ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿರುವ ಭೀಕರ ಮಳೆ ಮತ್ತೊಂದು ಜೀವವನ್ನು ಬಲಿ ಪಡೆದಿದೆ. ಕಾಲು ಜಾರಿ ಕಾಲುವೆಗೆ ಬಿದ್ದಿದ್ದ ಬಾಲಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ.
ಸೋಯೆಬ್ ರಾಣೆಬೆನ್ನೂರು(14) ನೀರಲ್ಲಿ ಕೊಚ್ಚಿಹೋದ ಬಾಲಕ. ದುರ್ಗಾದೇವಿ ಕೆರೆಗೆ ಹೋಗುವ ಕಾಲುವೆ ನೀರಿನಲ್ಲಿ ಬಾಲಕ ಕೊಚ್ಚಿ ಹೋಗಿದ್ದಾನೆ. ಭಾರಿ ಮಳೆಯಿಂದ ಕೆರೆಗೆ ಹರಿಯುತ್ತಿರುವ ನೀರನ್ನು ನೋಡಲು ನಿಂತಿದ್ದ ವೇಳೆ ಕಾಲುವೆಗೆ ಕಾಲು ಜಾರಿ ಬಿದ್ದಿದ್ದರಿಂದ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಬಾಲಕನಿಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಸ್ಥಳೀಯರು ಶೋಧಕಾರ್ಯ ನಡೆಸಿದ್ದಾರೆ. ಹಿರೇಕೆರೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.