ETV Bharat / state

13 ವರ್ಷದಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಗಲೀಕರಣಕ್ಕೆ ಒತ್ತಾಯಿಸಿ ಬ್ಯಾಡಗಿ ಬಂದ್ - protest by the public for demanding road widening

ಹಾವೇರಿ ಜಿಲ್ಲೆಯ ಬ್ಯಾಡಗಿ ಪಟ್ಟಣದ ಮುಖ್ಯರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಬ್ಯಾಡಗಿ ಬಂದ್ ಗೆ ಕರೆ ನೀಡಿದ್ದವು.

byadagi-bandh-demanding-road-widening
13 ವರ್ಷದಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಬ್ಯಾಡಗಿ ಬಂದ್
author img

By

Published : Jun 27, 2022, 5:52 PM IST

ಹಾವೇರಿ : ಕಳೆದ 13 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲೆಯ ಬ್ಯಾಡಗಿ ಪಟ್ಟಣದ ಮುಖ್ಯರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಬ್ಯಾಡಗಿ ಪಟ್ಟಣ ಬಂದ್ ಗೆ ಕರೆ ನೀಡಿದ್ದವು. ಸಾಗರ ಗಜೇಂದ್ರಗಡ ಸಂಪರ್ಕಿಸುವ ರಸ್ತೆ ಬ್ಯಾಡಗಿ ಪಟ್ಟಣದ ಮೂಲಕ ಹಾದುಹೋಗುತ್ತದೆ. ಈ ರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಕಳೆದ 13 ವರ್ಷಗಳಿಂದ ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರು ದೂರಿದ್ದಾರೆ.

13 ವರ್ಷದಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಬ್ಯಾಡಗಿ ಬಂದ್

ಈಗಾಗಲೇ ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಬದಿಯ ಹಲವು ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ರಸ್ತೆ ಅಗಲೀಕರಣ ನೆನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಳೆದ 12 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದ್ದ ರಸ್ತೆ ಹೋರಾಟ ಸಮಿತಿ ಇಂದು ಬ್ಯಾಡಗಿ ಬಂದ್‌ಗೆ ಕರೆ ನೀಡಿದೆ. ರಸ್ತೆ ಅಗಲೀಕರಣ ಸಮಿತಿ ಕರೆ ನೀಡಿದ್ದ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು.

ಈ ಕುರಿತು ಮಾತನಾಡಿದ ಹಿರಿಯ ನ್ಯಾಯವಾದಿ ಆರ್.ವಿ. ಬೆಳಕೇರಿಮಠ, ಬ್ಯಾಡಗಿ ಮೆಣಸಿನಕಾಯಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಆದರೆ ಇಲ್ಲಿನ ಬ್ಯಾಡಗಿ ಮೆಣಸಿನ ಮಾರುಕಟ್ಟೆಗೂ ಇಲ್ಲಿ ಕಷ್ಟವಾಗಿದೆ. ಬ್ಯಾಡಗಿಯಲ್ಲಿನ ಮುಖ್ಯ ರಸ್ತೆ ಇದಾಗಿದ್ದು, ಇದರ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕೆಂದು ಎಂದು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ರಸ್ತೆ ಅಗಲೀಕರಣಗೊಳಿಸಲು ನಾವು ಒತ್ತಾಯ ಮಾಡುತ್ತಿದ್ದೇವೆ. ಇಂದು ಈ ಬಗ್ಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಇಲ್ಲಿನ ಶಾಸಕರು ಅಭಿವೃದ್ಧಿಗೆ ಸಹಕರಿಸಬೇಕು ಎಂದು ವರ್ತಕ, ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ್ ಒತ್ತಾಯಿಸಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಕೈಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕದರ ಮಂಡಲಗಿ ರಸ್ತೆಗೆ ಆಗಮಿಸಿತು. ನಂತರ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ರಸ್ತೆ ಅಗಳಿಕರಣಗೊಳಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖ್ಯಸ್ಥರು, ವಿವಿಧ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಬಂದ್ ಹಿನ್ನೆಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯನ್ನು ಸ್ಥಗಿತಗೊಳಿಸಲಾಗಿತ್ತು. ಬಂದ್‌ಗೆ ಬೆಂಬಲಿಸಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ವಾಹನ ಸಂಚಾರ ವಿರಳವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಓದಿ : ಧಾರವಾಡ ಎಸ್ಪಿ ಪಿ.ಕೃಷ್ಣಕಾಂತ ವರ್ಗಾವಣೆ : ಬೆಳಗಾವಿಗೆ ಸಂಜೀವ್ ಪಾಟೀಲ ನೇಮಕ

ಹಾವೇರಿ : ಕಳೆದ 13 ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಜಿಲ್ಲೆಯ ಬ್ಯಾಡಗಿ ಪಟ್ಟಣದ ಮುಖ್ಯರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಇಂದು ಬ್ಯಾಡಗಿ ಪಟ್ಟಣ ಬಂದ್ ಗೆ ಕರೆ ನೀಡಿದ್ದವು. ಸಾಗರ ಗಜೇಂದ್ರಗಡ ಸಂಪರ್ಕಿಸುವ ರಸ್ತೆ ಬ್ಯಾಡಗಿ ಪಟ್ಟಣದ ಮೂಲಕ ಹಾದುಹೋಗುತ್ತದೆ. ಈ ರಸ್ತೆಯನ್ನು ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಕಳೆದ 13 ವರ್ಷಗಳಿಂದ ಹಲವಾರು ಬಾರಿ ಪ್ರತಿಭಟನೆ ನಡೆಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಪ್ರತಿಭಟನಾಕಾರು ದೂರಿದ್ದಾರೆ.

