ಹಾಸನ/ಬಾಣಾವಾರ: ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಅಕ್ರಮವಾಗಿ ಮಾಂಸ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದ ಆರೋಪಿಗಳ ಪತ್ತೆಗಾಗಿ ಅರಣ್ಯ ಇಲಾಖೆ ಪೊಲೀಸರು ಬಲೆ ಬಿಸಿದ್ದಾರೆ.
ಅರಸೀಕೆರೆ ವಲಯ ಅರಣ್ಯ ವ್ಯಾಪ್ತಿಯ ಬಾಣಾವರ ಸಮೀಪವಿರುವ ಜಾಕನಕಟ್ಟೆ ಮೀಸಲು ಅರಣ್ಯದಲ್ಲಿ ಕೊಟ್ರೇಶ್ ಮತ್ತು ನಂಜುಂಡಪ್ಪ ಎಂಬ ಆರೋಪಿಗಳು ಸಿಡಿಮದ್ದು ಬಳಸಿ ಕಾಡುಹಂದಿ ಬೇಟೆಯಾಡಿ ಮಾಂಸ ಸಾಗಾಣಿಕೆ ಮಾಡಲು ಪ್ರಯತ್ನಿಸಿದ್ದರು.
ಈ ಕುರಿತು ಮಾಹಿತಿ ತಿಳಿದು ದಾಳಿ ನಡೆಸಿದ ಅರಣ್ಯ ಇಲಾಖೆ ಪೊಲೀಸರು 3.9 ಕೆಜಿ ಕಾಡುಹಂದಿ ಮಾಂಸ ಮತ್ತು ಕೃತ್ಯಕ್ಕೆ ಬಳಸಿದ ಒಂದು ದ್ವಿಚಕ್ರವಾಹನ ಹಾಗೂ 3 ಮಾರಕಾಸ್ತ್ರಗಳನ್ನ ವಶಪಡಿಸಿಕೊಂಡು ಆರೋಪಿಗಳ ವಿರುದ್ದ ವನ್ಯ ಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ನಾಪತ್ತೆಯಾದವರ ಶೋಧಕಾರ್ಯ ನಡೆಸಿದ್ದಾರೆ.