಘಟ್ಟಿ ಅವರನ್ನು ಸಾರೋಟ್‌ನಲ್ಲಿ ನಗರದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಸಮ್ಮೇಳನ ಅಂಗವಾಗಿ ಎರಡು ಪುಸ್ತಕ ಮಳಿಗೆ ತೆರೆಯಲಾಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.