ETV Bharat / state

ಹೆಚ್.ಎಲ್ ನಾಗರಾಜು ವರ್ಗಾವಣೆ ರದ್ದು ಮಾಡುವಂತೆ ರೇವಣ್ಣ ಆಗ್ರಹ - hassan latest news

ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹೆಚ್.ಎಲ್ ನಾಗರಾಜು ಅವರ ವರ್ಗಾವಣೆಯನ್ನು ಕೂಡಲೇ ರದ್ದು ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಒತ್ತಾಯಿಸಿದ್ದಾರೆ.

ರೇವಣ್ಣ ಪ್ರತಿಕ್ರಿಯೆ
author img

By

Published : Oct 17, 2019, 8:55 AM IST

ಹಾಸನ: ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹೆಚ್.ಎಲ್ ನಾಗರಾಜು ಅವರ ವರ್ಗಾವಣೆಯನ್ನು ಕೂಡಲೇ ರದ್ದುಪಡಿಸುವಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೆಚ್.ಎಲ್ ನಾಗರಾಜು ವರ್ಗಾವಣೆ ಕುರಿತು ರೇವಣ್ಣ ಪ್ರತಿಕ್ರಿಯೆ

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರೊಂದಿಗೆ ಮಾತನಾಡುತ್ತಾ, ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಾರ್ಯಾಲಯ ಹೇಮಾವತಿ ಜಲಾಶಯ ಯೋಜನೆಯಲ್ಲಿ ಅಕ್ರಮ ಭೂಮಿ ಮಂಜೂರಾತಿ ಬಗ್ಗೆ ಉಪವಿಭಾಗಧಿಕಾರಿಯಾಗಿ ಮತ್ತು ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್.ಎಲ್ ನಾಗರಾಜು ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ಹಿಂದಿನ ಸರ್ಕಾರ ರಚಿಸಿತ್ತು. ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳ ಕಡತಗಳನ್ನೂ ಅವರು ಪರಿಶೀಲಿಸಿದ್ದಾರೆ. ಸಕಲೇಶಪುರ, ಬೇಲೂರು, ಆಲೂರು ಹಾಗೂ ಹಾಸನ ಸೇರಿದಂತೆ ಜಿಲ್ಲೆಯ ಇತರೆ ತಾಲೂಕು ಕಚೇರಿಯಲ್ಲಿ 414 ಅಕ್ರಮ ಕಡತಗಳನ್ನು ಪತ್ತೆ ಹಚ್ಚಿದ್ದು, 1,654 ಎಕರೆ ಭೂ ಅಕ್ರಮ ನಡೆದಿದೆ ಎಂದು ನಾಗರಾಜ್ ಅಂಕಿಅಂಶಗಳ ಸಮೇತ ವರದಿ ನೀಡಿದ್ದರು. ಇದೇ ಹಿನ್ನೆಲೆಯಲ್ಲಿ ಸರ್ಕಾರ ಅವರನ್ನು ವರ್ಗಾವಣೆಗೊಳಿಸಿದೆ ಎಂದು ದೂರಿದರು.

ಹೇಮಾವತಿ ಜಲಾಶಯ ಭೂಮಿ ಅಕ್ರಮದ ಕುರಿತು ಸಂಪೂರ್ಣವಾಗಿ ಪ್ರಾಮಾಣಿಕ ತನಿಖೆ ನಡೆಸಿದ ನಾಗರಾಜ್ ಅವರಿಗೆ ಸರ್ಕಾರ ವರ್ಗಾವಣೆಯ ಉಡುಗೊರೆ ನೀಡಿರುವುದು ಎಷ್ಟು ಸರಿ? ಅವರನ್ನು ಅಪರ ಜಿಲ್ಲಾಧಿಕಾರಿಯನ್ನಾಗಿ ಮಾಡಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ವರದಿ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ ಸಹ ನೀಡಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಅಧಿಕಾರಿ ಎಂದೇ ಹೆಸರು ಪಡೆದಿದ್ದ ಅವರನ್ನು ವರ್ಗಾವಣೆ ಮಾಡುವ ಸರ್ಕಾರದ ಕ್ರಮ ಸರಿಯಲ್ಲ. ಹಾಗಾಗಿ ಕೂಡಲೇ ವರ್ಗಾವಣೆ ಆದೇಶ ರದ್ದುಗೊಳಿಸಬೇಕು ಎಂದು ಯಡಿಯೂರಪ್ಪನವರನ್ನು ಒತ್ತಾಯಿಸಿದ್ರು.

