ಹಾವೇರಿ: ನಿಂತಿದ್ದ ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಓರ್ವ ಕ್ರೂಸರ್ನಲ್ಲಿ ಸಿಲುಕಿಕೊಂಡಿದ್ದ ಘಟನೆ ನಗರದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ನಡೆದಿದೆ.
ಕ್ಯಾಂಟರ್ ವಾಹನಕ್ಕೆ ಕ್ರೂಸರ್ ಡಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನ ನಜ್ಜುಗುಜ್ಜಾಗಿದ್ದು, ಇದರಲ್ಲಿ ಸತೀಶ್ ಕಾಸರಕರ (43) ಎಂಬ ವ್ಯಕ್ತಿಯ ಕಾಲು ಕ್ರೂಸರ್ನಲ್ಲಿ ಸಿಲುಕಿ ಪರದಾಟ ನಡೆಸಿದ್ದರು. ಈ ವೇಳೆ 108 ಸಿಬ್ಬಂದಿ ಮತ್ತು ಪೊಲೀಸರು ಹರಸಾಹಸ ಪಟ್ಟು ಅವರನ್ನು ರಕ್ಷಿಸಿದರು. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಓದಿ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಮೂವರ ದುರ್ಮರಣ
ಮಹಾರಾಷ್ಟ್ರ ಮೂಲದ ಕ್ರೂಸರ್ ವಾಹನ ಇದಾಗಿದ್ದು, ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ವಾಪಸ್ ಊರಿಗೆ ತೆರಳುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಈ ಸಂಬಂಧ ಹಾವೇರಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.