ETV Bharat / state

ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಸಾವು.. ಅರಣ್ಯಾಧಿಕಾರಿಗಳಿಗೆ ಜನ ಹೇಳಿದ್ದೇನು? - ತೀವ್ರ ನಿತ್ರಾಣಗೊಂಡು ಸಾವನ್ನಪ್ಪಿರುವ ಘಟನೆ

ಬಾಯಲ್ಲಿ ಹುಣ್ಣಾಗಿದ್ದ ಚಿರತೆಯೊಂದು ಮಹಿಳೆ ಮೇಲೆ ದಾಳಿ ಮಾಡಿದ್ದು, ನಂತರ ತೀವ್ರ ನಿತ್ರಾಣಗೊಂಡು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

haveri-leopard-attacks-woman-and-dies
ಹಾವೇರಿ: ಮಹಿಳೆ ಮೇಲೆ ದಾಳಿ ಚಿರತೆ ಸಾವು
author img

By

Published : May 21, 2023, 5:08 PM IST

Updated : May 21, 2023, 5:46 PM IST

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಗಾಯಗೊಂಡಿರುವ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಸಿದ್ದಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದ್ದು ಮುಖ, ಕೈ ಮೇಲೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಚಿರತೆ ಮೇಲೆ ದಾಳಿ ನಡೆಸಿದ್ದು, ತೀವ್ರ ನಿತ್ರಾಣದಲ್ಲಿದ್ದ ಚಿರತೆ ಸಹ ಸಾವನ್ನಪ್ಪಿದೆ.

ಈ ಘಟನೆ ಕುರಿತಂತೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯ ಬಾಯಲ್ಲಿ ಹುಣ್ಣಾಗಿತ್ತು. ಈ ಹುಣ್ಣಿನಿಂದ ಚಿರತೆ ನಿತ್ರಾಣಗೊಂಡು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ. ಜತೆಗೆ ಚಿರತೆಯ ಮೃತದೇಹವನ್ನು ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಹಾವೇರಿ: ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ಗಾಯಗೊಂಡಿರುವ ಚಿರತೆಯೊಂದು ದಾಳಿ ನಡೆಸಿರುವ ಘಟನೆ ನಡೆದಿದೆ. ಸಿದ್ದಮ್ಮ (55) ಎಂಬವರ ಮೇಲೆ ಚಿರತೆ ದಾಳಿ ನಡೆಸಿದ್ದು ಮುಖ, ಕೈ ಮೇಲೆ ಗಾಯವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಗ್ರಾಮಸ್ಥರು ಚಿರತೆ ಮೇಲೆ ದಾಳಿ ನಡೆಸಿದ್ದು, ತೀವ್ರ ನಿತ್ರಾಣದಲ್ಲಿದ್ದ ಚಿರತೆ ಸಹ ಸಾವನ್ನಪ್ಪಿದೆ.

ಈ ಘಟನೆ ಕುರಿತಂತೆ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಚಿರತೆಯ ಬಾಯಲ್ಲಿ ಹುಣ್ಣಾಗಿತ್ತು. ಈ ಹುಣ್ಣಿನಿಂದ ಚಿರತೆ ನಿತ್ರಾಣಗೊಂಡು ಸಾವನ್ನಪ್ಪಿದೆ ಎಂದು ತಿಳಿಸಿದ್ದಾರೆ. ಜತೆಗೆ ಚಿರತೆಯ ಮೃತದೇಹವನ್ನು ಅರಣ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹಲಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ: ಸಾಕು ನಾಯಿ ಹೊತ್ತೊಯ್ದ ಚಿರತೆ

Last Updated : May 21, 2023, 5:46 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.