ETV Bharat / state

ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ... ಗ್ರಾಮ ಲೆಕ್ಕಿಗನಿಂದ ದುರುಪಯೋಗವಾಯ್ತು ಅಧಿಕಾರ! - ಬಸವರಾಜ್ ಹುನ್ನಾರ

ಹಾವೇರಿ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ರಾಜೀನಾಮೆ ನೀಡಿ ಬೆಳಗಾವಿ ಜಿಲ್ಲೆಯಲ್ಲಿ ಕೆಲಸಕ್ಕೆ ಸೇರಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ನೆರೆ ಸಂತ್ರಸ್ತರ ಪರಿಹಾರ ಹಣ ಲಪಟಾಯಿಸಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

corruption in Flood compensation: Increase in number of cases
ನೆರೆ ಪರಿಹಾರ ವಿತರಣೆಯಲ್ಲಿ ಅವ್ಯವಹಾರ: ದಿನೇ ದಿನೇ ಹೆಚ್ಚುತ್ತಿರುವ ಪ್ರಕರಣ
author img

By

Published : Mar 19, 2020, 10:22 AM IST

ಹಾವೇರಿ: ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿನ ಅವ್ಯವಹಾರ ಪ್ರಕರಣಗಳು ದಿನದಿನಕ್ಕೆ ಬಯಲಿಗೆ ಬರಲಾರಂಭಿಸಿವೆ. ಹಾವೇರಿ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ರಾಜೀನಾಮೆ ನೀಡಿ ಬೆಳಗಾವಿ ಜಿಲ್ಲೆಯಲ್ಲಿ ಕೆಲಸಕ್ಕೆ ಸೇರಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಹಣ ಲಪಟಾಯಿಸಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ

ಬಸವರಾಜ್ ಹುನ್ನಾರ ಎಂಬಾತ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡ್ಡಗುಡ್ಡಾಪುರದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡಿದ್ದ. ನಂತರ ತಮ್ಮ ಊರಿನ ಸಮೀಪದ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕೆಲಸ ಸಿಕ್ಕಿದ್ದರಿಂದ ಅಲ್ಲಿ ಕೆಲಸಕ್ಕೆ ಸೇರಿದ್ದ. ಆದರೆ, ಗುಡ್ಡಾಪುರದಲ್ಲಿ ಗ್ರಾಮ ಲೆಕ್ಕಾಧಿಕಾರಿ ಪಾಸ್ ವರ್ಡ್ ನೆನಪಿನಲ್ಲಿಟ್ಟುಕೊಂಡಿದ್ದ ಬಸವರಾಜ್, ಬೆಳಗಾವಿಯ ಅಥಣಿಯಲ್ಲಿನ ತನ್ನ ಸ್ನೇಹಿತರಿಗೆ ನೆರೆ ಪರಿಹಾರದ ಹಣ ಹಾಕಿದ್ದಾನೆ. ಸುಮಾರು ಮೂರು ಜನ ಸ್ನೇಹಿತರಿಗೆ 85 ಸಾವಿರ ರೂಪಾಯಿ ಹಣವನ್ನ ವರ್ಗಾಯಿಸಿದ್ದಾರೆ ಎಂದು ಹಾವೇರಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ಇನ್ನೂ ಈ ಕುರಿತಂತೆ ದೂರು ದಾಖಲಿಸಲಾಗಿದ್ದು ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ಹಾವೇರಿ: ನೆರೆ ಸಂತ್ರಸ್ತರ ಪರಿಹಾರ ವಿತರಣೆಯಲ್ಲಿನ ಅವ್ಯವಹಾರ ಪ್ರಕರಣಗಳು ದಿನದಿನಕ್ಕೆ ಬಯಲಿಗೆ ಬರಲಾರಂಭಿಸಿವೆ. ಹಾವೇರಿ ಜಿಲ್ಲೆಯಲ್ಲಿ ಕರ್ತವ್ಯಕ್ಕೆ ರಾಜೀನಾಮೆ ನೀಡಿ ಬೆಳಗಾವಿ ಜಿಲ್ಲೆಯಲ್ಲಿ ಕೆಲಸಕ್ಕೆ ಸೇರಿದ್ದ ಗ್ರಾಮ ಲೆಕ್ಕಾಧಿಕಾರಿಯೊಬ್ಬ ಹಣ ಲಪಟಾಯಿಸಿರುವ ಪ್ರಕರಣ ಇದೀಗ ಬೆಳಕಿಗೆ ಬಂದಿದೆ.

ಅಪರ ಜಿಲ್ಲಾಧಿಕಾರಿ ಯೋಗೇಶ್ವರ

ಬಸವರಾಜ್ ಹುನ್ನಾರ ಎಂಬಾತ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಗುಡ್ಡಗುಡ್ಡಾಪುರದಲ್ಲಿ ಗ್ರಾಮ ಲೆಕ್ಕಾಧಿಕಾರಿಯಾಗಿ ಕೆಲಸ ಮಾಡಿದ್ದ. ನಂತರ ತಮ್ಮ ಊರಿನ ಸಮೀಪದ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ ಕೆಲಸ ಸಿಕ್ಕಿದ್ದರಿಂದ ಅಲ್ಲಿ ಕೆಲಸಕ್ಕೆ ಸೇರಿದ್ದ. ಆದರೆ, ಗುಡ್ಡಾಪುರದಲ್ಲಿ ಗ್ರಾಮ ಲೆಕ್ಕಾಧಿಕಾರಿ ಪಾಸ್ ವರ್ಡ್ ನೆನಪಿನಲ್ಲಿಟ್ಟುಕೊಂಡಿದ್ದ ಬಸವರಾಜ್, ಬೆಳಗಾವಿಯ ಅಥಣಿಯಲ್ಲಿನ ತನ್ನ ಸ್ನೇಹಿತರಿಗೆ ನೆರೆ ಪರಿಹಾರದ ಹಣ ಹಾಕಿದ್ದಾನೆ. ಸುಮಾರು ಮೂರು ಜನ ಸ್ನೇಹಿತರಿಗೆ 85 ಸಾವಿರ ರೂಪಾಯಿ ಹಣವನ್ನ ವರ್ಗಾಯಿಸಿದ್ದಾರೆ ಎಂದು ಹಾವೇರಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ಇನ್ನೂ ಈ ಕುರಿತಂತೆ ದೂರು ದಾಖಲಿಸಲಾಗಿದ್ದು ಆತನ ಮೇಲೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಅಪರ ಜಿಲ್ಲಾಧಿಕಾರಿ ಯೋಗೇಶ್ವರ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.