ಎಚ್‌ಆರ್‌ಪಿ ಹಗರಣದ ತನಿಖೆ ವರದಿ ಬಳಿಕ ಇಂತಹ ಕ್ರಮ ಕೈಗೊಂಡಿರುವುದು ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಅಕ್ರಮದಲ್ಲಿ ಯಾವ ಅಧಿಕಾರಿ ಭಾಗಿಯಾಗಿದ್ದರೂ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಿ, ತಕ್ಷಣ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಖಜಾನೆಯಲ್ಲಿ ಇಡಬೇಕು. ಇಲ್ಲವಾದರೆ ಎಲ್ಲವನ್ನು ಸುಟ್ಟು ಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಎಚ್ಚರಿಸಿದರು.

ಹಾಸನಾಂಬ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಅನೇಕರ ಹೆಸರು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ. ಪ್ರೋಟೋಕಾಲ್ ಪಾಲಿಸಬೇಕು ಎಂದರು.

ಹಾಸನ: ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹೆಚ್.ಎಲ್ ನಾಗರಾಜು ಅವರ ವರ್ಗಾವಣೆಯನ್ನು ಕೂಡಲೇ ರದ್ದುಪಡಿಸುವಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಹೆಚ್.ಎಲ್ ನಾಗರಾಜು ವರ್ಗಾವಣೆ ಕುರಿತು ರೇವಣ್ಣ ಪ್ರತಿಕ್ರಿಯೆ

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರೊಂದಿಗೆ ಮಾತನಾಡುತ್ತಾ, ವಿಶೇಷ ಭೂಸ್ವಾಧೀನ ಅಧಿಕಾರಿಗಳ ಕಾರ್ಯಾಲಯ ಹೇಮಾವತಿ ಜಲಾಶಯ ಯೋಜನೆಯಲ್ಲಿ ಅಕ್ರಮ ಭೂಮಿ ಮಂಜೂರಾತಿ ಬಗ್ಗೆ ಉಪವಿಭಾಗಧಿಕಾರಿಯಾಗಿ ಮತ್ತು ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್.ಎಲ್ ನಾಗರಾಜು ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ಹಿಂದಿನ ಸರ್ಕಾರ ರಚಿಸಿತ್ತು. ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳ ಕಡತಗಳನ್ನೂ ಅವರು ಪರಿಶೀಲಿಸಿದ್ದಾರೆ. ಸಕಲೇಶಪುರ, ಬೇಲೂರು, ಆಲೂರು ಹಾಗೂ ಹಾಸನ ಸೇರಿದಂತೆ ಜಿಲ್ಲೆಯ ಇತರೆ ತಾಲೂಕು ಕಚೇರಿಯಲ್ಲಿ 414 ಅಕ್ರಮ ಕಡತಗಳನ್ನು ಪತ್ತೆ ಹಚ್ಚಿದ್ದು, 1,654 ಎಕರೆ ಭೂ ಅಕ್ರಮ ನಡೆದಿದೆ ಎಂದು ನಾಗರಾಜ್ ಅಂಕಿಅಂಶಗಳ ಸಮೇತ ವರದಿ ನೀಡಿದ್ದರು. ಇದೇ ಹಿನ್ನೆಲೆಯಲ್ಲಿ ಸರ್ಕಾರ ಅವರನ್ನು ವರ್ಗಾವಣೆಗೊಳಿಸಿದೆ ಎಂದು ದೂರಿದರು.

ಹೇಮಾವತಿ ಜಲಾಶಯ ಭೂಮಿ ಅಕ್ರಮದ ಕುರಿತು ಸಂಪೂರ್ಣವಾಗಿ ಪ್ರಾಮಾಣಿಕ ತನಿಖೆ ನಡೆಸಿದ ನಾಗರಾಜ್ ಅವರಿಗೆ ಸರ್ಕಾರ ವರ್ಗಾವಣೆಯ ಉಡುಗೊರೆ ನೀಡಿರುವುದು ಎಷ್ಟು ಸರಿ? ಅವರನ್ನು ಅಪರ ಜಿಲ್ಲಾಧಿಕಾರಿಯನ್ನಾಗಿ ಮಾಡಿ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ವರದಿ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ ಸಹ ನೀಡಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಅಧಿಕಾರಿ ಎಂದೇ ಹೆಸರು ಪಡೆದಿದ್ದ ಅವರನ್ನು ವರ್ಗಾವಣೆ ಮಾಡುವ ಸರ್ಕಾರದ ಕ್ರಮ ಸರಿಯಲ್ಲ. ಹಾಗಾಗಿ ಕೂಡಲೇ ವರ್ಗಾವಣೆ ಆದೇಶ ರದ್ದುಗೊಳಿಸಬೇಕು ಎಂದು ಯಡಿಯೂರಪ್ಪನವರನ್ನು ಒತ್ತಾಯಿಸಿದ್ರು.

