ETV Bharat / state

ರಾಣೆಬೆನ್ನೂರು ಅಸಮಾಧಾನ ಶಮನ ಮಾಡಿದ ಬಿ.ವೈ.ರಾಘವೇಂದ್ರ - ರಾಣೆಬೆನ್ನೂರ ಉಪಚುನಾವಣೆ ಸುದ್ದಿ

ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ. ಬಸವರಾಜ ಕೇಲಗಾರ ಅವರ ಮನವೊಲಿಸುವಲ್ಲಿ ಸಂಸದ ಬಿ.ವೈ.ರಾಘವೇಂದ್ರ ಯಶಸ್ವಿಯಾಗಿದ್ದಾರೆ. ಅಭ್ಯರ್ಥಿ ಪರ ಪ್ರಚಾರ ಮಾಡಲು ಬಿಜೆಪಿ ಟಿಕೆಟ್​ ಆಕಾಂಕ್ಷಿಯಾಗಿದ್ದ ಬಸವರಾಜ ಒಪ್ಪಿಕೊಂಡಿದ್ದಾರೆ.

ಸಂಸದ ರಾಘವೇಂದ್ರ ಮತ್ತು ಟಿಕೆಟ್​ ಆಕಾಂಕ್ಷಿಯಾಗಿದ್ದ ಡಾ.ಬಸವರಾಜ ಕೇಲಗಾರ
author img

By

Published : Nov 19, 2019, 8:21 PM IST

ರಾಣೆಬೆನ್ನೂರು: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ. ಬಸವರಾಜ ಕೇಲಗಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಮಾತು ಕೊಟ್ಟಿದ್ದಾರೆ. ಇದರಿಂದ ರಾಣೆಬೆನ್ನೂರು ಕ್ಷೇತ್ರದ ಅಸಮಾಧಾನದ ಹೊಗೆ ಶಮನಗೊಂಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

ಸಂಸದ ರಾಘವೇಂದ್ರ

ನಗರದಲ್ಲಿ ಮಾತನಾಡಿದ ಅವರು, ಪಕ್ಷ ಯಾವುದೇ ರೀತಿಯಲ್ಲಿ ಬಲಿಷ್ಠವಿಲ್ಲದ ಸಮಯದಲ್ಲಿ ಕೇಲಗಾರ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ. ಈ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಎಂಬ ಅಪೇಕ್ಷೆಯಲ್ಲಿದ್ದರು. ಆದರೆ, ಹೈಕಮಾಂಡ್​ ಟಿಕೆಟ್ ಬೇರೊಬ್ಬರಿಗೆ ನೀಡಿದೆ. ಇದರಿಂದ ಸಹಜವಾಗಿಯೆ ಬೇಸರವಾಗಿದ್ದಾರೆ ಎಂದರು.

ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಪರ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಡಾ. ಕೇಲಗಾರ ಅವರು ವೃತ್ತಿಯಲ್ಲಿ ವೈದ್ಯರು. ಅವರು ಪಕ್ಷದಿಂದ ಯಾವುದೇ ಬೇಡಿಕೆ ಇಟ್ಟಿಲ್ಲ. ಅವರ ಇಡೀ ಕುಟುಂಬವೇ ಬಿಜೆಪಿ ಪಕ್ಷಕ್ಕಾಗಿ ದುಡಿದಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಪಕ್ಷವು ನನಗೆ ತಾಯಿ ಇದ್ದಂತೆ. ನಾನು ಎಂದಿಗೂ ದ್ರೋಹ ಮಾಡಿಲ್ಲ, ಮಾಡುವುದಿಲ್ಲ. ನನ್ನ ವಿರುದ್ಧ ಕೆಲಸ ಮಾಡಿದವರಿಗೂ ಸಹ ನಗರಸಭೆ ಚುನಾವಣೆಯಲ್ಲಿ ಮತ ನೀಡುವಂತೆ ಬೇಡಿಕೊಂಡಿದ್ದೇನೆ. ಈಗ ಟಿಕೆಟ್ ಕೈತಪ್ಪಿದ್ದರಿಂದ ಬೇಸರವಾಗಿದ್ದು ನಿಜ ಎಂದು ಬಿಜೆಪಿ ಮುಖಂಡ ಡಾ. ಬಸವರಾಜ ಕೇಲಗಾರ ಹೇಳಿದರು.

