ಹಾವೇರಿ: ದೆಹಲಿಗೆ ಹೋಗಿ ಬಂದವರ 12 ಜನರ ಗಂಟಲು ದ್ರವ, ರಕ್ತದ ಮಾದರಿಯನ್ನು ಶಿವಮೊಗ್ಗದ ಪ್ರಯೋಗಾಲಯಕ್ಕೆ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಜೇಂದ್ರ ದೊಡ್ಡಮನಿ ತಿಳಿಸಿದರು.
ಕೊರೊನಾ ಸೋಂಕು ಹರಡೋ ಭೀತಿ ಹಿನ್ನೆಲೆ ಜಿಲ್ಲಾಡಳಿತ ಈ ಕ್ರಮಕ್ಕೆ ಮುಂದಾಗಿದೆ. 12 ಜನ ನಿಜಾಮುದ್ದೀನ್ ಸಭೆಗೆ ಹೋಗಿ ಬಂದಿರೋ ಮಾಹಿತಿ ಇಲ್ಲ. ಆದರೆ, ದೆಹಲಿಯಿಂದ ವಾಪಸಾದ ಕಾರಣ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದರು.
ಶಿವಮೊಗ್ಗ ಪ್ರಯೋಗಾಲಯದಿಂದ ನಾಳೆ ವರದಿ ಬರಲಿದೆ. ಇದುವರೆಗೂ ಯಾರಲ್ಲೂ ಆರೋಗ್ಯದ ಸಮಸ್ಯೆ ಕಾಣಿಸಿಕೊಂಡಿಲ್ಲ ಎಂದಿದ್ದಾರೆ.