ETV Bharat / state

ಜಾನುವಾರು ಮೈ ತೊಳೆಯಲು ಹೋದ ಯುವಕ ನೀರುಪಾಲು!

author img

By

Published : Oct 15, 2019, 7:46 PM IST

ಏಲಕ್ಕಿ ನಾಡು ಹಾವೇರಿಯಲ್ಲಿ ಜಾನುವಾರುಗಳ ಮೈ ತೊಳೆಯಲು ಹೋದ ಯುವಕನೊಬ್ಬ ನೀರುಪಾಲಾದ ದುರ್ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ಯುವಕ ನೀರುಪಾಲು

ಹಾವೇರಿ: ಜಾನುವಾರುಗಳ ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ನಡೆದಿದೆ.

ಸಚಿನ್ ಫಕ್ಕೀರಗೌಡ ಅಜಗೊಂಡರ(19) ನೀರುಪಾಲಾದ ಯುವಕ. ಎತ್ತುಗಳ ಮೈ ತೊಳೆಯಲು ಕೆರೆಗೆ ಹೋದಾಗ ಈ ಅವಘಡ ಸಂಭವಿಸಿದ್ದು, ಮೃತ ಸಚಿನ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಸ್ಥಳೀಯರು ಮೃತದೇಹ ಹೊರತಗೆದಿದ್ದಾರೆ. ಸಚಿನ್​ ಸಾವಿಗೆ ಕೆರೆಯಲ್ಲಿ ತೋಡಿರುವ ಅವೈಜ್ಞಾನಿಕ ಗುಂಡಿಗಳೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಕುರಿತಂತೆ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾವೇರಿ: ಜಾನುವಾರುಗಳ ಮೈತೊಳೆಯಲು ಹೋಗಿದ್ದ ಯುವಕ ನೀರುಪಾಲಾದ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರಲ್ಲಿ ನಡೆದಿದೆ.

ಸಚಿನ್ ಫಕ್ಕೀರಗೌಡ ಅಜಗೊಂಡರ(19) ನೀರುಪಾಲಾದ ಯುವಕ. ಎತ್ತುಗಳ ಮೈ ತೊಳೆಯಲು ಕೆರೆಗೆ ಹೋದಾಗ ಈ ಅವಘಡ ಸಂಭವಿಸಿದ್ದು, ಮೃತ ಸಚಿನ್ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಮತ್ತು ಸ್ಥಳೀಯರು ಮೃತದೇಹ ಹೊರತಗೆದಿದ್ದಾರೆ. ಸಚಿನ್​ ಸಾವಿಗೆ ಕೆರೆಯಲ್ಲಿ ತೋಡಿರುವ ಅವೈಜ್ಞಾನಿಕ ಗುಂಡಿಗಳೇ ಕಾರಣ ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಈ ಕುರಿತಂತೆ ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:FileBody:FileConclusion:File
ETV Bharat Logo

Copyright © 2024 Ushodaya Enterprises Pvt. Ltd., All Rights Reserved.