ರಾಣೆಬೆನ್ನೂರು: ರಾಣೆಬೆನ್ನೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ. ಬಸವರಾಜ ಕೇಲಗಾರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ಮಾಡುವುದಾಗಿ ಮಾತು ಕೊಟ್ಟಿದ್ದಾರೆ. ಇದರಿಂದ ರಾಣೆಬೆನ್ನೂರು ಕ್ಷೇತ್ರದ ಅಸಮಾಧಾನದ ಹೊಗೆ ಶಮನಗೊಂಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಸ್ಪಷ್ಟಪಡಿಸಿದ್ದಾರೆ.

ಸಂಸದ ರಾಘವೇಂದ್ರ

ನಗರದಲ್ಲಿ ಮಾತನಾಡಿದ ಅವರು, ಪಕ್ಷ ಯಾವುದೇ ರೀತಿಯಲ್ಲಿ ಬಲಿಷ್ಠವಿಲ್ಲದ ಸಮಯದಲ್ಲಿ ಕೇಲಗಾರ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ. ಈ ಉಪ ಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಎಂಬ ಅಪೇಕ್ಷೆಯಲ್ಲಿದ್ದರು. ಆದರೆ, ಹೈಕಮಾಂಡ್​ ಟಿಕೆಟ್ ಬೇರೊಬ್ಬರಿಗೆ ನೀಡಿದೆ. ಇದರಿಂದ ಸಹಜವಾಗಿಯೆ ಬೇಸರವಾಗಿದ್ದಾರೆ ಎಂದರು.

ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣಕುಮಾರ ಪೂಜಾರ ಪರ ಕೆಲಸ ಮಾಡುವುದಾಗಿ ಭರವಸೆ ನೀಡಿದ್ದಾರೆ ಎಂದರು. ಡಾ. ಕೇಲಗಾರ ಅವರು ವೃತ್ತಿಯಲ್ಲಿ ವೈದ್ಯರು. ಅವರು ಪಕ್ಷದಿಂದ ಯಾವುದೇ ಬೇಡಿಕೆ ಇಟ್ಟಿಲ್ಲ. ಅವರ ಇಡೀ ಕುಟುಂಬವೇ ಬಿಜೆಪಿ ಪಕ್ಷಕ್ಕಾಗಿ ದುಡಿದಿದೆ ಎಂದು ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಪಕ್ಷವು ನನಗೆ ತಾಯಿ ಇದ್ದಂತೆ. ನಾನು ಎಂದಿಗೂ ದ್ರೋಹ ಮಾಡಿಲ್ಲ, ಮಾಡುವುದಿಲ್ಲ. ನನ್ನ ವಿರುದ್ಧ ಕೆಲಸ ಮಾಡಿದವರಿಗೂ ಸಹ ನಗರಸಭೆ ಚುನಾವಣೆಯಲ್ಲಿ ಮತ ನೀಡುವಂತೆ ಬೇಡಿಕೊಂಡಿದ್ದೇನೆ. ಈಗ ಟಿಕೆಟ್ ಕೈತಪ್ಪಿದ್ದರಿಂದ ಬೇಸರವಾಗಿದ್ದು ನಿಜ ಎಂದು ಬಿಜೆಪಿ ಮುಖಂಡ ಡಾ. ಬಸವರಾಜ ಕೇಲಗಾರ ಹೇಳಿದರು.

