ETV Bharat / state

ನಮ್ಮೂರಾಗ 'ಮಣ್ಣು'ಹಾಳರು ಹೆಚ್ಚಾಗವ್ರೇ.. ದಯವಿಟ್ಟು ಕ್ರಮಕೈಗೊಳ್ರೀಪಾ..

ಕೆರೆ ಮಣ್ಣನ್ನು ಅಕ್ರಮವಾಗಿ ತೆಗೆಯುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾಲಗಾಮೆ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

author img

By

Published : May 10, 2019, 8:00 AM IST

ಅಕ್ರಮ ಮಣ್ಣು ದಂಧೆ

ಹಾಸನ: ಜಿಲ್ಲೆಯಲ್ಲಿ ಹಲವೆಡೆ ಗ್ರಾಮದಲ್ಲಿನ ಕೆರೆ ಮಣ್ಣನ್ನು ಕೆಲವರು ಅಕ್ರಮವಾಗಿ ತೆಗೆಯುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಲೂಕಿನ ಸಾಲಗಾಮೆ ಗ್ರಾಮದ ಸರ್ವೆ ನಂ.158ರ ಸುಮಾರು 2.34 ಗುಂಟೆ ಪ್ರದೇಶದಲ್ಲಿ ಸರ್ಕಾರಿ ಮುಗುಳಿಕಟ್ಟೆ ಇದ್ದು, ಶಂಖ ಗ್ರಾಮಕ್ಕೆ ಹೋಗುವ ದಾರಿಯ ಪಕ್ಕದಲ್ಲಿ ಇದೆ. ಈ ಕಟ್ಟೆಯಿಂದ ಸುಮಾರು 15 ರಿಂದ 20 ಅಡಿ ಆಳದಲ್ಲಿ ಕೆಲವರು ಅಕ್ರಮವಾಗಿ ಮಣ್ಣು ತೆಗೆದು ತಮ್ಮ ಜಮೀನಿಗೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅಕ್ರಮ ಮಣ್ಣು ದಂಧೆ

ದನ,ಕರುಗಳು ನೀರು ಕುಡಿಯಲು ಕಟ್ಟೆ ಒಳಗಡೆ ಇಳಿದರೆ ಮೇಲೆ ಬರಲು ಸಾಧ್ಯವಿಲ್ಲ ಎಂದು ದೂರಿದ್ದಾರೆ. ಈ ಬಗ್ಗೆ ಗ್ರಾಮದ ಯಾರಾದರೂ ಪ್ರಶ್ನೆ ಮಾಡಿದರೆ ಜಗಳಕ್ಕೆ ಬರುತ್ತಾರೆ. ಈ ಬಗ್ಗೆ ಸ್ಥಳೀಯ ನಾಡ ಕಚೇರಿ, ತಹಶೀಲ್ದಾರ್, ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

ಹಾಸನ: ಜಿಲ್ಲೆಯಲ್ಲಿ ಹಲವೆಡೆ ಗ್ರಾಮದಲ್ಲಿನ ಕೆರೆ ಮಣ್ಣನ್ನು ಕೆಲವರು ಅಕ್ರಮವಾಗಿ ತೆಗೆಯುತ್ತಿದ್ದು, ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ತಾಲೂಕಿನ ಸಾಲಗಾಮೆ ಗ್ರಾಮದ ಸರ್ವೆ ನಂ.158ರ ಸುಮಾರು 2.34 ಗುಂಟೆ ಪ್ರದೇಶದಲ್ಲಿ ಸರ್ಕಾರಿ ಮುಗುಳಿಕಟ್ಟೆ ಇದ್ದು, ಶಂಖ ಗ್ರಾಮಕ್ಕೆ ಹೋಗುವ ದಾರಿಯ ಪಕ್ಕದಲ್ಲಿ ಇದೆ. ಈ ಕಟ್ಟೆಯಿಂದ ಸುಮಾರು 15 ರಿಂದ 20 ಅಡಿ ಆಳದಲ್ಲಿ ಕೆಲವರು ಅಕ್ರಮವಾಗಿ ಮಣ್ಣು ತೆಗೆದು ತಮ್ಮ ಜಮೀನಿಗೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಅಕ್ರಮ ಮಣ್ಣು ದಂಧೆ

ದನ,ಕರುಗಳು ನೀರು ಕುಡಿಯಲು ಕಟ್ಟೆ ಒಳಗಡೆ ಇಳಿದರೆ ಮೇಲೆ ಬರಲು ಸಾಧ್ಯವಿಲ್ಲ ಎಂದು ದೂರಿದ್ದಾರೆ. ಈ ಬಗ್ಗೆ ಗ್ರಾಮದ ಯಾರಾದರೂ ಪ್ರಶ್ನೆ ಮಾಡಿದರೆ ಜಗಳಕ್ಕೆ ಬರುತ್ತಾರೆ. ಈ ಬಗ್ಗೆ ಸ್ಥಳೀಯ ನಾಡ ಕಚೇರಿ, ತಹಶೀಲ್ದಾರ್, ಉಪ ವಿಭಾಗಾಧಿಕಾರಿಗೆ ಮನವಿ ಸಲ್ಲಿಸಲಾಗಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ.