ಎಚ್‌ಆರ್‌ಪಿ ಹಗರಣದ ತನಿಖೆ ವರದಿ ಬಳಿಕ ಇಂತಹ ಕ್ರಮ ಕೈಗೊಂಡಿರುವುದು ಸರ್ಕಾರದ ದುರಾಡಳಿತಕ್ಕೆ ಸಾಕ್ಷಿಯಾಗಿದೆ. ಅಕ್ರಮದಲ್ಲಿ ಯಾವ ಅಧಿಕಾರಿ ಭಾಗಿಯಾಗಿದ್ದರೂ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಿ, ತಕ್ಷಣ ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಖಜಾನೆಯಲ್ಲಿ ಇಡಬೇಕು. ಇಲ್ಲವಾದರೆ ಎಲ್ಲವನ್ನು ಸುಟ್ಟು ಹಾಕುವ ಸಾಧ್ಯತೆ ಹೆಚ್ಚಿದೆ ಎಂದು ಅವರು ಎಚ್ಚರಿಸಿದರು.

ಹಾಸನಾಂಬ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಅನೇಕರ ಹೆಸರು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲ. ಪ್ರೋಟೋಕಾಲ್ ಪಾಲಿಸಬೇಕು ಎಂದರು.

Intro:ಹಾಸನ; ಪ್ರಮಾಣಿಕವಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದ ಅಧಿಕಾರಿ ಹೆಚ್.ಎಲ್. ನಾಗರಾಜುರವರ ವರ್ಗಾವಣೆಯನ್ನು ಕೂಡಲೇ ರದ್ದು ಮಾಡುವಂತೆ ಮುಖ್ಯಮಂತ್ರಿ ಯಡಿಯೂರಪ್ಪರವರಿಗೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಒತ್ತಾಯಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ವಿಶೇಷ ಭೂ ಸ್ವಾಧಿನ ಅಧಿಕಾರಿಗಳ ಕಾರ್ಯಾಲಯ ಹೇಮಾವತಿ ಜಲಾಶಯ ಯೋಜನೆಯಲ್ಲಿ ಅಕ್ರಮ ಭೂಮಿ ಮಂಜೂರಾತಿ ಬಗ್ಗೆ ಉಪವಿಭಾಗಧಿಕಾರಿಯಾಗಿ ಮತ್ತು ಅಪರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತಿರುವ ಹೆಚ್.ಎಲ್. ನಾಗರಾಜುರವರ ಅಧ್ಯಕ್ಷತೆಯಲ್ಲಿ ಒಂದು ಸಮಿತಿಯನ್ನು ಹಿಂದಿನ ಸರಕಾರ ರಚಿಸಿತ್ತು. ಹಾಸನ ಜಿಲ್ಲೆಯ ಎಲ್ಲಾ ತಾಲೂಕುಗಳ ಕಡತವನ್ನು ಪರಿಶೀಲಿಸಿದರು. ವರದಿ ನೀಡಿರುವುದರಲ್ಲಿ ಸಕಲೇಶಪುರ, ಬೇಲೂರು, ಆಲೂರು ಹಾಗೂ ಹಾಸನ ಸೇರಿದಂತೆ ಜಿಲ್ಲೆಯ ಇತರೆ ತಾಲೂಕು ಕಛೇರಿಯಲ್ಲಿ ೪೧೪ ಕಡತ ಅಕ್ರಮ ಪತ್ತೆ ಹಚ್ಚಿದ್ದು, ೧೬೫೪ ಎಕರೆ ಭೂ ಅಕ್ರಮ ನಡೆದಿದೆ ಎಂದು ಎಸಿ ನಾಗರಾಜ್ ತಮ್ಮ ವರದಿಯಲ್ಲಿ ಅಂಕಿ-ಅಂಶ ನೀಡಿದ ಪರಿಣಾಮ ಇಂದು ಅಪರ ಜಿಲ್ಲಾಧಿಕಾರಿಯಾಗಿಯೂ ಕರ್ತವ್ಯ ನಿರ್ವಹಿಸುತ್ತಿರುವ ಹೆಚ್.