ಹಾವೇರಿ: ಜಾನುವಾರುಗಳ ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ನಡೆದಿದೆ.
ಸಚಿನ್ ಫಕ್ಕೀರಗೌಡ ಅಜಗೊಂಡರ(19) ನೀರುಪಾಲಾದ ಯುವಕ. ಎತ್ತುಗಳ ಮೈ ತೊಳೆಯಲು ಕೆರೆಗೆ ಹೋದಾಗ ಈ ಅವಘಡ ಸಂಭವಿಸಿದ್ದು, ಮೃತ ಸಚಿನ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಸ್ಥಳೀಯರು ಮೃತದೇಹ ಹೊರತಗೆದಿದ್ದಾರೆ. ಸಚಿನ್ ಸಾವಿಗೆ ಕೆರೆಯಲ್ಲಿ ತೋಡಿರುವ ಅವೈಜ್ಞಾನಿಕ ಗುಂಡಿಗಳೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಕುರಿತಂತೆ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.