ಹಾವೇರಿ: ಹದಿನೆಂಟು ವರ್ಷದ ವಿಶೇಷಚೇತನ ಯುವತಿ ಮೇಲೆ ವ್ಯಕ್ತಿಯೋರ್ವ ಅತ್ಯಾಚಾರ ಎಸಗಿರುವ ಅಮಾನವೀಯ ಘಟನೆ ಹಾನಗಲ್ ತಾಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಯುವತಿಯ ಬಾಯಿಗೆ ಬಟ್ಟೆ ತುರುಕಿ ದುಷ್ಕರ್ಮಿ ಅತ್ಯಾಚಾರ ಎಸಗಿದ್ದಾನೆ ಎಂಬುದು ತನಿಖೆಯಿಂದ ತಿಳಿದು ಬಂದಿದೆ.
ಓದಿ: ಆಘಾತಕಾರಿ ಸುದ್ದಿ.. ರಾಜಸ್ಥಾನದಲ್ಲಿ 10 ವರ್ಷದ ಬಾಲಕನಿಂದ ಸಹಪಾಠಿ ಬಾಲಕಿ ಮೇಲೆ ಅತ್ಯಾಚಾರ
ಪ್ರಮುಖ ಆರೋಪಿ ಪರಶುರಾಮ ಮಡಿವಾಳನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ಅತ್ಯಾಚಾರಕ್ಕೆ ಸಹಾಯ ಮಾಡಿದ ಆರೋಪಿ ಯಶವಂತಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ವಿಶೇಷಚೇತನ ಯುವತಿ ಮೇಲೆ ಅತ್ಯಾಚಾರ ಮಾಡಲು ಪರಶುರಾಮಗೆ ಯಶವಂತ ಸಹಕಾರ ನೀಡಿದ್ದಾನೆ ಎನ್ನಲಾಗಿದೆ. ಆಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಈ ಘಟನೆ ಕುರಿತು ಇನ್ನಷ್ಟು ಮಾಹಿತಿ ಲಭ್ಯವಾಗಬೇಕಿದೆ.