ಹಾವೇರಿ: 2008ರಲ್ಲಿ ನಡೆದ ಗೋಲಿಬಾರ್ನಲ್ಲಿ ಇಬ್ಬರು ರೈತರು ಹುತಾತ್ಮರಾದ ಹಿನ್ನೆಲೆ ಹಿಂದು ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ.
ಹಾವೇರಿ ರೈತರ ಗೋಲಿಬಾರ್ ನಡೆದು ಹಿಂದಿಗೆ 12 ವರ್ಷ. ಅಂದು ಗೊಬ್ಬರ ಮತ್ತು ಬಿತ್ತನೆ ಬೀಜಕ್ಕಾಗಿ ನಡೆದ ಪ್ರತಿಭಟನೆ ಹಿಂಸಾ ರೂಪ ತಾಳಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ನಡೆಸಿದ ಗೋಲಿಬಾರ್ಗೆ ಸಿದ್ದಲಿಂಗಪ್ಪ ಚೂರಿ ನಂತರ ಪುಟ್ಟಪ್ಪ ಹೊನ್ನತ್ತಿ ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಇಂದು ಹಾವೇರಿಯಲ್ಲಿ ರೈತ ಹುತಾತ್ಮ ದಿನಾಚರಣೆ ಆಚರಿಸಲಾಗುತ್ತಿದೆ.
ಇದಾದ ಬಳಿಕ ಹಾವೇರಿ ನಗರದಲ್ಲಿ ವಿವಿಧ ರೈತ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ.