ಹಾನಗಲ್ : ಬೋರ್ವೆಲ್ ಪಂಪ್ನ ಸ್ವಿಚ್ ಹಾಕಲು ಹೋದ ವೇಳೆ ವಿದ್ಯುತ್ ಸ್ಪರ್ಶಿಸಿ ರೈತ ಮೃತಪಟ್ಟ ಘಟನೆ ತಾಲೂಕಿನ ಮಲಗುಂದ ಗ್ರಾಮದಲ್ಲಿ ನಡೆದಿದೆ.
ನಾಗಪ್ಪ ಹೊಂಕಣ (41) ಮೃತ ದುರ್ದೈವಿ. ಜಮೀನಿನಲ್ಲಿ ಭತ್ತ ನಾಟಿ ಮಾಡಲು ತಯಾರಿ ನಡೆಸುತಿದ್ದ ರೈತ ನಾಗಪ್ಪ, ನೀರು ಬಿಡಲು ಪಂಪ್ ಸ್ಚಿಚ್ ಹಾಕಲು ತೆರಳಿದ್ದ ವೇಳೆ ವಿದ್ಯುತ್ ತಗುಲಿ ಕೊನೆಯುಸಿರೆಳೆದಿದ್ದಾನೆ.
ಘಟನಾ ಸ್ಥಳಕ್ಕೆ ಆಡೂರ ಠಾಣೆಯ ಪಿಎಸ್ಐ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.