ETV Bharat / state

'ಕೋಡಿಹಳ್ಳಿ ಚಂದ್ರಶೇಖರ್​ ಸಾರಿಗೆ ನೌಕರರ ಒಗ್ಗಟ್ಟು ಮುರಿದಿದ್ದಾರೆ'

author img

By

Published : Dec 13, 2020, 7:58 PM IST

ಕೋಡಿಹಳ್ಳಿ ಚಂದ್ರಶೇಖರ್​ ಬಹಳ ದೊಡ್ಡ ಹೋರಾಟಗಾರರು. ರೈತರ ಪರವಾಗಿ ಹೋರಾಟ ಮಾಡಿ, ಮನೆ ಮಠ ಎಲ್ಲವನ್ನೂ ಕಳೆದುಕೊಂಡಿದ್ದಾರೆ- ಕೃಷಿ ಸಚಿವ ಬಿ.ಸಿ.ಪಾಟೀಲ್ ಲೇವಡಿ ಮಾಡಿದ್ದಾರೆ.

Agriculture Minister BC Patil
ಕೃಷಿ ಸಚಿವ ಬಿ.ಸಿ.ಪಾಟೀಲ್​

ಹಾವೇರಿ: ಕೋಡಿಹಳ್ಳಿ ಚಂದ್ರಶೇಖರ್​ ಸಾರಿಗೆ ನೌಕರರ ಒಗ್ಗಟ್ಟನ್ನು ಮುರಿದಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್​ ಆರೋಪಿಸಿದರು.

ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್​ ವಾಗ್ದಾಳಿ

ಜಿಲ್ಲೆಯ ಹಿರೇಕೆರೂರು ಪಟ್ಟಣದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಬೆಂಬಲವಾಗಿ ಇರುತ್ತೇನೆ ಎಂದು ಅವರನ್ನು ಎರಡು ತಂಡಗಳನ್ನಾಗಿ ಮಾಡಿದ್ದಾರೆ. ಅವರು ಸಾರಿಗೆ ನೌಕರರ ಪರವಾಗಿ ಇರುತ್ತೇನೆ ಎಂದು ಹೋರಾಟ ಮಾಡೋದು ಬಹಳ ವಿಪರ್ಯಾಸ. ಕೋಡಿಹಳ್ಳಿ ಚಂದ್ರಶೇಖರ್​ ಬಹಳ ದೊಡ್ಡ ಹೋರಾಟಗಾರರು. ರೈತರ ಪರವಾಗಿ ಹೋರಾಟ ಮಾಡಿ, ಮನೆ ಮಠ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಒಂದು ಗುಡಿಸಲಿನಲ್ಲಿ ವಾಸ ಮಾಡ್ತಾರೆ. ಅವರು ಅಂತಹ ಒಬ್ಬ ಮೇಧಾವಿ ಹೋರಾಟಗಾರರು ಎಂದು ಸಚಿವ ಪಾಟೀಲ್​ ಲೇವಡಿ ಮಾಡಿದರು.

ಓದಿ: ಸಾರಿಗೆ ಸಿಬ್ಬಂದಿಯೊಂದಿಗಿನ ಸಂಧಾನ ಸಭೆ ಸಫಲ: ನಾಳೆಯಿಂದಲೇ ಬಸ್ ಸಂಚಾರ ಆರಂಭ

ಸಾರಿಗೆ ನೌಕರರನ್ನು ಬೆಂಬಲಿಸಿ ಆ ನಿಗಮಗಳನ್ನು ಹಾಳು ಮಾಡೋ ವ್ಯವಸ್ಥೆಗೆ ಕೋಡಿಹಳ್ಳಿ ಚಂದ್ರಶೇಖರ ಕೈ ಹಾಕಬಾರದು. ನೌಕರರ ಹತ್ತು ಬೇಡಿಕೆಗಳಲ್ಲಿ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದೆ. ಇದು ಇತಿಹಾಸ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸಾಧ್ಯವಿಲ್ಲದ ಮಾತು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೋವಿಡ್-19 ಮತ್ತು ಆರ್ಥಿಕ ಸಂಕಷ್ಟದ ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ಒಂಬತ್ತು ಬೇಡಿಕೆ ಈಡೇರಿಸುವ ಭರವಸೆ ನೀಡಿದೆ ಎಂದು ಅವರು ತಿಳಿಸಿದರು.

