ರಾಣೆಬೆನ್ನೂರು: ಬಡವರು ಮತ್ತು ಕಾರ್ಮಿಕರಿಗಾಗಿ ಅಂದಿನ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ವ್ಯವಸ್ಥೆಗೆ ರಾಣೆಬೆನ್ನೂರು ನಗರದಲ್ಲಿ ಕಟ್ಟಡ ನಿರ್ಮಾಣ ಮಾಡಲಾಗಿದೆಯಾದ್ರೂ ಇನ್ನೂ ಉದ್ಘಾಟನೆಗೊಂಡಿಲ್ಲ.
ರಾಣೆಬೆನ್ನೂರು
ಆದರೆ, ಜನಪ್ರತಿನಿಧಿಗಳ ನಿರ್ಲಕ್ಷ್ಯ ಹಾಗೂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಆಗುತ್ತಿಲ್ಲ. ಕ್ಯಾಂಟೀನ್ ಕಾಮಗಾರಿ ಪೂರ್ಣವಾಗಿದ್ದು, ಈಗಾಗಲೇ ಅಡುಗೆ ಸಾಮಾನು ಹಾಗೂ ಇತರೆ ವಸ್ತುಗಳನ್ನು ಜೋಡಿಸಲಾಗಿದೆ. ಆದರೆ ಉದ್ಘಾಟನೆ ಮಾಡಲು ಅಧಿಕಾರಿಗಳು ಹಿಂದೇಟು ಹಾಕುತ್ತಿರುವುದು ಯಾಕೆ? ಎಂಬುದು ಗೊತ್ತಾಗುತ್ತಿಲ್ಲ ಎನ್ನುತ್ತಾರೆ ಸ್ಥಳೀಯರು.