ETV Bharat / state

ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಬೈಕ್​ ಸವಾರರು: ಚಿಕಿತ್ಸೆ ಫಲಿಸದೆ ಸಾವು

author img

By

Published : Nov 18, 2020, 8:43 PM IST

Updated : Nov 18, 2020, 9:14 PM IST

ನಿನ್ನೆ ರಾತ್ರಿ ಹಾವೇರಿ ತಾಲೂಕಿನ ಕುಳೇನೂರ ಕ್ರಾಸ್ ಬಳಿ ಕಾರ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ಈ ಅಪಘಾತದಲ್ಲಿ ಬೈಕ್​ ಸವಾರರು ಗಾಯಗೊಂಡಿದ್ದರು. ಇವರು ಇಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಬೈಕ್​ಗೆ ಕಾರ್​ ಡಿಕ್ಕಿ
ಬೈಕ್​ಗೆ ಕಾರ್​ ಡಿಕ್ಕಿ

ಹಾವೇರಿ: ಬೈಕ್​ಗೆ ಕಾರ್​ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಬೈಕ್​ಗೆ ಕಾರ್​ ಡಿಕ್ಕಿ

ನಿನ್ನೆ ರಾತ್ರಿ ಹಾವೇರಿ ತಾಲೂಕಿನ ಕುಳೇನೂರ ಕ್ರಾಸ್ ಬಳಿ ಕಾರ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್​ ಸವಾರರು
ಅಪಘಾತದಲ್ಲಿ ಮೃತಪಟ್ಟ ಬೈಕ್​ ಸವಾರರು

ಮೃತರನ್ನು ಸುರೇಶ ತಿಮ್ಮಣ್ಣವರ ಹಾಗೂ ಉಡಚಪ್ಪ ದೊಡ್ಡಮನಿ ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಹುಲ್ಲಾಳ ಮತ್ತು ತುಮರಿಕೊಪ್ಪ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಕೆಲಸ‌ ಮಾಡ್ತಿದ್ರು. ಹಾವೇರಿಯಿಂದ ಚಿಕ್ಕಹುಲ್ಲಾಳ ಗ್ರಾಮದತ್ತ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಹಾವೇರಿ: ಬೈಕ್​ಗೆ ಕಾರ್​ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಿಸದೆ ಇಂದು ಮೃತಪಟ್ಟಿದ್ದಾರೆ.

ಬೈಕ್​ಗೆ ಕಾರ್​ ಡಿಕ್ಕಿ

ನಿನ್ನೆ ರಾತ್ರಿ ಹಾವೇರಿ ತಾಲೂಕಿನ ಕುಳೇನೂರ ಕ್ರಾಸ್ ಬಳಿ ಕಾರ್​ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿತ್ತು. ರಕ್ತದ ಮಡುವಿನಲ್ಲಿ ಬಿದ್ದಿದ್ದ ಇಬ್ಬರನ್ನು ಸ್ಥಳೀಯರು ಆ್ಯಂಬುಲೆನ್ಸ್ ಮೂಲಕ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ರು. ಆದ್ರೆ ಚಿಕಿತ್ಸೆ ಫಲಿಸದೆ ಇಬ್ಬರೂ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್​ ಸವಾರರು
ಅಪಘಾತದಲ್ಲಿ ಮೃತಪಟ್ಟ ಬೈಕ್​ ಸವಾರರು

ಮೃತರನ್ನು ಸುರೇಶ ತಿಮ್ಮಣ್ಣವರ ಹಾಗೂ ಉಡಚಪ್ಪ ದೊಡ್ಡಮನಿ ಎಂದು ಗುರುತಿಸಲಾಗಿದೆ. ಮೃತರು ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಚಿಕ್ಕಹುಲ್ಲಾಳ ಮತ್ತು ತುಮರಿಕೊಪ್ಪ ಗ್ರಾಮದಲ್ಲಿ ಗ್ರಾಮ ಸಹಾಯಕರಾಗಿ ಕೆಲಸ‌ ಮಾಡ್ತಿದ್ರು. ಹಾವೇರಿಯಿಂದ ಚಿಕ್ಕಹುಲ್ಲಾಳ ಗ್ರಾಮದತ್ತ ಬೈಕ್​ನಲ್ಲಿ ತೆರಳುತ್ತಿದ್ದಾಗ ಈ ದುರ್ಘಟನೆ ನಡೆದಿತ್ತು. ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Last Updated : Nov 18, 2020, 9:14 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.