ETV Bharat / state

ಕ್ಷುಲ್ಲಕ ಕಾರಣಕ್ಕೆ ಪ್ರಾಧ್ಯಾಪಕರಿಂದ ಹಲ್ಲೆ ಆರೋಪ: ಪೊಲೀಸ್​ ಠಾಣೆ ಮೆಟ್ಟಿಲೇರಿದ ವಿದ್ಯಾರ್ಥಿಗಳು - ವಿದ್ಯಾರ್ಥಿಗಳ ಮೇಲೆ ಹಲ್ಲೆ

ಬೈಕ್​ನಲ್ಲಿನ ಗಾಳಿ ತೆಗೆದ ಪ್ರಾಧ್ಯಾಪಕರು ವಿದ್ಯಾರ್ಥಿಗಳ ಮೇಲೆ ಹಲ್ಲೆಯನ್ನೂ ನಡೆಸಿದ್ದಾರೆ ಎಂಬ ಆರೋಪ ಹಾಸನದಲ್ಲಿ ಕೇಳಿಬಂದಿದೆ.

ವಿದ್ಯಾರ್ಥಿಗಳ ಮೇಲೆ ಹಾಸನ ಕಾಲೇಜಿನ ಪ್ರಾಧ್ಯಾಪಕರು ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್​
author img

By

Published : Mar 20, 2019, 9:33 PM IST

ಹಾಸನ : ಕಾಲೇಜಿನ ಪಾರ್ಕಿಂಗ್ ಸ್ಥಳದಲ್ಲಿ ವಿದ್ಯಾರ್ಥಿಗಳು ನಿಲ್ಲಿಸಿದ್ದ ಬೈಕ್ ಚಕ್ರಗಳ ಗಾಳಿ ತೆಗೆದಿದ್ದಲ್ಲದೆ, ವಿದ್ಯಾರ್ಥಿಗಳ ಮೇಲೆ ಪ್ರಾಧ್ಯಾಪಕರೇ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ನಗರದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ನಡೆದಿದೆ. ಈ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ.

ವಿದ್ಯಾರ್ಥಿಗಳ ಮೇಲೆ ಹಾಸನ ಕಾಲೇಜಿನ ಪ್ರಾಧ್ಯಾಪಕರು ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್​

ಇಂದು ಸರ್ಕಾರಿ ಕಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಆದರೂ ವಿದ್ಯಾರ್ಥಿಗಳು ಹೋಳಿ ಹಬ್ಬ ಆಚರಿಸಲು ಕಾಲೇಜು ಬಳಿ ಬಂದು, ಎಂದಿನಂತೆ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದರು ಎನ್ನಲಾಗಿದೆ. ನಂತರ ತಾವು ನಿಲ್ಲಿಸಿದ್ದ ಬೈಕ್​ಗಳ ಬಳಿ ಬಂದಾಗ ಬೈಕ್​ ಚಕ್ರಗಳಲ್ಲಿದ್ದ ಗಾಳಿಯನ್ನು ಯಾರೂ ತೆಗೆದಿದ್ದಾರೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರಂತೆ.

ಸ್ಥಳದಲ್ಲಿಯೇ ಇದ್ದ ಪ್ರಾಧ್ಯಾಪಕರಿಗೆ ಈ ಮಾತು ಕೇಳಿಸಿ ಕೋಪಗೊಂಡು, ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಇದನ್ನು ಪ್ರಶ್ನಿಸಿದಾಗ ಸ್ಥಳಕ್ಕಾಗಮಿಸಿದ ಪ್ರಾಂಶುಪಾಲ ರಾಜಪ್ಪ ಮತ್ತು ದೈಹಿಕ ಶಿಕ್ಷಕ ಮಹೇಂದ್ರಪ್ಪ, ಸತ್ಯಮೂರ್ತಿ ಹಾಗೂ ಗಿರೀಶ್ ಎಂಬುವರು ಚಂದ್ರಶೇಖರ್ ಎಂಬ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿ, ಕಾಲಿನಿಂದ ಒದ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಇಷ್ಟೆಲ್ಲಾ ನಡೆಯುತ್ತಿರುವಾಗ ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ಮೊಬೈಲ್​ನಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿ ಬಿಟ್ಟಿದ್ದಾರೆ. ಇಂತಹ ವರ್ತನೆ ತೋರಿದ ಪ್ರಾಧ್ಯಾಪಕರ ವಿರುದ್ಧ ದೂರು ನೀಡಲು ವಿದ್ಯಾರ್ಥಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ಹಾಸನ : ಕಾಲೇಜಿನ ಪಾರ್ಕಿಂಗ್ ಸ್ಥಳದಲ್ಲಿ ವಿದ್ಯಾರ್ಥಿಗಳು ನಿಲ್ಲಿಸಿದ್ದ ಬೈಕ್ ಚಕ್ರಗಳ ಗಾಳಿ ತೆಗೆದಿದ್ದಲ್ಲದೆ, ವಿದ್ಯಾರ್ಥಿಗಳ ಮೇಲೆ ಪ್ರಾಧ್ಯಾಪಕರೇ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಪ್ರಕರಣ ನಗರದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ನಡೆದಿದೆ. ಈ ವಿಡಿಯೋ ಈಗ ಎಲ್ಲೆಡೆ ಹರಿದಾಡುತ್ತಿದೆ.

ವಿದ್ಯಾರ್ಥಿಗಳ ಮೇಲೆ ಹಾಸನ ಕಾಲೇಜಿನ ಪ್ರಾಧ್ಯಾಪಕರು ಹಲ್ಲೆ ನಡೆಸುತ್ತಿರುವ ವಿಡಿಯೋ ವೈರಲ್​

ಇಂದು ಸರ್ಕಾರಿ ಕಲಾ ಕಾಲೇಜಿಗೆ ರಜೆ ಘೋಷಿಸಲಾಗಿತ್ತು. ಆದರೂ ವಿದ್ಯಾರ್ಥಿಗಳು ಹೋಳಿ ಹಬ್ಬ ಆಚರಿಸಲು ಕಾಲೇಜು ಬಳಿ ಬಂದು, ಎಂದಿನಂತೆ ಕಾಲೇಜು ಆವರಣದಲ್ಲಿ ದ್ವಿಚಕ್ರ ವಾಹನ ನಿಲ್ಲಿಸಿದ್ದರು ಎನ್ನಲಾಗಿದೆ. ನಂತರ ತಾವು ನಿಲ್ಲಿಸಿದ್ದ ಬೈಕ್​ಗಳ ಬಳಿ ಬಂದಾಗ ಬೈಕ್​ ಚಕ್ರಗಳಲ್ಲಿದ್ದ ಗಾಳಿಯನ್ನು ಯಾರೂ ತೆಗೆದಿದ್ದಾರೆ ಎಂದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರಂತೆ.

ಸ್ಥಳದಲ್ಲಿಯೇ ಇದ್ದ ಪ್ರಾಧ್ಯಾಪಕರಿಗೆ ಈ ಮಾತು ಕೇಳಿಸಿ ಕೋಪಗೊಂಡು, ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಮತ್ತಿಬ್ಬರು ವಿದ್ಯಾರ್ಥಿಗಳು ಇದನ್ನು ಪ್ರಶ್ನಿಸಿದಾಗ ಸ್ಥಳಕ್ಕಾಗಮಿಸಿದ ಪ್ರಾಂಶುಪಾಲ ರಾಜಪ್ಪ ಮತ್ತು ದೈಹಿಕ ಶಿಕ್ಷಕ ಮಹೇಂದ್ರಪ್ಪ, ಸತ್ಯಮೂರ್ತಿ ಹಾಗೂ ಗಿರೀಶ್ ಎಂಬುವರು ಚಂದ್ರಶೇಖರ್ ಎಂಬ ವಿದ್ಯಾರ್ಥಿಯನ್ನು ಹಿಗ್ಗಾಮುಗ್ಗಾ ಥಳಿಸಿ, ಕಾಲಿನಿಂದ ಒದ್ದಿದ್ದಾರೆ ಎಂದು ಆರೋಪಿಸಲಾಗಿದೆ.

