ಹಾಸನ: ಹಳ್ಳಿಗಳಲ್ಲಿ ಟ್ರ್ಯಾಕ್ಟರ್ ಮತ್ತು ಟ್ರ್ಯಾಲಿಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ಕು ಮಂದಿ ಖದೀಮರ ಹೆಡೆಮುರಿ ಕಟ್ಟುವಲ್ಲಿ ಹಾಸನ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಹಳ್ಳಿಗಳಲ್ಲಿ ಟ್ರ್ಯಾಕ್ಟರ್ ಕದಿಯುತ್ತಿದ್ದ ಖದೀಮರ ಬಂಧನ
ಹಳ್ಳಿಗಳಲ್ಲಿ ಟ್ರ್ಯಾಕ್ಟರ್ ಮತ್ತು ಟ್ರ್ಯಾಲಿಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ.
![ಹಳ್ಳಿಗಳಲ್ಲಿ ಟ್ರ್ಯಾಕ್ಟರ್ ಕದಿಯುತ್ತಿದ್ದ ಖದೀಮರ ಬಂಧನ tractors-thieves-arreted-in-hassan](https://etvbharatimages.akamaized.net/etvbharat/prod-images/768-512-5806742-thumbnail-3x2-surya.jpg?imwidth=3840)
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಈಚಲುಗುಡ್ಡೆ ಗ್ರಾಮದ ರವಿಗೌಡ (28), ನವೀನ್ ಕುಮಾರ್(28), ಸೋಮಶೇಖರ್(38) ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸೋಮನಹಳ್ಳಿ ಗ್ರಾಮದ ಸ್ವಾಮಿಗೌಡ(20) ಬಂಧಿತ ಆರೋಪಿಗಳು.
ಬಂಧಿತರು ಈಗಾಗಲೇ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4, ಹೊಳೆನರಸೀಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2, ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1, ಬೆಳ್ಳೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, ಆರೋಪಿಗಳಿಂದ ಸುಮಾರು 22 ಲಕ್ಷ ಮೌಲ್ಯದ ಮೂರು ಟ್ರ್ಯಾಕ್ಟರ್ಗಳು ಹಾಗೂ 9 ಟ್ರ್ಯಾಲಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ನಾಲ್ಕು ಮಂದಿ ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಹಾಸನ: ಹಳ್ಳಿಗಳಲ್ಲಿ ಟ್ರ್ಯಾಕ್ಟರ್ ಮತ್ತು ಟ್ರ್ಯಾಲಿಗಳನ್ನು ಕಳ್ಳತನ ಮಾಡುತ್ತಿದ್ದ ನಾಲ್ಕು ಮಂದಿ ಖದೀಮರ ಹೆಡೆಮುರಿ ಕಟ್ಟುವಲ್ಲಿ ಹಾಸನ ಜಿಲ್ಲೆಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಈಚಲುಗುಡ್ಡೆ ಗ್ರಾಮದ ರವಿಗೌಡ (28), ನವೀನ್ ಕುಮಾರ್(28), ಸೋಮಶೇಖರ್(38) ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸೋಮನಹಳ್ಳಿ ಗ್ರಾಮದ ಸ್ವಾಮಿಗೌಡ(20) ಬಂಧಿತ ಆರೋಪಿಗಳು.
ಬಂಧಿತರು ಈಗಾಗಲೇ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4, ಹೊಳೆನರಸೀಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ 2, ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1, ಬೆಳ್ಳೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದು, ಆರೋಪಿಗಳಿಂದ ಸುಮಾರು 22 ಲಕ್ಷ ಮೌಲ್ಯದ ಮೂರು ಟ್ರ್ಯಾಕ್ಟರ್ಗಳು ಹಾಗೂ 9 ಟ್ರ್ಯಾಲಿಗಳನ್ನು ವಶಪಡಿಸಿಕೊಳ್ಳುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ನಾಲ್ಕು ಮಂದಿ ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ತಾಲೂಕಿನ ಈಚಲುಗುಡ್ಡೆ ಗ್ರಾಮದ ರವಿಗೌಡ (28) ನವೀನ್ ಕುಮಾರ್(28) ಸೋಮಶೇಖರ್(38) ಹಾಗೂ ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕು ಸೋಮನಹಳ್ಳಿ ಗ್ರಾಮದ ಸ್ವಾಮಿಗೌಡ(20) ಬಂಧಿತ ಆರೋಪಿಗಳು.
ಬಂದಿದ್ದರು ಈಗಾಗಲೇ ಹಾಸನ ಜಿಲ್ಲೆಯ ಶ್ರವಣಬೆಳಗೊಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 4, ಹೊಳೆನರಸೀಪುರ ಗ್ರಾಮಾಂತರ ಠಾಣೆಯಲ್ಲಿ 2, ಮಂಡ್ಯ ಜಿಲ್ಲೆಯ ಕಿಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಪ್ರಕರಣ, ಬೆಳ್ಳೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 1 ಭಾಗಿಯಾಗಿದ್ದು ಆರೋಪಿಗಳಿಂದ ಸುಮಾರು 22 ಲಕ್ಷ ಮೌಲ್ಯದ ಮೂರು ಟ್ರ್ಯಾಕ್ಟರ್ ಗಳನ್ನು ಹಾಗೂ 9 ಟ್ರೇಲರ್ ಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಇನ್ನು ಆರೋಪಿಗಳನ್ನು ವಶಪಡಿಸಿಕೊಂಡು ಇಂದು ನಾಲ್ಕು ಮಂದಿ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ
Body:7203289
Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.