13 ವರ್ಷದಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಅಗಲೀಕರಣಗೊಳಿಸುವಂತೆ ಒತ್ತಾಯಿಸಿ ಬ್ಯಾಡಗಿ ಬಂದ್

ಈಗಾಗಲೇ ರಸ್ತೆ ಅಗಲೀಕರಣಕ್ಕಾಗಿ ರಸ್ತೆ ಬದಿಯ ಹಲವು ಕಟ್ಟಡಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ಕೆಲವರು ನ್ಯಾಯಾಲಯದ ಮೆಟ್ಟಿಲೇರಿದ್ದರಿಂದ ರಸ್ತೆ ಅಗಲೀಕರಣ ನೆನೆಗುದಿಗೆ ಬಿದ್ದಿದೆ. ಈ ಹಿನ್ನೆಲೆಯಲ್ಲಿ ಕಳೆದ 12 ದಿನಗಳಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸಿದ್ದ ರಸ್ತೆ ಹೋರಾಟ ಸಮಿತಿ ಇಂದು ಬ್ಯಾಡಗಿ ಬಂದ್‌ಗೆ ಕರೆ ನೀಡಿದೆ. ರಸ್ತೆ ಅಗಲೀಕರಣ ಸಮಿತಿ ಕರೆ ನೀಡಿದ್ದ ಬಂದ್ ಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದವು.

ಈ ಕುರಿತು ಮಾತನಾಡಿದ ಹಿರಿಯ ನ್ಯಾಯವಾದಿ ಆರ್.ವಿ. ಬೆಳಕೇರಿಮಠ, ಬ್ಯಾಡಗಿ ಮೆಣಸಿನಕಾಯಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದಿದೆ. ಆದರೆ ಇಲ್ಲಿನ ಬ್ಯಾಡಗಿ ಮೆಣಸಿನ ಮಾರುಕಟ್ಟೆಗೂ ಇಲ್ಲಿ ಕಷ್ಟವಾಗಿದೆ. ಬ್ಯಾಡಗಿಯಲ್ಲಿನ ಮುಖ್ಯ ರಸ್ತೆ ಇದಾಗಿದ್ದು, ಇದರ ಅಭಿವೃದ್ಧಿಗೆ ಸರ್ಕಾರ ಗಮನ ಹರಿಸಬೇಕೆಂದು ಎಂದು ಹೇಳಿದ್ದಾರೆ.

ಕಳೆದ ಹಲವು ವರ್ಷಗಳಿಂದ ರಸ್ತೆ ಅಗಲೀಕರಣಗೊಳಿಸಲು ನಾವು ಒತ್ತಾಯ ಮಾಡುತ್ತಿದ್ದೇವೆ. ಇಂದು ಈ ಬಗ್ಗೆ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ. ನಮ್ಮ ರಾಜ್ಯದ ಮುಖ್ಯಮಂತ್ರಿಗಳು ಸೇರಿದಂತೆ ಇಲ್ಲಿನ ಶಾಸಕರು ಅಭಿವೃದ್ಧಿಗೆ ಸಹಕರಿಸಬೇಕು ಎಂದು ವರ್ತಕ, ಮಾಜಿ ಶಾಸಕ ಸುರೇಶ್ ಗೌಡ ಪಾಟೀಲ್ ಒತ್ತಾಯಿಸಿದ್ದಾರೆ.

ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನಗರದ ಸಿದ್ಧೇಶ್ವರ ದೇವಸ್ಥಾನದಿಂದ ಕೈಗೊಂಡ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕದರ ಮಂಡಲಗಿ ರಸ್ತೆಗೆ ಆಗಮಿಸಿತು. ನಂತರ ನಡೆದ ಬೃಹತ್ ಬಹಿರಂಗ ಸಭೆಯಲ್ಲಿ ರಸ್ತೆ ಅಗಳಿಕರಣಗೊಳಿಸುವಂತೆ ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ವಿವಿಧ ಸಂಘಟನೆಗಳ ಮುಖ್ಯಸ್ಥರು, ವಿವಿಧ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಬಂದ್ ಹಿನ್ನೆಲೆಯಲ್ಲಿ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯನ್ನು ಸ್ಥಗಿತಗೊಳಿಸಲಾಗಿತ್ತು. ಬಂದ್‌ಗೆ ಬೆಂಬಲಿಸಿ ವರ್ತಕರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದರು. ವಾಹನ ಸಂಚಾರ ವಿರಳವಾಗಿತ್ತು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಓದಿ : ಧಾರವಾಡ ಎಸ್ಪಿ ಪಿ.ಕೃಷ್ಣಕಾಂತ ವರ್ಗಾವಣೆ : ಬೆಳಗಾವಿಗೆ ಸಂಜೀವ್ ಪಾಟೀಲ ನೇಮಕ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.