ಇಷ್ಟೆಲ್ಲಾ ನಡೆಯುತ್ತಿರುವಾಗ ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ಮೊಬೈಲ್​ನಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಿದ್ದಾರೆ. ಬಳಿಕ ಅದನ್ನು ಸಾಮಾಜಿಕ ಜಾಲತಾಣಗಳ ಮೂಲಕ ಹರಿ ಬಿಟ್ಟಿದ್ದಾರೆ. ಇಂತಹ ವರ್ತನೆ ತೋರಿದ ಪ್ರಾಧ್ಯಾಪಕರ ವಿರುದ್ಧ ದೂರು ನೀಡಲು ವಿದ್ಯಾರ್ಥಿಗಳು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Intro:ಹಾಸನ : ಪಾರ್ಕಿಂಗ್ ಸ್ಥಳದಲ್ಲಿ ಬೈಕ್ ನಿಲ್ಲಿಸಿದ್ದಕ್ಕೆ ಕಾಲೇಜು ಪ್ರಾಧ್ಯಾಪಕ ವರ್ಗದವರಿಂದ ವಿದ್ಯಾರ್ಥಿಗಳ ದ್ವಿಚಕ್ರವಾಹನದ ಗಾಳಿ ಬಿಟ್ಟು ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಘಟನೆ ಹಾಸನದ ಸರ್ಕಾರಿ ಕಲಾ ಮತ್ತು ವಾಣಿಜ್ಯ ಕಾಲೇಜು ಆವರಣದಲ್ಲಿ ನಡೆದಿದೆ.

ಇಂದು ಸರ್ಕಾರಿ ಕಲಾ ಕಾಲೇಜಿಗೆ ರಜೆ ಘೋಷಣೆ ಆಗಿದ್ದರೂ ಕೂಡಾ, ವಿದ್ಯಾರ್ಥಿಗಳು ಹೋಳಿ ಹಬ್ಬ ಆಚರಣೆ ಮಾಡಲೆಂದು ಕೆಲ ವಿದ್ಯಾರ್ಥಿಗಳು ಕಾಲೇಜು ಬಳಿ ಬಂದಿದ್ದರು. ಹೋಲಿ ಆಚರಣೆಗೆ ಬಂದ ವಿದ್ಯಾರ್ಥಿಗಳು ಎಂದಿನಂತೆ ತಮ್ಮ ಕಾಲೇಜು ಆವರಣದ ದ್ವಿಚಕ್ರ ವಾಹನ ನಿಲುಗಡೆ ಸ್ಥಳದಲ್ಲಿ ವಾಹನವನ್ನು ನಿಲ್ಲಿಸಿದ್ದಾರೆ. 

ವಾಹನ ನಿಲ್ಲಿಸಿದ್ದಕ್ಕೆ ಆಕ್ರೋಶಗೊಂಡ ಕೆಲ ಪ್ರಾಧ್ಯಾಪಕರು ಕಾಲೇಜು ಇಲ್ಲದಿದ್ದರೂ ಕಾಲೇಜು ಆವರಣದಲ್ಲಿ ಬೈಕ್ ನಿಲ್ಲಿಸಿದ್ದಾರೆ ಎಂಬ ಒಂದೇ ಕಾರಣಕ್ಕೆ ವಿದ್ಯಾರ್ಥಿಗಳ ಬೈಕ್ ನ ಟೈಯರ್ ನ ಗಾಳಿ ಬಿಟ್ಟಿದ್ದಾರೆ. ಹೋಳಿ ಮುಗಿಸಿಕೊಂಡು ವಾಹನವನ್ನು ತೆಗೆದುಕೊಳ್ಳಲು ಬಂದ ವಿದ್ಯಾರ್ಥಿಗಳಿಗೆ ದ್ವಿಚಕ್ರವಾಹನದ ಗಾಡಿ ಬಿಟ್ಟಿರುವ ಕಂಡು ಸಿಟ್ಟಾಗಿದ್ದಾರೆ. ಯಾರೋ ಕಿಡಿಗೇಡಿಗಳು ಇಂತಹ ಕೃತ್ಯವನ್ನು ಮಾಡಿದ್ದಾರೆ ಅಂತ ಸಿಟ್ಟಿನಲ್ಲಿ ಸ್ಥಳದಲ್ಲೇ ಕೆಲ ಅವ್ಯಾಚ ಶಬ್ದಗಳಿಂದ ಬೈಯ್ದಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿಯೇ ಇದ್ದ ಬರುವ ಪ್ರಾಧ್ಯಾಪಕ ತನ್ನ ಮಾತನ್ನು ಕೇಳಿಸಿಕೊಂಡ ಬಳಿಕ ಕುಪಿತಗೊಂಡು ಆತನಿಗೆ ಹಲ್ಲೆ ಮಾಡಿದ್ದಾನೆ. ಇದನ್ನ ಪ್ರಶ್ನೆ ಮಾಡಿದ ವಿದ್ಯಾರ್ಥಿ ಮೇಲೆ ಮತ್ತೆ ಅದೇ ಪ್ರಾಧ್ಯಾಪಕ ಮರು  ಹಲ್ಲೆ ಮಾಡಿದ್ದಾನೆ. ಆದರೆ ಇದನ್ನು ಅಲ್ಲೇ ಸ್ಥಳದಲ್ಲಿದ್ದ ಮತ್ತು ಇಬ್ಬರು ವಿದ್ಯಾರ್ಥಿಗಳು ಪ್ರಶ್ನೆ ಮಾಡಿ ಸರ್ ಪಾರ್ಕಿಂಗ್ ಸ್ಥಳದಲ್ಲಿ ವಾಹನ ನಿಲ್ಲಿಸಬೇಡಿ ಎಂದು ಹೇಳಿದ್ದಾರೆ ನಾವು ನಿಲ್ಲಿಸುತ್ತಿರಲಿಲ್ಲ ಆದರೆ ಈಗ ಗಾಳಿ ಇಲ್ಲದ ವಾಹನ ತಳ್ಳುವುದು ತುಂಬಾ ಕಷ್ಟ ಅಂತ ಪ್ರಶ್ನೆ ಮಾಡಿದ್ದಾರೆ.

