ETV Bharat / state

ಮಳೆ ಆರ್ಭಟ: ಸಿಡಿಲಿಗೆ ಹತ್ತಕ್ಕೂ ಹೆಚ್ಚು ಕುರಿಗಳು ಬಲಿ - ಸಿಡಿಲಿನ ಬಡಿತಕ್ಕೆ ಹತ್ತಾರು ಕುರಿಗಳು ಸಾವು

ಹಾಸನ ಜಿಲ್ಲೆಯಲ್ಲಿ ಮಳೆ ಆರ್ಭಟಿಸಿದ್ದು, ಸಿಡಿಲು ಬಡಿದು 10 ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿವೆ. ಅರಸೀಕೆರೆ ತಾಲೂಕಿನ ನರಸೀಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಸಿಡಿಲಿಗೆ ಹತ್ತಕ್ಕೂ ಹೆಚ್ಚು ಕುರಿಗಳು ಬಲಿ
author img

By

Published : Jun 3, 2019, 4:01 AM IST

ಹಾಸನ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಮೇಯಲು ಹೋಗಿದ್ದ ಹತ್ತಕ್ಕೂ ಹೆಚ್ಚು ಕುರಿಗಳು ಸಿಡಿಲು ಬಡಿದು ಸಾವನ್ನಪ್ಪಿವೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಜನಕ್ಕೆ ಒಂದು ಕಡೆ ಖುಷಿಯಾಗಿದ್ದರೆ ಮತ್ತೊಂದೆಡೆ ಸಂಕಷ್ಟವನ್ನೂ ಎದುರಿಸುವಂತಾಗಿದೆ. ಮಳೆ ಜೊತೆ ಗುಡುಗು-ಸಿಡಿಲಿನ ಆರ್ಭಟ ಜೋರಾಗಿದ್ದು, ಕೃಷಿ ಕೆಲಸ ಮಾಡಲು ಸಹ ರೈತರು ಭಯಪಡುತ್ತಿದ್ದಾರೆ. ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಅರಕಲಗೂಡಿನಲ್ಲಿನಲ್ಲಿ ಈಗಾಗಲೇ ಸಾಕಷ್ಟು ಜಾನುವಾರುಗಳು ಸಾವಿಗೀಡಾಗಿವೆ. ಹಾಸನ ನಗರದಲ್ಲಿ ಕೂಡ ಸಿಡಿಲಿನ ಬಡಿತಕ್ಕೆ ಮರಗಳು ಧರೆಗುರುಳಿ ಕಾರುಗಳಿಗೆ ಸಾಕಷ್ಟು ಹಾನಿಯಾಗಿತ್ತು. ಅಷ್ಟೇ ಅಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು.

ಸಿಡಿಲಿಗೆ ಹತ್ತಕ್ಕೂ ಹೆಚ್ಚು ಕುರಿಗಳು ಬಲಿ

ಅದೇ ರೀತಿ ಅರಸೀಕೆರೆ ತಾಲೂಕಿನ ಸರಸೀಪುರದಲ್ಲಿ ಹತ್ತಾರು ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಕುರಿ ಮೇಯಿಸುತ್ತಿದ್ದ ಮಂಜುನಾಥ್ ಅದೃಷ್ಟವಶಾತ್ ಸಿಡಿಲಿನಿಂದ ಪಾರಾಗಿದ್ದಾರೆ. ಇನ್ನು ಈ ಪ್ರಕರಣದಿಂದ ಮಂಜುನಾಥ್ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು ಸರ್ಕಾರದಿಂದ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಗುಡುಗು ಸಹಿತ ಮಳೆಯಾಗುತ್ತಿದ್ದು, ಮೇಯಲು ಹೋಗಿದ್ದ ಹತ್ತಕ್ಕೂ ಹೆಚ್ಚು ಕುರಿಗಳು ಸಿಡಿಲು ಬಡಿದು ಸಾವನ್ನಪ್ಪಿವೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಜನಕ್ಕೆ ಒಂದು ಕಡೆ ಖುಷಿಯಾಗಿದ್ದರೆ ಮತ್ತೊಂದೆಡೆ ಸಂಕಷ್ಟವನ್ನೂ ಎದುರಿಸುವಂತಾಗಿದೆ. ಮಳೆ ಜೊತೆ ಗುಡುಗು-ಸಿಡಿಲಿನ ಆರ್ಭಟ ಜೋರಾಗಿದ್ದು, ಕೃಷಿ ಕೆಲಸ ಮಾಡಲು ಸಹ ರೈತರು ಭಯಪಡುತ್ತಿದ್ದಾರೆ. ಕಳೆದ 15 ದಿನಗಳಿಂದ ಜಿಲ್ಲೆಯಲ್ಲಿ ಸಾಕಷ್ಟು ಹಾನಿ ಸಂಭವಿಸಿದೆ. ಅರಕಲಗೂಡಿನಲ್ಲಿನಲ್ಲಿ ಈಗಾಗಲೇ ಸಾಕಷ್ಟು ಜಾನುವಾರುಗಳು ಸಾವಿಗೀಡಾಗಿವೆ. ಹಾಸನ ನಗರದಲ್ಲಿ ಕೂಡ ಸಿಡಿಲಿನ ಬಡಿತಕ್ಕೆ ಮರಗಳು ಧರೆಗುರುಳಿ ಕಾರುಗಳಿಗೆ ಸಾಕಷ್ಟು ಹಾನಿಯಾಗಿತ್ತು. ಅಷ್ಟೇ ಅಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು.

