ETV Bharat / state

ರಾಣೆಬೆನ್ನೂರು ಉಪಚುನಾವಣೆ: ಐವರು ಬಿಜೆಪಿ ಆಕಾಂಕ್ಷಿಗಳಲ್ಲಿ ಪೂಜಾರ್​​ಗೆ ಮಣೆ - ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ

ಅನರ್ಹ ಶಾಸಕ ಆರ್.ಶಂಕರ್​ಗೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆಗೆ ಟಿಕೆಟ್ ನೀಡೋದಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಟಿಕೆಟ್ ಹಂಚಿಕೆ ಕಗ್ಗಂಟಾಗಿತ್ತು. ಇದೀಗ ಬಿಜೆಪಿ ಅಭ್ಯರ್ಥಿಯಾಗಿ ಅರುಣ್​ ಕುಮಾರ್ ಪೂಜಾರ್​ ಹೆಸರು ಅಂತಿಮವಾಗಿದೆ.

ರಾಣೆಬೆನ್ನೂರು ಉಪಚುನಾವಣೆ
author img

By

Published : Nov 15, 2019, 10:29 AM IST

Updated : Nov 15, 2019, 11:04 AM IST

ಹಾವೇರಿ: ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲ ಬಗೆಹರಿದಿದೆ. ಬಿಜೆಪಿ ಅಭ್ಯರ್ಥಿಯಾಗಿ ಅರುಣ್​ ಕುಮಾರ್ ಪೂಜಾರ ಹೆಸರು ಅಂತಿಮವಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದ ಆಕಾಂಕ್ಷಿಗಳು ಸ್ವಕ್ಷೇತ್ರದತ್ತ ಮುಖ ಮಾಡುತ್ತಿದ್ದಾರೆ.

Ranebennuru
ಅರುಣ್​ ಕುಮಾರ್ ಪೂಜಾರ್​- ಬಿಜೆಪಿ ಅಭ್ಯರ್ಥಿ

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ಮೊದಲು ಬಿಜೆಪಿ ಅಭ್ಯರ್ಥಿಯ ಹೆಸರಿನ ಪಟ್ಟಿಯಲ್ಲಿ ಆರ್ ಶಂಕರ್ ಹೆಸರು ಕೇಳಿಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್, ಆರ್ ಶಂಕರ್​ಗೆ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ, ಅರುಣ್​ ಕುಮಾರ್​​ ಪೂಜಾರ್​, ಡಾ.ಬಸವರಾಜ ಕೇಲಗಾರ, ಸಚಿವ ಈಶ್ವರಪ್ಪ ಪುತ್ರ ಕಾಂತೇಶ, ಪ್ರಕಾಶ ಬುರಡೀಕಟ್ಟಿ ಸೇರಿ ಹಲವರು ರೇಸ್​​ನಲ್ಲಿದ್ದರು. ಅನರ್ಹ ಶಾಸಕ ಆರ್.ಶಂಕರ್​ಗೆ ಟಿಕೆಟ್ ನೀಡೋದಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಟಿಕೆಟ್ ಹಂಚಿಕೆ ಕಗ್ಗಂಟಾಗಿತ್ತು. ಇದೀಗ ಸಿಎಂ ಯಡಿಯೂರಪ್ಪ ಅವರು, ಅರುಣ್​ ಕುಮಾರ್ ಪೂಜಾರ ಹೆಸರನ್ನು ಪ್ರಕಟಿಸಿದ್ದಾರೆ.

ಅರುಣ್​ ಕುಮಾರ್ ಪೂಜಾರ, 2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್​​ನ ಕೋಳಿವಾಡ ವಿರುದ್ಧ ಸೋಲುಂಡಿದ್ದರು.

ಹಾವೇರಿ: ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಗೊಂದಲ ಬಗೆಹರಿದಿದೆ. ಬಿಜೆಪಿ ಅಭ್ಯರ್ಥಿಯಾಗಿ ಅರುಣ್​ ಕುಮಾರ್ ಪೂಜಾರ ಹೆಸರು ಅಂತಿಮವಾಗಿದೆ. ಇದರಿಂದಾಗಿ ಬೆಂಗಳೂರಿನಲ್ಲೇ ಬೀಡುಬಿಟ್ಟಿದ್ದ ಆಕಾಂಕ್ಷಿಗಳು ಸ್ವಕ್ಷೇತ್ರದತ್ತ ಮುಖ ಮಾಡುತ್ತಿದ್ದಾರೆ.

