ಹಾವೇರಿ: ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಜಿಲ್ಲೆಯಲ್ಲಿ ಮುಸ್ಲಿಂ ವ್ಯಕ್ತಿಯೋರ್ವರು ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಓದಿ: ಖಾತೆ ಹಂಚಿಕೆ ವಿಷಯದಲ್ಲಿ ಅಸಮಾಧಾನ ಇಲ್ಲ: ಬಿಎಸ್ವೈ ಸ್ಪಷ್ಟನೆ
ಜಿಲ್ಲೆಯ ಹಾನಗಲ್ ತಾಲೂಕಿನ ಅಕ್ಕಿಆಲೂರಿನ ಪ್ರಥಮ ದರ್ಜೆ ಗುತ್ತಿಗೆದಾರರಾದ ನಾಸೀರ್ ಖಾನ್ ಎಂಬುವರು ಲಕ್ಷ ರೂಪಾಯಿ ದೇಣಿಗೆ ನೀಡಿರುವ ವ್ಯಕ್ತಿ. ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ಹಣದ ಚೆಕ್ಅನ್ನ ಸಂಸದ ಶಿವಕುಮಾರ್ ಉದಾಸಿಗೆ ನೀಡಿದ್ದಾರೆ. ಗುತ್ತಿಗೆದಾರನ ಈ ಕಾರ್ಯಕ್ಕೆ ಸಂಸದರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.