ETV Bharat / state

ಅತಿವೃಷ್ಟಿ ರಾಜ್ಯಗಳಿಗೆ ಕೇಂದ್ರ ನೀಡಿರುವ ನೆರವಿನಲ್ಲಿ ವ್ಯತ್ಯಾಸವಿದೆ: ಹೆಚ್​ಡಿಕೆ

author img

By

Published : Aug 12, 2019, 1:19 PM IST

ಅತಿವೃಷ್ಟಿ ವೇಳೆ ಕೇಂದ್ರ ಸರ್ಕಾರ ಬೇರೆ ರಾಜ್ಯಗಳಿಗೆ ಕೊಟ್ಟ ನೆರವು ಮತ್ತು ನಮ್ಮ ರಾಜ್ಯಕ್ಕೆ ಕೊಟ್ಟ ನೆರವಿನಲ್ಲಿ ವ್ಯತ್ಯಾಸವಿದೆ ಅಂತ ಮಾಜಿ ಸಿಎಂ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅತೀವೃಷ್ಟಿ ರಾಜ್ಯಗಳಿಗೆ ಕೇಂದ್ರ ನೀಡಿರುವ ನೆರವಿನಲ್ಲಿ ವ್ಯತ್ಯಾಸವಿದೆ

ಹಾಸನ: ಕಳೆದ ಐದಾರು ವರ್ಷಗಳಲ್ಲೇ ಈ ಬಾರಿಯ ಮಳೆ ಅವಾಂತರ ಸೃಷ್ಟಿಸಿರುವುದು ದೊಡ್ಡಮಟ್ಟದ ಅನಾಹುತ. ಇವತ್ತಿನ ಪರಿಸ್ಥಿತಿ ನೋಡಿದ್ರೆ ಎಲ್ಲರ ಕೈಮೀರಿ ಹೋಗಿರುವುದು ದುರಂತ ಅನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊಡಗು ಮತ್ತು ಸಕಲೇಶಪುರ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಕನಿಷ್ಠ ಒಂದು ವಾರ ಕ್ಯಾಂಪ್ ಮಾಡಿದರು ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಬೆಳಗಾವಿ ಭಾಗದಲ್ಲಿನ ಉಂಟಾಗಿರುವಂಥ ಪರಿಸ್ಥಿತಿ ಹಾಸನದಲ್ಲಿ ಕೂಡ ನಿರ್ಮಾಣವಾಗಿದೆ ಎಂದರು.

ಇನ್ನು ಈಗಾಗಲೇ ರಾಜ್ಯದಲ್ಲಿ 4ರಿಂದ 5 ಲಕ್ಷ ಮಂದಿ ತಮ್ಮ ಗ್ರಾಮಗಳನ್ನು ತೊರೆದಿದ್ದಾರೆ. ಕೇಂದ್ರ ಸರ್ಕಾರದಿಂದ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಅಮಿತ್ ಶಾ ಈಗಾಗಲೇ ಸರ್ವೇ ಮಾಡಿದ್ದಾರೆ. ಕರ್ನಾಟಕ ಜನತೆಗೆ ವಿಶ್ವಾಸ ಮೂಡಿಸಲು ಕೇಂದ್ರ ತನ್ನ ನಿಲುವು ಪ್ರಕಟಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಕೆಲ ಅಧಿಕಾರಿಗಳು ಹಾನಿ ಬಗ್ಗೆ ಮಾಹಿತಿ ಮತ್ತು ಯಾವುದೇ ಭರವಸೆಗಳನ್ನು ಕೊಟ್ಟಿಲ್ಲ. ಕೇಂದ್ರ ಸರ್ಕಾರದಿಂದ ಬೇರೆ ರಾಜ್ಯಗಳಿಗೆ ಕೊಟ್ಟ ನೆರವು ಮತ್ತು ನಮ್ಮ ರಾಜ್ಯಕ್ಕೆ ಕೊಟ್ಟ ನೆರವಿನಲ್ಲಿ ವ್ಯತ್ಯಾಸವಿದೆ ಅಂತ ಅಸಮಾಧಾನ ಹೊರಹಾಕಿದ್ರು.

ಅತಿವೃಷ್ಟಿ ರಾಜ್ಯಗಳಿಗೆ ಕೇಂದ್ರ ನೀಡಿರುವ ನೆರವಿನಲ್ಲಿ ವ್ಯತ್ಯಾಸವಿದೆ: ಹೆಚ್​ಡಿಕೆ

ಇದೇ ವೇಳೆ ಜಿಲ್ಲಾಉಸ್ತುವಾರಿ ಸಚಿವರ ನೇಮಕಕ್ಕೆ ಬೆಟ್ಟಿಂಗ್​ ದಂಧೆ ನಡೆಯುತ್ತಿದೆ. ಪ್ರವಾಹ ಉಲ್ಬಣಿಸಿ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಕಾರ್ಯಗಳನ್ನು ಸ್ವಲ್ಪ ದೂರ ಇಟ್ಟರೆ ಒಳ್ಳೆಯದು ಅಂತ ಸರ್ಕಾರಕ್ಕೆ ಹೆಚ್​ಡಿಕೆ ಸಲಹೆ ನೀಡಿದ್ರು. ಇನ್ನು ಬಿಜೆಪಿ ಸರ್ಕಾರ ಪ್ರವಾಹ ಪೀಡಿತರ ಜೀವನ ಮಟ್ಟವನ್ನು ಮೇಲೆತ್ತಲು ಟೇಕಾಫ್ ಆಗಬೇಕೇ ಹೊರತು ಉಸ್ತುವಾರಿ ಸಚಿವರ ಉದಯ ಬೆಟ್ಟಿಂಗ್​ನಲ್ಲಲ್ಲ ಅಂತ ಮಾತಿನ ಮೂಲಕ ಕುಟುಕಿದರು.

ಕೇಂದ್ರ ಸರ್ಕಾರ ತಕ್ಷಣ 4500 ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಅಂತ ಒತ್ತಾಯಿಸಿದ ಕುಮಾರಸ್ವಾಮಿ, ನನ್ನ ಅವಧಿಯಲ್ಲಿ 198 ಕೋಟಿ ಕೊಡಗು ಪರಿಹಾರ ನಿಧಿಗೆ ಸಂಗ್ರಹವಾಗಿತ್ತು. ಈಗಲೂ ಆ ಹಣ ಉಳಿದಿದ್ದು ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು ಅಂತ ಸಿಎಂಗೆ ಸಲಹೆ ನೀಡಿದ್ರು. ಇನ್ನು ಆ. 16ರ ನಂತರ ಮತ್ತೆ 8-10 ದಿನಗಳ ಕಾಲ ಸಕಲೇಶಪುರ ಮೂಡಿಗೆರೆ ಭಾಗದಲ್ಲಿ ಪ್ರವಾಸ ಮಾಡಲಿದ್ದು, ರಾಜಕೀಯ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಿ, ನೊಂದವರಿಗೆ ಆತ್ಮಸ್ಥೈರ್ಯ ತುಂಬುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.

ಹಾಸನ: ಕಳೆದ ಐದಾರು ವರ್ಷಗಳಲ್ಲೇ ಈ ಬಾರಿಯ ಮಳೆ ಅವಾಂತರ ಸೃಷ್ಟಿಸಿರುವುದು ದೊಡ್ಡಮಟ್ಟದ ಅನಾಹುತ. ಇವತ್ತಿನ ಪರಿಸ್ಥಿತಿ ನೋಡಿದ್ರೆ ಎಲ್ಲರ ಕೈಮೀರಿ ಹೋಗಿರುವುದು ದುರಂತ ಅನಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಸಿಎಂ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

ಕೊಡಗು ಮತ್ತು ಸಕಲೇಶಪುರ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಕನಿಷ್ಠ ಒಂದು ವಾರ ಕ್ಯಾಂಪ್ ಮಾಡಿದರು ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಲು ಸಾಧ್ಯವಾಗುವುದಿಲ್ಲ. ಬೆಳಗಾವಿ ಭಾಗದಲ್ಲಿನ ಉಂಟಾಗಿರುವಂಥ ಪರಿಸ್ಥಿತಿ ಹಾಸನದಲ್ಲಿ ಕೂಡ ನಿರ್ಮಾಣವಾಗಿದೆ ಎಂದರು.

ಇನ್ನು ಈಗಾಗಲೇ ರಾಜ್ಯದಲ್ಲಿ 4ರಿಂದ 5 ಲಕ್ಷ ಮಂದಿ ತಮ್ಮ ಗ್ರಾಮಗಳನ್ನು ತೊರೆದಿದ್ದಾರೆ. ಕೇಂದ್ರ ಸರ್ಕಾರದಿಂದ ಸಚಿವರಾದ ನಿರ್ಮಲಾ ಸೀತಾರಾಮನ್ ಮತ್ತು ಅಮಿತ್ ಶಾ ಈಗಾಗಲೇ ಸರ್ವೇ ಮಾಡಿದ್ದಾರೆ. ಕರ್ನಾಟಕ ಜನತೆಗೆ ವಿಶ್ವಾಸ ಮೂಡಿಸಲು ಕೇಂದ್ರ ತನ್ನ ನಿಲುವು ಪ್ರಕಟಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಕೆಲ ಅಧಿಕಾರಿಗಳು ಹಾನಿ ಬಗ್ಗೆ ಮಾಹಿತಿ ಮತ್ತು ಯಾವುದೇ ಭರವಸೆಗಳನ್ನು ಕೊಟ್ಟಿಲ್ಲ. ಕೇಂದ್ರ ಸರ್ಕಾರದಿಂದ ಬೇರೆ ರಾಜ್ಯಗಳಿಗೆ ಕೊಟ್ಟ ನೆರವು ಮತ್ತು ನಮ್ಮ ರಾಜ್ಯಕ್ಕೆ ಕೊಟ್ಟ ನೆರವಿನಲ್ಲಿ ವ್ಯತ್ಯಾಸವಿದೆ ಅಂತ ಅಸಮಾಧಾನ ಹೊರಹಾಕಿದ್ರು.

ಅತಿವೃಷ್ಟಿ ರಾಜ್ಯಗಳಿಗೆ ಕೇಂದ್ರ ನೀಡಿರುವ ನೆರವಿನಲ್ಲಿ ವ್ಯತ್ಯಾಸವಿದೆ: ಹೆಚ್​ಡಿಕೆ

ಇದೇ ವೇಳೆ ಜಿಲ್ಲಾಉಸ್ತುವಾರಿ ಸಚಿವರ ನೇಮಕಕ್ಕೆ ಬೆಟ್ಟಿಂಗ್​ ದಂಧೆ ನಡೆಯುತ್ತಿದೆ. ಪ್ರವಾಹ ಉಲ್ಬಣಿಸಿ ಜನರು ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಇಂತಹ ಕಾರ್ಯಗಳನ್ನು ಸ್ವಲ್ಪ ದೂರ ಇಟ್ಟರೆ ಒಳ್ಳೆಯದು ಅಂತ ಸರ್ಕಾರಕ್ಕೆ ಹೆಚ್​ಡಿಕೆ ಸಲಹೆ ನೀಡಿದ್ರು. ಇನ್ನು ಬಿಜೆಪಿ ಸರ್ಕಾರ ಪ್ರವಾಹ ಪೀಡಿತರ ಜೀವನ ಮಟ್ಟವನ್ನು ಮೇಲೆತ್ತಲು ಟೇಕಾಫ್ ಆಗಬೇಕೇ ಹೊರತು ಉಸ್ತುವಾರಿ ಸಚಿವರ ಉದಯ ಬೆಟ್ಟಿಂಗ್​ನಲ್ಲಲ್ಲ ಅಂತ ಮಾತಿನ ಮೂಲಕ ಕುಟುಕಿದರು.

ಕೇಂದ್ರ ಸರ್ಕಾರ ತಕ್ಷಣ 4500 ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಅಂತ ಒತ್ತಾಯಿಸಿದ ಕುಮಾರಸ್ವಾಮಿ, ನನ್ನ ಅವಧಿಯಲ್ಲಿ 198 ಕೋಟಿ ಕೊಡಗು ಪರಿಹಾರ ನಿಧಿಗೆ ಸಂಗ್ರಹವಾಗಿತ್ತು. ಈಗಲೂ ಆ ಹಣ ಉಳಿದಿದ್ದು ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು ಅಂತ ಸಿಎಂಗೆ ಸಲಹೆ ನೀಡಿದ್ರು. ಇನ್ನು ಆ. 16ರ ನಂತರ ಮತ್ತೆ 8-10 ದಿನಗಳ ಕಾಲ ಸಕಲೇಶಪುರ ಮೂಡಿಗೆರೆ ಭಾಗದಲ್ಲಿ ಪ್ರವಾಸ ಮಾಡಲಿದ್ದು, ರಾಜಕೀಯ ಮರೆತು ಎಲ್ಲರೂ ಒಟ್ಟಾಗಿ ಕೆಲಸ ಮಾಡಿ, ನೊಂದವರಿಗೆ ಆತ್ಮಸ್ಥೈರ್ಯ ತುಂಬುವುದಾಗಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ರು.

Intro:ಹಾಸನ: ಕಳೆದ ಐದಾರು ವರ್ಷಗಳಲ್ಲಿ ಇದು ದೊಡ್ಡಮಟ್ಟದ ಅನಾಹುತ ಇವತ್ತಿನ ಪರಿಸ್ಥಿತಿ ನೋಡಿದರೆ ಎಲ್ಲರ ಕೈಮೀರಿ ಹೋಗಿರುವನು ದುರಂತ ಅನಿಸುತ್ತದೆ ಅಂತ ಮಾಜಿ ಮುಖ್ಯಮಂತ್ರಿ ಸಿಎಂ ಕುಮಾರಸ್ವಾಮಿ ಬೇಸರದಿಂದಲೇ ಮಾತನಾಡಿದರು.

ಕೊಡಗು ಮತ್ತು ಸಕಲೇಶಪುರ ಭಾಗದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಇಂದು ಖಾಸಗಿ ರೆಸಾರ್ಟ್ ನಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಕನಿಷ್ಠ ಒಂದು ವಾರ ಕ್ಯಾಂಪ್ ಮಾಡಿದರು ಎಲ್ಲಾ ಹಳ್ಳಿಗಳಿಗೂ ಭೇಟಿ ನೀಡಲು ಸಾಧ್ಯವಾಗುವುದಿಲ್ಲ ಬೆಳಗಾವಿ ಭಾಗದ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಆ ಭಾಗದಲ್ಲಿ ಸ್ವಲ್ಪ ಜಾಸ್ತಿ ಪ್ರವಾಹ ಬಂದಿರಬಹುದು ಆದರೆ ಅಲ್ಲಿಯ ಪರಿಸ್ಥಿತಿ ಹಾಸನದಲ್ಲಿ ಕೂಡ ನಿರ್ಮಾಣವಾಗಿದೆ ಎಂದರು

ಇನ್ನು ಆ. 16ರ ನಂತರ ಮತ್ತೆ 8-10 ದಿನಗಳ ಕಾಲ ಸಕಲೇಶಪುರ ಮೂಡಿಗೆರೆ ಭಾಗದಲ್ಲಿ ಪ್ರವಾಸ ಮಾಡಲಿದ್ದು ರಾಜಕೀಯ ಮರೆತು ಎಲ್ಲರನ್ನೂ ಒಟ್ಟಾಗಿ ಕೆಲಸ ಮಾಡಿ ನೊಂದವರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡುತ್ತೇನೆ ಎಂದರು.

