ETV Bharat / state

ಕುಟುಂಬದವರ ಅಂತ್ಯಕ್ರಿಯೆಗೆ ಹೊರಟವರು ನಡುದಾರಿಯಲ್ಲೆ ಸಾವಿನ ಮನೆ ಸೇರಿದ್ರು!

author img

By

Published : Sep 9, 2019, 6:08 PM IST

Updated : Sep 9, 2019, 11:41 PM IST

ಸಂಬಂಧಿಕರೊಬ್ಬರು ಸಾವಿನ ಹಿನ್ನೆಲೆ ಬೆಂಗೂರಿನಿಂದ ಚಿಕ್ಕಮಗಳೂರಿಗೆ ಹೋಗುತಿದ್ದವರು ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದಾರೆ.

ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಹಾಸನ: ತಾಲೂಕಿನಲ್ಲಿ ಸೋಮವಾರ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಮೃತಪಟ್ಟು, ಆರು ಜನ ಗಾಯಗೊಂಡಿದ್ದಾರೆ.

ಹಾಸನ ರಸ್ತೆಯ ಸಂಕೇನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬೇಲೂರಿನಿಂದ ಬರುತ್ತಿದ್ದ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಮೂಡಿಗೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಜಾನಕಮ್ಮ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತರ ಮೊಮ್ಮಗಳಾದ ತುಜುಶ್ರೀ (3) ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಇನ್ನು ಕಾರು ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮೃತ ಮಹಿಳೆ ಯಸಳೂರು ಹೋಬಳಿ ದೊಡ್ಡಕುಂದೂರು ಗ್ರಾಮದವರು ಎಂದು ಸಿಪಿಐ ಸಿದ್ದರಾಮೇಶ್ವರ ತಿಳಿಸಿದರು. ಮೂಡಿಗೆರೆಗೆ ಸಂಬಂಧಿಕರೊಬ್ಬರ ಸಾವಿನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಬೈಕ್‌ಸವಾರ ಸಾವು:

ಅರೇಹಳ್ಳಿ ಸಮೀಪದ ಲಿಂಗಾಪುರ ಗ್ರಾಮದ ಬಳಿ ಬೈಕ್ ಹಾಗೂ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಮಧ್ಯಾಹ್ನ 12.30ರಲ್ಲಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ತಗರೆ ಗ್ರಾಮದ ಯುವರಾಜ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮೂಡಿಗೆರೆ ರಸ್ತೆಯ ನವಿಲಹಳ್ಳಿ ಗ್ರಾಮದ ಗಡಿಯಲ್ಲಿ ಬೈಕ್ ಹಾಗೂ ಓಮ್ನಿ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಗೀತಾ, ಮೇಘ ಹಾಗೂ ದೇವರಾಜ್ ಗಾಯಗೊಂಡಿದ್ದಾರೆ.

ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಲೂರು ಹಾಗೂ ಅರೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾತ್ಕಾಲಿಕ ಪರಿಹಾರ: ರಸ್ತೆ ಸಾರಿಗೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಾತ್ಕಾಲಿಕವಾಗಿ ಪರಿಹಾರದ ರೂಪದಲ್ಲಿ 5 ಸಾವಿರ ರೂ. ನೀಡಲಾಗಿದೆ. ಸೂಕ್ತ ದಾಖಲೆಗಳ ನೀಡಿದ ನಂತರ 35 ಸಾವಿರ ರೂ. ನೀಡಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ್ ತಿಳಿಸಿದ್ದಾರೆ. ಪರಿಹಾರ ವಿತರಣೆ ಸಂದರ್ಭ ಸೂಪರ್‌ವೈಸರ್ ಉಮೇಶ್, ಡಿಪೋ ಮೇನೇಜರ್ ಬೈರೇಗೌಡ ಇದ್ದರು.

ಹಾಸನ: ತಾಲೂಕಿನಲ್ಲಿ ಸೋಮವಾರ ನಡೆದ ಮೂರು ಪ್ರತ್ಯೇಕ ಅಪಘಾತ ಪ್ರಕರಣದಲ್ಲಿ ಇಬ್ಬರು ಮೃತಪಟ್ಟು, ಆರು ಜನ ಗಾಯಗೊಂಡಿದ್ದಾರೆ.

