ಹಾವೇರಿ: ಸಾಲಬಾಧೆ ತಾಳಲಾರದೆ ರೈತನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಗ್ರಾಮದಲ್ಲಿ ನಡೆದಿದೆ.
ಒಂದೂವರೆ ಎಕರೆ ಜಮೀನು ಹೊಂದಿದ್ದ ರೈತ ಶಂಭಣ್ಣ(55) ಬ್ಯಾಂಕ್ ಮತ್ತು ಕೈ ಸಾಲವಾಗಿ ಎಂಟೂವರೆ ಲಕ್ಷ ರೂ. ಸಾಲ ಪಡೆದಿದ್ದ. ಮೆಕ್ಕೆಜೋಳ, ಹತ್ತಿ ಬೆಳೆ ಕೈಕೊಟ್ಟಿದ್ದರಿಂದ ಮನನೊಂದು ತನ್ನ ಜಮೀನಿನಲ್ಲೇ ನೇಣಿಗೆ ಶರಣಾಗಿದ್ದಾಗಿ ತಿಳಿದುಬಂದಿದೆ.
ಈ ಸಂಬಂಧ ಹಲಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.