ETV Bharat / state

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ - Ranebennur

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಣೇಬೆನ್ನೂರಿನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ನಂತರ ತಹಶೀಲ್ದಾರ್​ ಬಸನಗೌಡ ‌ಕೊಟೂರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

protest  in Ranebennur
ತಹಶೀಲ್ದಾರ್​ ಬಸನಗೌಡ ‌ಕೊಟೂರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ
author img

By

Published : Jun 16, 2020, 5:21 PM IST

ರಾಣೇಬೆನ್ನೂರು : ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ
ಈ ವೇಳೆ ತಾಲೂಕು ಅಧ್ಯಕ್ಷ ಕರಬಸಪ್ಪ ಅಗಸಿಬಾಗಿಲ ಮಾತನಾಡಿ, ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಿ ಸುಗ್ರಿವಾಜ್ಞೆ ಮೂಲಕ ರೈತರ ಮತ್ತು ಕೂಲಿ‌ಕಾರ್ಮಿಕರ ಭೂಮಿಯನ್ನು ಕಿತ್ತುಕೊಳ್ಳುವ ತಂತ್ರ ರೂಪಿಸಿದೆ. ಆದರೆ, ರಾಜ್ಯದಲ್ಲಿ ಕೊವಿಡ್-19 ಮತ್ತು ಕಳೆದ ಅತಿವೃಷ್ಠಿ ನಡುವೆ ರೈತರು ಸಂಕಷ್ಟ ಎದುರಿಸಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಸ್ಪಂದಿಸುವ ಬದಲಾಗಿ ಸುಗ್ರಿವಾಜ್ಞೆ ಎಂಬ ಪದ ಉಪಯೋಗಿಸಿ ರೈತರ ಜಮೀನು ