ETV Bharat / state

ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಗೋಪಾಲಯ್ಯ ಸ್ಪಷ್ಟನೆ

author img

By

Published : Nov 26, 2020, 2:49 PM IST

Updated : Nov 26, 2020, 3:22 PM IST

ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರು ಎಂಬ ಬಗ್ಗೆ ಉಂಟಾಗಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ, ಬಿಜೆಪಿಯಲ್ಲಿ ನಾವೆಲ್ಲ ಒಂದು. ಕೆಲವರು ಈ ಬಗ್ಗೆ ಮಾತನಾಡಿರಬಹುದು. ಬಿಜೆಪಿ ದೊಡ್ಡ ಮನೆಯಾಗಿದ್ದು, ಯಾವುದೇ ಸಮಸ್ಯೆ ಆದರೂ ನಾವು ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

hassan
ಸಚಿವ ಗೋಪಾಲಯ್ಯ ಸ್ಪಷ್ಟನೆ

ಹಾಸನ: ಮುಂದಿನ‌ ಎರಡೂವರೆ ವರ್ಷ ಬಿ.ಎಸ್. ಯಡಿಯೂರಪ್ಪ ಅವರೆ ನಮ್ಮ ನಾಯಕರು. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಪ್ರವಾಸಿ ಮಂದಿರದಲ್ಲಿ‌ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರು ಎಂಬ ಬಗ್ಗೆ ಉಂಟಾಗಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ನಾವೆಲ್ಲ ಒಂದು. ಕೆಲವರು ಈ ಬಗ್ಗೆ ಮಾತನಾಡಿರಬಹುದು. ಬಿಜೆಪಿ ದೊಡ್ಡ ಮನೆಯಾಗಿದ್ದು, ಯಾವುದೇ ಸಮಸ್ಯೆ ಆದರೂ ನಾವು ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಸಚಿವ ಗೋಪಾಲಯ್ಯ

ಹೈ-ಕಮಾಂಡ್ ತೀರ್ಮಾನದಂತೆ ಸಂಪುಟ ವಿಸ್ತರಣೆ ನಡೆಯಲಿದೆ. ರಮೇಶ್ ಜಾರಕಿಹೊಳಿ ತಮ್ಮ ಸಚಿವ ಖಾತೆ ಹಾಗೂ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರ ಸಚಿವರೊಂದಿಗೆ ಮಾತನಾಡಲು ದೆಹಲಿಗೆ ಹೋಗಿದ್ದರು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ತಿಳಿಸಿದರು.

ಹಾಸನದಲ್ಲಿ ಕೆಲವು ಖಾಸಗಿ ಶಾಲೆಗಳು ಅರ್ಧವಾರ್ಷಿಕ ಪರೀಕ್ಷೆ ನಡೆಸಿರೋ ಬಗ್ಗೆ ದೂರು ಹಿನ್ನೆಲೆಯಲ್ಲಿ, ಅಂತಹ ಶಾಲೆಗಳ‌ ವಿರುದ್ಧ ಕಠಿಣ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರವಾಗಿ ಶಿಕ್ಷಣ ಸಚಿವರೊಂದಿಗೆ‌ ಮಾತನಾಡಿ, ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದರು.

ಹಾಸನ: ಮುಂದಿನ‌ ಎರಡೂವರೆ ವರ್ಷ ಬಿ.ಎಸ್. ಯಡಿಯೂರಪ್ಪ ಅವರೆ ನಮ್ಮ ನಾಯಕರು. ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಹೇಳಿದ್ದಾರೆ.

ಪ್ರವಾಸಿ ಮಂದಿರದಲ್ಲಿ‌ ಸುದ್ದಿಗಾರರೊಂದಿಗೆ‌ ಮಾತನಾಡಿದ ಅವರು, ಬಿಜೆಪಿಯಲ್ಲಿ ಮೂಲ ಮತ್ತು ವಲಸಿಗರು ಎಂಬ ಬಗ್ಗೆ ಉಂಟಾಗಿರುವ ಗೊಂದಲದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯಲ್ಲಿ ನಾವೆಲ್ಲ ಒಂದು. ಕೆಲವರು ಈ ಬಗ್ಗೆ ಮಾತನಾಡಿರಬಹುದು. ಬಿಜೆಪಿ ದೊಡ್ಡ ಮನೆಯಾಗಿದ್ದು, ಯಾವುದೇ ಸಮಸ್ಯೆ ಆದರೂ ನಾವು ಅದನ್ನು ಬಗೆಹರಿಸಿಕೊಳ್ಳುತ್ತೇವೆ ಎಂದು ಹೇಳಿದರು.

ಸಚಿವ ಗೋಪಾಲಯ್ಯ

ಹೈ-ಕಮಾಂಡ್ ತೀರ್ಮಾನದಂತೆ ಸಂಪುಟ ವಿಸ್ತರಣೆ ನಡೆಯಲಿದೆ. ರಮೇಶ್ ಜಾರಕಿಹೊಳಿ ತಮ್ಮ ಸಚಿವ ಖಾತೆ ಹಾಗೂ ಅಭಿವೃದ್ಧಿ ಬಗ್ಗೆ ಕೇಂದ್ರ ಸರ್ಕಾರ ಸಚಿವರೊಂದಿಗೆ ಮಾತನಾಡಲು ದೆಹಲಿಗೆ ಹೋಗಿದ್ದರು. ಇದರಲ್ಲಿ ಯಾವುದೇ ರಾಜಕೀಯ ಇಲ್ಲ ಎಂದು ತಿಳಿಸಿದರು.

ಹಾಸನದಲ್ಲಿ ಕೆಲವು ಖಾಸಗಿ ಶಾಲೆಗಳು ಅರ್ಧವಾರ್ಷಿಕ ಪರೀಕ್ಷೆ ನಡೆಸಿರೋ ಬಗ್ಗೆ ದೂರು ಹಿನ್ನೆಲೆಯಲ್ಲಿ, ಅಂತಹ ಶಾಲೆಗಳ‌ ವಿರುದ್ಧ ಕಠಿಣ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ವಿಚಾರವಾಗಿ ಶಿಕ್ಷಣ ಸಚಿವರೊಂದಿಗೆ‌ ಮಾತನಾಡಿ, ಇಂತಹ ಪ್ರಕರಣ ಮರುಕಳಿಸದಂತೆ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದರು.

Last Updated : Nov 26, 2020, 3:22 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.