Intro:ಅಕ್ರಮ ಮಣ್ಣು ತೆಗೆಯುವುದನ್ನು ನಿಲ್ಲಿಸುವಂತೆ ಗ್ರಾಮಸ್ಥರು ಮನವಿ 

ಹಾಸನ:ಸಾಲಗಾಮೆ ಗ್ರಾಮದ ಕೆರೆ ಮಣ್ಣನ್ನು ಕೆಲವರು ಅಕ್ರಮವಾಗಿ ತೆಗೆಯುತ್ತಿದ್ದು, ಅವರ
ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾಲಗಾಮೆ ಗ್ರಾಮಸ್ಥರು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ತಾಲ್ಲೂಕಿನ ಸಾಲಗಾಮೆ ಗ್ರಾಮದ ಸರ್ವೆ ನಂ.158ರ ಸುಮಾರು 2.34 ಗುಂಟೆ ಪ್ರದೇಶದಲ್ಲಿ ಸರ್ಕಾರಿ ಮುಗುಳಿಕಟ್ಟೆ ಇದ್ದು, ಶಂಖ ಗ್ರಾಮಕ್ಕೆ ಹೋಗುವ ದಾರಿಯ ಪಕ್ಕದಲ್ಲಿ ಇದೆ. ಈ ಕಟ್ಟೆಯಿಂದ ಸುಮಾರು 15 ರಿಂದ 20 ಅಡಿ ಆಳದಲ್ಲಿ ಕೆಲವರು ಅಕ್ರಮವಾಗಿ ಮಣ್ಣು ತೆಗೆದು ತಮ್ಮ ಜಮೀನಿಗೆ ಬಳಸಿಕೊಳ್ಳುತ್ತಿದ್ದಾರೆ. ಕೂಡಲೇ ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕಟ್ಟೆಯ ಪಕ್ಕದಲ್ಲಿ ನಮ್ಮ ಜಮೀನುಗಳೂ ಇದ್ದು, ಮಣ್ಣು
ತೆಗೆಯುತ್ತಿರುವುದರಿಂದ ಕಟ್ಟೆ ಕುಸಿಯುವ ಹಂತದಲ್ಲಿದೆ. ದನ,ಕರುಗಳು ನೀರು ಕುಡಿಯಲು ಕಟ್ಟೆ ಒಳಗಡೆ ಇಳಿದರೆ 
ಮೇಲೆ ಬರಲು ಸಾಧ್ಯವಿಲ್ಲ ಎಂದು ದೂರಿದರು. 
ರಘು,ಬಾಲಣ್ಣ, ಹೆಚ್.ಡಿ.ಮಲ್ಲೇಶ್,ವಸಂತಲಕ್ಷ್ಮಿ ತಿಂಗಳಿನಿಂದ ನಿರಂತರವಾಗಿ ಕಟ್ಟೆಯಿಂದ ಮಣ್ಣನ್ನು ತೆಗೆಯುತ್ತಿದ್ದಾರೆ.ಈ ಬಗ್ಗೆ ಗ್ರಾಮದ ಯಾರಾದರೂ ಪ್ರಶ್ನೆ ಮಾಡಿದರೆ ಜಗಳಕ್ಕೆ ಬರುತ್ತಾರೆ.ಈ ಬಗ್ಗೆ ಸ್ಥಳೀಯ ನಾಡ ಕಛೇರಿ,ತಹಸೀಲ್ದಾರ್ ಕಚೇರಿ, ಉಪ ವಿಭಾಗಾಧಿಕಾರಿ ಕಚೇರಿ ಹಾಗೂ ಜಿಲ್ಲಾಡಳಿತಕ್ಕೂ ಮನವಿ ಸಲ್ಲಿಸಲಾಗಿದ್ದು, ಇದುವರೆಗೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಅಳಲು ತೋಡಿಕೊಂಡರು.

- ಕೆ.ಸಿ.ಮಣಿಕಂಠ, ಈಟಿವಿ ಭಾರತ, ಹಾಸನ










Body:0


Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.