ಹಾಸನ ರಸ್ತೆಯ ಸಂಕೇನಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ ತಿರುವಿನಲ್ಲಿ ಮಧ್ಯಾಹ್ನ 12 ಗಂಟೆ ಸಮಯದಲ್ಲಿ ಬೇಲೂರಿನಿಂದ ಬರುತ್ತಿದ್ದ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಮೂಡಿಗೆರೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಜಾನಕಮ್ಮ (70) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಮೃತರ ಮೊಮ್ಮಗಳಾದ ತುಜುಶ್ರೀ (3) ತೀವ್ರವಾಗಿ ಗಾಯಗೊಂಡಿದ್ದು, ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ರಸ್ತೆ ಅಪಘಾತಕ್ಕೆ ಇಬ್ಬರು ಬಲಿ

ಇನ್ನು ಕಾರು ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ. ಮೃತ ಮಹಿಳೆ ಯಸಳೂರು ಹೋಬಳಿ ದೊಡ್ಡಕುಂದೂರು ಗ್ರಾಮದವರು ಎಂದು ಸಿಪಿಐ ಸಿದ್ದರಾಮೇಶ್ವರ ತಿಳಿಸಿದರು. ಮೂಡಿಗೆರೆಗೆ ಸಂಬಂಧಿಕರೊಬ್ಬರ ಸಾವಿನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಬೈಕ್‌ಸವಾರ ಸಾವು:

ಅರೇಹಳ್ಳಿ ಸಮೀಪದ ಲಿಂಗಾಪುರ ಗ್ರಾಮದ ಬಳಿ ಬೈಕ್ ಹಾಗೂ ರಸ್ತೆ ಸಾರಿಗೆ ಸಂಸ್ಥೆ ಬಸ್ ನಡುವೆ ಮಧ್ಯಾಹ್ನ 12.30ರಲ್ಲಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ತಗರೆ ಗ್ರಾಮದ ಯುವರಾಜ್ (65) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಮೂಡಿಗೆರೆ ರಸ್ತೆಯ ನವಿಲಹಳ್ಳಿ ಗ್ರಾಮದ ಗಡಿಯಲ್ಲಿ ಬೈಕ್ ಹಾಗೂ ಓಮ್ನಿ ನಡುವೆ ಡಿಕ್ಕಿ ಸಂಭವಿಸಿದೆ. ಬೈಕ್‌ನಲ್ಲಿ ಬರುತ್ತಿದ್ದ ಗೀತಾ, ಮೇಘ ಹಾಗೂ ದೇವರಾಜ್ ಗಾಯಗೊಂಡಿದ್ದಾರೆ.

ಅಪಘಾತ ಪ್ರಕರಣಗಳಿಗೆ ಸಂಬಂಧಿಸಿದಂತೆ ಬೇಲೂರು ಹಾಗೂ ಅರೇಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾತ್ಕಾಲಿಕ ಪರಿಹಾರ: ರಸ್ತೆ ಸಾರಿಗೆ ಬಸ್ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ತಾತ್ಕಾಲಿಕವಾಗಿ ಪರಿಹಾರದ ರೂಪದಲ್ಲಿ 5 ಸಾವಿರ ರೂ. ನೀಡಲಾಗಿದೆ. ಸೂಕ್ತ ದಾಖಲೆಗಳ ನೀಡಿದ ನಂತರ 35 ಸಾವಿರ ರೂ. ನೀಡಲಾಗುವುದು ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜ್ ತಿಳಿಸಿದ್ದಾರೆ. ಪರಿಹಾರ ವಿತರಣೆ ಸಂದರ್ಭ ಸೂಪರ್‌ವೈಸರ್ ಉಮೇಶ್, ಡಿಪೋ ಮೇನೇಜರ್ ಬೈರೇಗೌಡ ಇದ್ದರು.

Intro:ಹಾಸನ: ಸಾವಿನ ಮನೆಗೆ ಹೊರಟವರು ಸ್ಮಶಾನಕ್ಕೆ ಹೋದ ದಾರುಣ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.

ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷದಿಂದ ಎರಡು ಜೀವಗಳು ಬಲಿಯಾಗಿದ್ದು, ಬೇಲೂರು ತಾಲ್ಲೂಕಿನ ಸಂಕೇನಹಳ್ಳಿ ಗೇಟ್ ಬಳಿಯಲ್ಲಿ ನಡೆದಿದೆ.

ಸಂಬಂಧಿಕರೊಬ್ಬರು ಮೃತಪಟ್ಟ ಹಿನ್ನೆಲೆಯಲ್ಲಿ ಬೆಂಗಳೂರಿನ ಕೆಂಗೇರಿ ಮೂಲದ ಐವರು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಗೆ ಕಾರ್ ನಲ್ಲಿ ಹೊರಟಿದ್ದರು. ಕೆಎಸ್ಆರ್ಟಿಸಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗದ ಜೊತೆಗೆ ಮತ್ತೊಂದು ಬಸ್ ನ್ನ ಓವರ್ ಟೇಕ್ ಮಾಡಲು ಹೋಗಿ ಎದುರಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಅಜ್ಜಿ ಮಗಳು ಸ್ಥಳದಲ್ಲಿಯೇ ಸಾವಿಗೀಡಾಗಿದ್ದಾರೆ.

ಇನ್ನು ಮೃತ ದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗಾಗಿ ಬೇಲೂರಿನ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನೆ ಮಾಡಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಹಾಸನದ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೇಲೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:0Conclusion:0
Last Updated : Sep 9, 2019, 11:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.