ಹಾವೇರಿ: ಕೋಡಿಹಳ್ಳಿ ಚಂದ್ರಶೇಖರ್​ ಸಾರಿಗೆ ನೌಕರರ ಒಗ್ಗಟ್ಟನ್ನು ಮುರಿದಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್​ ಆರೋಪಿಸಿದರು.

ಕೋಡಿಹಳ್ಳಿ ಚಂದ್ರಶೇಖರ ವಿರುದ್ಧ ಕೃಷಿ ಸಚಿವ ಬಿ.ಸಿ.ಪಾಟೀಲ್​ ವಾಗ್ದಾಳಿ

ಜಿಲ್ಲೆಯ ಹಿರೇಕೆರೂರು ಪಟ್ಟಣದ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಸಾರಿಗೆ ನೌಕರರಿಗೆ ಬೆಂಬಲವಾಗಿ ಇರುತ್ತೇನೆ ಎಂದು ಅವರನ್ನು ಎರಡು ತಂಡಗಳನ್ನಾಗಿ ಮಾಡಿದ್ದಾರೆ. ಅವರು ಸಾರಿಗೆ ನೌಕರರ ಪರವಾಗಿ ಇರುತ್ತೇನೆ ಎಂದು ಹೋರಾಟ ಮಾಡೋದು ಬಹಳ ವಿಪರ್ಯಾಸ. ಕೋಡಿಹಳ್ಳಿ ಚಂದ್ರಶೇಖರ್​ ಬಹಳ ದೊಡ್ಡ ಹೋರಾಟಗಾರರು. ರೈತರ ಪರವಾಗಿ ಹೋರಾಟ ಮಾಡಿ, ಮನೆ ಮಠ ಎಲ್ಲವನ್ನೂ ಕಳೆದುಕೊಂಡಿದ್ದಾರೆ. ಬೆಂಗಳೂರಿನಲ್ಲಿ ಒಂದು ಗುಡಿಸಲಿನಲ್ಲಿ ವಾಸ ಮಾಡ್ತಾರೆ. ಅವರು ಅಂತಹ ಒಬ್ಬ ಮೇಧಾವಿ ಹೋರಾಟಗಾರರು ಎಂದು ಸಚಿವ ಪಾಟೀಲ್​ ಲೇವಡಿ ಮಾಡಿದರು.

ಓದಿ: ಸಾರಿಗೆ ಸಿಬ್ಬಂದಿಯೊಂದಿಗಿನ ಸಂಧಾನ ಸಭೆ ಸಫಲ: ನಾಳೆಯಿಂದಲೇ ಬಸ್ ಸಂಚಾರ ಆರಂಭ

ಸಾರಿಗೆ ನೌಕರರನ್ನು ಬೆಂಬಲಿಸಿ ಆ ನಿಗಮಗಳನ್ನು ಹಾಳು ಮಾಡೋ ವ್ಯವಸ್ಥೆಗೆ ಕೋಡಿಹಳ್ಳಿ ಚಂದ್ರಶೇಖರ ಕೈ ಹಾಕಬಾರದು. ನೌಕರರ ಹತ್ತು ಬೇಡಿಕೆಗಳಲ್ಲಿ ಒಂಬತ್ತು ಬೇಡಿಕೆಗಳ ಈಡೇರಿಕೆಗೆ ಸರ್ಕಾರ ಭರವಸೆ ನೀಡಿದೆ. ಇದು ಇತಿಹಾಸ. ಸರ್ಕಾರಿ ನೌಕರರನ್ನಾಗಿ ಪರಿಗಣಿಸುವುದು ಸಾಧ್ಯವಿಲ್ಲದ ಮಾತು ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಕೋವಿಡ್-19 ಮತ್ತು ಆರ್ಥಿಕ ಸಂಕಷ್ಟದ ಇಂತಹ ಪರಿಸ್ಥಿತಿಯಲ್ಲೂ ಸರ್ಕಾರ ಒಂಬತ್ತು ಬೇಡಿಕೆ ಈಡೇರಿಸುವ ಭರವಸೆ ನೀಡಿದೆ ಎಂದು ಅವರು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.