ಎಲ್. ನಾಗರಾಜು ವರ್ಗಾವಣೆಯಾಗಲು ಮುಖ್ಯ ಕಾರಣವಾಗಿದೆ ಎಂದು ದೂರಿದರು. ಹೇಮಾವತಿ ಜಲಾಶಯ ಭೂಮಿ ಅಕ್ರಮದ ಕುರಿತು ಸಂಪೂರ್ಣವಾಗಿ ಪ್ರಮಾಣಿಕ ತನಿಖೆ ಮಾಡಿದ ನಾಗರಾಜ್ ಅವರನ್ನು ಸರಕಾರ ವರ್ಗಾವಣೆಯ ಉಡುಗೊರೆ ನೀಡಿರುವುದು ಎಷ್ಟುಸರಿಯಾಗಿದೆ ಎಂದು ಪ್ರಶ್ನಿಸಿದರು. ಅವರನ್ನು ಅಪರ ಜಿಲ್ಲಾಧಿಕಾರಿಯಾಗಿ ಸಹ ಹೆಚ್ಚುವರಿ ಜವಾಬ್ದಾರಿ ನೀಡಲಾಗಿತ್ತು. ವರದಿ ಬಳಿಕ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ದೂರು ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ ಸಹ ನೀಡಿದ್ದಾರೆ. ಜಿಲ್ಲೆಯಲ್ಲಿ ಉತ್ತಮ ಅಧಿಕಾರಿ ಎಂದೆ ಹೆಸರು ಪಡೆದಿದ್ದ ಪ್ರಮಾಣಿಕ ಅಧಿಕಾರಿ ಆದರೆ ಸರಕಾರದ ಕ್ರಮ ಸರಿಯಲ್ಲಾ ಎಂದ ಅವರು ಕೂಡಲೇ ಪ್ರಾಮಾಣಿಕ ಅಧಿಕಾರಿ ಹೆಚ್.ಎಲ್.ನಾಗರಾಜ್ ವರ್ಗಾವಣೆಯನ್ನು ರದ್ದುಗೊಳಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪರವರನ್ನು ಒತ್ತಾಯ ಮಾಡಿದರು. ಹಾಸನಾಂಬ ಜಾತ್ರೆ ಇಂದು ಗುರುವಾರದಿಂದ ಬಾಗಿಲು ತೆಗೆದು ಸಾರ್ವಜನಿಕರಿಗೆ ದರ್ಶನದ ಅವಕಾಶ ಕಲ್ಪಿಸಲಾಗುತ್ತದೆ. ಕೇವಲ ಒಂದು ದಿನ ಇರುವಾಗ ವರ್ಗಾವಣೆ ಮಾಡಿರುವುದು ಸರಿಯಲ್ಲಾ. ಎಚ್‌ಆರ್‌ಪಿ ಹಗರಣ ತನಿಖೆ ವರದಿ ಬಳಿಕ ಇಂತಹ ಕ್ರಮ ದುರಾಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಕಿಡಿಕಾರಿದರು. ಅಕ್ರಮದಲ್ಲಿ ಯಾವ ಅಧಿಕಾರಿ ಇದ್ದರೂ ಅವರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲಿ. ತಕ್ಷಣ ಭೂಮಿಗೆ ಸಂಬಂಧಿಸಿದ ರೆಕಾರ್ಡ್‌ನ್ನು ಖಜಾನೆಯಲ್ಲಿ ಇಡಬೇಕು ಇಲ್ಲವಾದರೇ ಎಲ್ಲಾವನ್ನು ಸುಟ್ಟು ಹಾಕುವ ಸಾಧ್ಯತೆ ಹೆಚ್ಚು ಇದೆ ಎಂದು ಎಚ್ಚರಿಸಿದರು.
ಹಾಸನಾಂಬ ಜಾತ್ರಾ ಮಹೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಅನೇಕರ ಹೆಸರು ಕೈಬಿಟ್ಟಿರುವುದು ಸರಿಯಾದ ಕ್ರಮವಲ್ಲಾ. ಪ್ರೋಟೋಕಾಲ್ ಪ್ರಕಾರ ಏನಿದೆ ಅದನ್ನು ಮಾಡಬೇಕು. ಆದರೇ ಮಾಡಿರುವುದಿಲ್ಲ. ಏನು ಮಾಡುವುದಕ್ಕೆ ಹಾಗುತ್ತೆ, ನನಗೆ ಏಕೆ ಬೇಕು ಅದು ! ಎಂದು ಪತ್ರಕರ್ತರ ಪ್ರಶ್ನೆಯೊಂದಕ್ಕೆ ರೇವಣ್ಣನವರ ಉತ್ತರ ಹೀಗಿತ್ತು.Body:- ಎಚ್.ಡಿ.ರೇವಣ್ಣ ಮಾಜಿ ಸಚಿವ.Conclusion:-ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.