ಬೈಟ್: ಎಚ್ ಡಿ ಕುಮಾರಸ್ವಾಮಿ ಮಾಜಿ ಸಿಎಂ

ಈಗಾಗಲೇ ರಾಜ್ಯದಲ್ಲಿ 4ರಿಂದ 5 ಲಕ್ಷ ಮಂದಿ ತಮ್ಮ ಗ್ರಾಮವನ್ನು ತೊರೆದಿದ್ದಾರೆ. ಕೇಂದ್ರ ಸರ್ಕಾರದಿಂದ ನಿರ್ಮಲ ಸೀತಾರಾಮನ್ ಮತ್ತು ಅಮಿತ್ ಶಾ ಈಗಾಗಲೇ ಸರ್ವೆ ಮಾಡಿದ್ದಾರೆ. ಕರ್ನಾಟಕ ಜನತೆಗೆ ವಿಶ್ವಾಸ ಮೂಡಿಸಲು ಕೇಂದ್ರ ತನ್ನ ನಿಲುವು ಪ್ರಕಟಿಸಿ ಆತ್ಮಸ್ಥೈರ್ಯ ತುಂಬುವ ಕೆಲಸ ಮಾಡಬೇಕಿತ್ತು. ಕೆಲ ಅಧಿಕಾರಿಗಳು ಹಾನಿ ಬಗ್ಗೆ ಮಾಹಿತಿ ಮತ್ತು ಯಾವುದೇ ಭರವಸೆಗಳನ್ನು ಕೊಡದೆ ನಿರ್ಮಿಸುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಿ ನನಗೂ ಪ್ರವಾಹದ ಅನುಭವವಾಗಿದೆ. ಕೇಂದ್ರ ಸರ್ಕಾರ ಬೇರೆ ರಾಜ್ಯಗಳಿಗೆ ಕೊಟ್ಟ ನೆರವು ಮತ್ತು ನಮ್ಮ ರಾಜ್ಯಕ್ಕೆ ಕೊಟ್ಟ ನೆರವಿನಲ್ಲಿ ವ್ಯತ್ಯಾಸವಿದೆ ಅಂತ ಅಸಮಾಧಾನವನ್ನು ವ್ಯಕ್ತಪಡಿಸಿದರು.

ಅಲ್ಲದೆ ಸೇತುವೆಗಳು ರಸ್ತೆಗಳು ಮನೆಗಳು ಸಂಪೂರ್ಣ ಹಾನಿಯಾಗಿದ್ದು ಸಕಲೇಶಪುರ ಮತ್ತು ಆಲೂರು ಭಾಗದಲ್ಲಿ ಕಳೆದ ರಾತ್ರಿ ಆದರೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿಲ್ಲ ಅಧಿಕಾರಿಗಳ ಬೇಜವಾಬ್ದಾರಿತನ. ನಿರಶಿತರ ಮಾತ್ರ ಶಾಶ್ವತ ಪರಿಹಾರ ಸಿಗುತ್ತದೆ ಎಂಬ ಆಶಾಭಾವನೆ ಇಟ್ಟುಕೊಂಡಿದ್ದಾರೆ ಇಂತಹ ರಾಜಕೀಯ ಪರಿಸ್ಥಿತಿಯಲ್ಲಿ ಜಲಾಶಯಗಳು ಭರ್ತಿಯಾಗಿವೆ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರುವುದು ಘೋಷ ಮತ್ತೊಂದು ಬೇಸರದ ಸಂಗತಿ ಎಂದರು.

ಬೈಟ್: ಎಚ್ ಡಿ ಕುಮಾರಸ್ವಾಮಿ ಮಾಜಿ ಸಿಎಂ


Body:0


Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.