Intro:KN_RNR_02 MP RAGAVENDRA PRESS MEET_AVB-KAC10001

ಬಿಜೆಪಿ ಅಭ್ಯರ್ಥಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಶಿವಮೊಗ್ಗ ಎಂಪಿ ಬಿ.ವೈ.ರಾಘವೇಂದ್ರ

ರಾಣೆಬೆನ್ನೂರ: ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಡಾ.ಬಸವರಾಜ ಕೇಲಗಾರ ಅವರ ಅಸಮಾಧಾನವಾಗಿದ್ದು ನಿಜ, ಈಗ ಅವರು ಈಗ ಪಕ್ಷಕ್ಕೆ ದುಡಿಯವದಾಗಿ ಮಾತು ಕೊಟ್ಟಿದ್ದಾರೆ ಎಂದು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

Body:ನಗರದಲ್ಲಿ ಮಾತನಾಡಿದ ಅವರು, ಪಕ್ಷ ಯಾವುದೇ ಸಹಕಾರವಿಲ್ಲದ ಸಮಯದಲ್ಲಿ ಪಕ್ಷವನ್ನು ಕಟ್ಟಿ ಬೆಳಸಿದ್ದಾರೆ. ಈ ಉಪಚುನಾವಣೆಯಲ್ಲಿ ಟಿಕೆಟ್ ಸಿಗುತ್ತದೆ ಎಂಬ ಅಪೇಕ್ಷೆ ಇತ್ತು. ಆದರೆ ಹೈಕಮಾಂಡ ಈ ಬಾರಿ ಟಿಕೆಟ್ ಬದಲಾಯಿಸಿದೆ.

ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ಅರುಣಕುಮಾರ ಪೂಜಾರ ಪರ ಕೆಲಸ ಮಾಡುವುದಾಗಿ ಮಾತು ಕೊಟ್ಟಿದ್ದಾರೆ. ಅವರ
ಅಸಮಾಧಾನವನ್ನು ಬಿಟ್ಟು ಪಕ್ಷ ಹಾಗೂ ನರೇಂದ್ರ ಮೋದಿಯವರ ಸಲುವಾಗಿ ದುಡಿಯೋದಾಗಿ ಹೇಳಿದ್ದಾರೆ ಎಂದರು.

ಇನ್ನೂ ಬಿಜೆಪಿ ಪಕ್ಷದಿಂದ ಯಾವುದಾದರೂ ಬೇಡಿಕೆ ಇಟ್ಟಿದ್ದಾರೆ ಎಂಬ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದ ಸಂಸದ ರಾಘವೇಂದ್ರ,
ಡಾ. ಕೇಲಗಾರ ಅವರು ವೃತ್ತಿಯಲ್ಲಿ ವೈದ್ಯರು. ಅವರು ಪಕ್ಷದಿಂದ ಯಾವುದೇ ಬೇಡಿಕೆ ಇಟ್ಟಿಲ್ಲ. ಅವರ ಇಡೀ ಕುಟುಂಬವೇ ಬಿಜೆಪಿ ಪಕ್ಷಕ್ಕಾಗಿ ದುಡಿದಿದೆ,
ಅವರನ್ನು ಸರಿಯಾಗಿ ಉಪಯೋಗಿಸಿಕೊಳ್ಳೋದು ನಮ್ಮ ಜವಾಬ್ದಾರಿಯಾಗಿದೆ ಎಂದರು.

Conclusion:ಇನ್ನೂ ಬಿಜೆಪಿ ಅತೃಪ್ತ ಅಭ್ಯರ್ಥಿ ಡಾ.ಬಸವರಾಜ ಕೇಲಗಾರ ಮಾತನಾಡಿ, ಬಿಜೆಪಿ ಪಕ್ಷವು ನನಗೆ ಹೆತ್ತ ತಾಯಿ ಇದ್ದಂತೆ. ನಾನು ಎಂದಿಗೂ ದ್ರೋಹ ಮಾಡಲ್ಲ. ನನ್ನ ವಿರುದ್ದವಾಗಿ ಕೆಲಸ ಮಾಡಿದವರಿಗೆ, ನಗರಸಭೆ ಚುನಾವಣೆಯಲ್ಲಿ ಮತ ನೀಡುವಂತೆ ಬೇಡಿಕೊಂಡಿದ್ದೆನೆ. ಈಗ ಟಿಕೆಟ್ ಸಿಗದೆ ಇರುವುದರಿಂದ ಬೇಜಾರಾಗಿದೆ ಹೊರತು ಪಕ್ಷ ವಿರುದ್ದವಾಗಿ ಎಂದೂ ಕೆಲಸ ಮಾಡುವುದಿಲ್ಲ ಎಂದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.