ETV Bharat / state

ಸಿಎಂ ಬೊಮ್ಮಾಯಿ ಈಗಾಗಲೇ ಬೈ ಎಲೆಕ್ಷನ್ ಸೋಲು ಒಪ್ಪಿಕೊಂಡಿದ್ದಾರೆ: ಡಿಕೆಶಿ

author img

By

Published : Oct 22, 2021, 3:07 PM IST

ಈಗಾಗಲೇ ಹಾನಗಲ್, ಸಿಂದಗಿ ಬೈ ಎಲೆಕ್ಷನ್​ ಸೋಲನ್ನು ಸಿಎಂ ಬಸವರಾಜ ಬೊಮ್ಮಾಯಿ ಒಪ್ಪಿಕೊಂಡಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.

ಡಿಕೆಶಿ
ಡಿಕೆಶಿ

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಉಪಚುನಾವಣೆಯ ಸೋಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ಈ ಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ ಅಂತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್​ ಮಾನೆ ಪರ ಡಿ.ಕೆ.ಶಿವಕುಮಾರ್ ಕ್ಯಾಂಪೇನ್

ಹಾನಗಲ್​ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಡಿ.ಕೆ.ಶಿವಕುಮಾರ್ ಮತಯಾಚಿಸಿದ್ರು. ಈ ವೇಳೆ ಮಾತನಾಡಿದ ಅವರು, ಸಿಎಂಗೆ ಧೈರ್ಯವಿದ್ದರೆ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಬೇಕಿತ್ತು ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ವೈರಸ್​ ನಿರ್ನಾಮವಾಗಿದೆ ಎಂದುಕೊಂಡು 2ನೇ ಡೋಸ್ ಪಡೆಯಲು ಜನ ಹಿಂದೇಟು: ಸಚಿವ ಸುಧಾಕರ್

ಸಿಎಂ ಬೊಮ್ಮಾಯಿ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರಿಗೆ ಪೊಲೀಸರೇ ಬೇಕಾಗಿಲ್ಲ. ಒಬ್ಬರನ್ನು ಗೃಹ ಮಂತ್ರಿ ಮಾಡಿದ್ದಾರೆ. ಅವರ ಹೆಸರು ಜ್ಞಾನೇಂದ್ರ ಅಲ್ಲ, ಅಜ್ಞಾನೇಂದ್ರ ಎಂದು ಟೀಕಿಸಿದರು.

ಹಾವೇರಿ: ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಉಪಚುನಾವಣೆಯ ಸೋಲು ಒಪ್ಪಿಕೊಂಡಿದ್ದಾರೆ. ಅದಕ್ಕಾಗಿಯೇ ಅವರು ಈ ಚುನಾವಣಾ ಫಲಿತಾಂಶ ಸರ್ಕಾರದ ಮೇಲೆ ಪರಿಣಾಮ ಬೀರಲ್ಲ ಅಂತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್​ ಮಾನೆ ಪರ ಡಿ.ಕೆ.ಶಿವಕುಮಾರ್ ಕ್ಯಾಂಪೇನ್

ಹಾನಗಲ್​ ಕ್ಷೇತ್ರದಲ್ಲಿ ತಮ್ಮ ಅಭ್ಯರ್ಥಿ ಶ್ರೀನಿವಾಸ ಮಾನೆ ಪರ ಡಿ.ಕೆ.ಶಿವಕುಮಾರ್ ಮತಯಾಚಿಸಿದ್ರು. ಈ ವೇಳೆ ಮಾತನಾಡಿದ ಅವರು, ಸಿಎಂಗೆ ಧೈರ್ಯವಿದ್ದರೆ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ ಎಂದು ಹೇಳಬೇಕಿತ್ತು ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ವೈರಸ್​ ನಿರ್ನಾಮವಾಗಿದೆ ಎಂದುಕೊಂಡು 2ನೇ ಡೋಸ್ ಪಡೆಯಲು ಜನ ಹಿಂದೇಟು: ಸಚಿವ ಸುಧಾಕರ್

ಸಿಎಂ ಬೊಮ್ಮಾಯಿ ನೈತಿಕ ಪೊಲೀಸ್ ಗಿರಿಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಇವರಿಗೆ ಪೊಲೀಸರೇ ಬೇಕಾಗಿಲ್ಲ. ಒಬ್ಬರನ್ನು ಗೃಹ ಮಂತ್ರಿ ಮಾಡಿದ್ದಾರೆ. ಅವರ ಹೆಸರು ಜ್ಞಾನೇಂದ್ರ ಅಲ್ಲ, ಅಜ್ಞಾನೇಂದ್ರ ಎಂದು ಟೀಕಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.