ಸಿಡಿಲಿಗೆ ಹತ್ತಕ್ಕೂ ಹೆಚ್ಚು ಕುರಿಗಳು ಬಲಿ

ಅದೇ ರೀತಿ ಅರಸೀಕೆರೆ ತಾಲೂಕಿನ ಸರಸೀಪುರದಲ್ಲಿ ಹತ್ತಾರು ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಕುರಿ ಮೇಯಿಸುತ್ತಿದ್ದ ಮಂಜುನಾಥ್ ಅದೃಷ್ಟವಶಾತ್ ಸಿಡಿಲಿನಿಂದ ಪಾರಾಗಿದ್ದಾರೆ. ಇನ್ನು ಈ ಪ್ರಕರಣದಿಂದ ಮಂಜುನಾಥ್ ಕುಟುಂಬಕ್ಕೆ ಲಕ್ಷಾಂತರ ರೂಪಾಯಿ ನಷ್ಟವಾಗಿದ್ದು ಸರ್ಕಾರದಿಂದ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಮನವಿ ಮಾಡಿದ್ದಾರೆ.

Intro:ಸಿಡಿಲು ಬಡಿದು ಹತ್ತಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ನರಸೀಪುರ ಗ್ರಾಮದಲ್ಲಿ ನಡೆದಿದೆ.

ಗುಡುಗು ಸಿಡಿಲು ಸಮೇತ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಗೆ ಜಿಲ್ಲೆಯ ಜನ ಒಂದು ಕಡೆ ಖುಷಿಯಾಗಿದ್ದರೆ ಸಂಕಷ್ಟವನ್ನು ಎದುರಿಸುತ್ತಿದ್ದಾನೆ.

ಮಳೆ ಬಂದರೆ ಸಾಕು ಈಗ ಕೃಷಿ ಕೆಲಸ ಮಾಡಲು ಕೂಡ ಭಯಪಡುವ ಸಂದರ್ಭ ಬಂದಿದೆ ಮಳೆ ಬಂದರೆ ಖುಷಿಯಾಗುವ ರೈತಾಪಿ ವರ್ಗ ಆದರೆ ಸಿಡಿಲಿನ ಆರ್ಭಟಕ್ಕೆ ಮಾತ್ರ ಭಯಭೀತರಾಗುತ್ತಾರೆ.

ಕಳೆದ ಹದಿನೈದು ದಿನಗಳಿಂದ ವಾಯುಭಾರ ಕುಸಿತದಿಂದ ಆಗುತ್ತಿರುವ ಮಳೆಯಿಂದ ಜಿಲ್ಲೆಯಲ್ಲೂ ಕೂಡ ಸಾಕಷ್ಟು ಹಾನಿ ಸಂಭವಿಸಿದೆ ಅರಕಲಗೂಡಿನಲ್ಲಿ ನಲ್ಲಿ ಈಗಾಗಲೇ ಸಾಕಷ್ಟು ಜಾನುವಾರುಗಳು ಸಾವಿಗೀಡಾಗಿವೆ. ಹಾಸನದಲ್ಲಿ ಕೂಡ ಹಿಂದೆ ಸಿಡಿಲಿನ ಬಡಿತಕ್ಕೆ ಮರಗಳು ಧರೆಗುರುಳಿ ಕಾರು ಗಳಿಗೆ ಸಾಕಷ್ಟು ಹಾನಿಯಾಗಿತ್ತು ಅಷ್ಟೇ ಅಲ್ಲದೆ ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು.

ಆದರೆ ಇವತ್ತು ಸುರಿದ ಮಳೆಯಿಂದ ಹತ್ತಾರು ಕುರಿಗಳು ಸಿಡಿಲಿ ಬಡಿತಕ್ಕೆ ಸಾವನ್ನಪ್ಪಿದ್ದು ಕುರಿ ಮೇಯಿಸುತ್ತಿದ್ದ ಮಂಜುನಾಥ್ ಅದೃಷ್ಟವಶಾತ್ ಸಿಡಿಲಿನಿಂದ ಪಾರಾಗಿದ್ದಾರೆ.

ಇನ್ನು ಈ ಪ್ರಕರಣದಿಂದ ಮಂಜುನಾಥ್ ಕುಟುಂಬಕ್ಕೆ ಲಕ್ಷಾಂತರ ರೂ ನಷ್ಟವಾಗಿದ್ದು ಸರ್ಕಾರದಿಂದ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ತಾಲೂಕು ಆಡಳಿತಕ್ಕೆ ಮನವಿ ಮಾಡಿಕೊಂಡಿದ್ದಾರೆ.

ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.Body:0Conclusion:0

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.