ಇದೆ ವೇಳೆ ಸ್ಥಳಕ್ಕೆ ಆಗಮಿಸಿದ ಪ್ರಾಂಶುಪಾಲ ರಾಜಪ್ಪ ಮತ್ತು ದೈಹಿಕ ಶಿಕ್ಷಕ ಮಹೇಂದ್ರಪ್ಪ, ಸತ್ಯಮೂರ್ತಿ ಹಾಗೂ ಗಿರೀಶ್  ನಮ್ಮನ್ನೇ ಪ್ರಶ್ನೆ ಮಾಡುತ್ತೀಯ ಎಂದು ಆ ನಾಲ್ಕು ಮಂದಿ ಸೇರಿ ಚಂದ್ರಶೇಖರ್ ಎಂಬ ವಿದ್ಯಾರ್ಥಿಯ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ಮಾಡಿದ್ದಾರೆ ಜೊತೆಗೆ ಕಾಲಿನಿಂದ ಒದೆಯೂವ ಮೂಲಕ ಗೂಂಡಾ ವರ್ತನೆ ತೋರಿದ್ದಾರೆ.

ಘಟನೆಯ ವಿಡಿಯೋವನ್ನ ಸ್ಥಳದಲ್ಲಿದ್ದ ಕೆಲ ವಿದ್ಯಾರ್ಥಿಗಳು ಮೊಬೈಲ್ ನಲ್ಲಿ ಚಿತ್ರಿಕರಿಸಿ ಕ್ಷಣ ಮಾತ್ರದಲ್ಲಿ ನೂರಾರು ವಿದ್ಯಾರ್ಥಿಗಳ ಮೊಬೈಲ್ ಗಳಿಗೆ ಹಾಗೂ ಜಾಲತಾಣಗಳ ಮೂಲಕ ಹರಿ ಬಿಟ್ಟಿದ್ದಾರೆ. ಜೊತೆಗೆ ಕಾಲೇಜು ಮತ್ತು ಪ್ರಾಧ್ಯಾಪಕ ವರ್ಗದವರ ವಿರುದ್ಧ ಕೂಡ ವಿದ್ಯಾರ್ಥಿಗಳು ದೂರು ದಾಖಲು ಮಾಡಲು ಸಾಧ್ಯ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

ವಿದ್ಯಾರ್ಥಿಗಳು ತಪ್ಪು ಮಾಡುವುದು ಸಹಜ ಆದರೆ ಅದನ್ನು ತಿದ್ದಿ ಹೇಳಬೇಕಾದರೆ ಗುರುಗಳೇ ರೌಡಿಗಳು ರೀತಿಯಲ್ಲಿ ವರ್ತನೆ ಮಾಡಿದ್ದು ನಿಜಕ್ಕೂ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು. ಆದರೆ ಇಲ್ಲಿ ಪ್ರಾಧ್ಯಾಪಕರೊಂದಿಗೆ ಪ್ರಾಂಶುಪಾಲರು ಕೂಡ ಸೇರಿ ವಿದ್ಯಾರ್ಥಿಗೆ ಹಲ್ಲೆ ಮಾಡಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತೆ.


*ಸುನಿಲ್ ಕುಂಭೇನಹಳ್ಳಿ*,  ಈಟಿವಿ ನ್ಯೂಸ್, ಹಾಸನ




Body:0


Conclusion:0
ETV Bharat Logo

Copyright © 2025 Ushodaya Enterprises Pvt. Ltd., All Rights Reserved.