Ranebennuru
ಅರುಣ್​ ಕುಮಾರ್ ಪೂಜಾರ್​- ಬಿಜೆಪಿ ಅಭ್ಯರ್ಥಿ

ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ಮೊದಲು ಬಿಜೆಪಿ ಅಭ್ಯರ್ಥಿಯ ಹೆಸರಿನ ಪಟ್ಟಿಯಲ್ಲಿ ಆರ್ ಶಂಕರ್ ಹೆಸರು ಕೇಳಿಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್, ಆರ್ ಶಂಕರ್​ಗೆ ಟಿಕೆಟ್ ನಿರಾಕರಿಸಿದ ಬೆನ್ನಲ್ಲೇ ಆಕಾಂಕ್ಷಿಗಳು ಹೆಚ್ಚಾಗಿದ್ದರು. ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ, ಅರುಣ್​ ಕುಮಾರ್​​ ಪೂಜಾರ್​, ಡಾ.ಬಸವರಾಜ ಕೇಲಗಾರ, ಸಚಿವ ಈಶ್ವರಪ್ಪ ಪುತ್ರ ಕಾಂತೇಶ, ಪ್ರಕಾಶ ಬುರಡೀಕಟ್ಟಿ ಸೇರಿ ಹಲವರು ರೇಸ್​​ನಲ್ಲಿದ್ದರು. ಅನರ್ಹ ಶಾಸಕ ಆರ್.ಶಂಕರ್​ಗೆ ಟಿಕೆಟ್ ನೀಡೋದಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಟಿಕೆಟ್ ಹಂಚಿಕೆ ಕಗ್ಗಂಟಾಗಿತ್ತು. ಇದೀಗ ಸಿಎಂ ಯಡಿಯೂರಪ್ಪ ಅವರು, ಅರುಣ್​ ಕುಮಾರ್ ಪೂಜಾರ ಹೆಸರನ್ನು ಪ್ರಕಟಿಸಿದ್ದಾರೆ.

ಅರುಣ್​ ಕುಮಾರ್ ಪೂಜಾರ, 2013 ರಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಕಾಂಗ್ರೆಸ್​​ನ ಕೋಳಿವಾಡ ವಿರುದ್ಧ ಸೋಲುಂಡಿದ್ದರು.

Intro:ನಾಮಪತ್ರ ಸಲ್ಲಿಕೆಗೆ ದಿನಗಣನೆ ಆರಂಭವಾದರು ಸಹ ಹಾವೇರಿ ಜಿಲ್ಲೆ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಗೊಂದಲ ಮುಂದುವರೆದಿದೆ.
ಬೆಂಗಳೂರಿನಲ್ಲೇ ಅಕಾಂಕ್ಷಿಗಳ ದಂಡು ಬೀಡುಬಿಟ್ಟಿದೆ.
ಹಾವೇರಿ ಜಿಲ್ಲೆ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರಕ್ಕೆ ಮೊದಲು ಬಿಜೆಪಿ ಅಭ್ಯರ್ಥಿಯ ಹೆಸರಿನ ಪಟ್ಟಿಯಲ್ಲಿ ಆರ್ ಶಂಕರ್ ಹೆಸರು ಕೇಳಿಬಂದಿತ್ತು. ಆದರೆ ಬಿಜೆಪಿ ಹೈಕಮಾಂಡ್
ಆರ್.ಶಂಕರಗೆ ಟಿಕೆಟ್ ನಿರಾಕರಣ ಮಾಡಿದ ಬೆನ್ನಲ್ಲಿಯೇ ಅಭ್ಯರ್ಥಿ ಆಕಾಂಕ್ಷೆಗಳು ಹೆಚ್ಚಾಗಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ, ಅರುಣಕುಮಾರ ಪೂಜಾರ, ಡಾ.ಬಸವರಾಜ ಕೇಲಗಾರ, ಸಚಿವ ಈಶ್ವರಪ್ಪ ಪುತ್ರ ಕಾಂತೇಶ, ಪ್ರಕಾಶ ಬುರಡೀಕಟ್ಟಿ ಸೇರಿ ಹಲವರು ರೇಸ್ ನಲ್ಲಿದ್ದಾರೆ. ಇದೀಗ ಇವರ ಜೊತೆ
ಜಿಲ್ಲಾ ಪಂಚಾಯ್ತಿ ಸದಸ್ಯ ಸಿದ್ದರಾಜ ಕಲಕೋಟಿ ಹೆಸರು ಸಹ ಕೇಳಲಾರಂಭಿಸಿದೆ..
ಅನರ್ಹ ಶಾಸಕ ಆರ್.ಶಂಕರಗೆ ಟಿಕೆಟ್ ನೀಡೋದಕ್ಕೆ ಸ್ಥಳೀಯ ಬಿಜೆಪಿ ಮುಖಂಡರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಟಿಕೆಟ್ ಹಂಚಿಕೆ ಕಗ್ಗಂಟಾದಂತಾಗಿದೆಡಿಸೆಂಬರ್ ಐದರಂದು ಉಪಚುನಾವಣೆ ನಡೆಯಲಿರುವ ರಾಣೆಬೆನ್ನೂರು ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಯಾರಾಗಲಿದ್ದಾರೆ ಎನ್ನುವದರ ಮೇಲೆ ಆಖಾಡದ ಸ್ಪಷ್ಟ ಚಿತ್ರಣ ಸಿಗಲಿದೆ.Body:sameConclusion:same
Last Updated : Nov 15, 2019, 11:04 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.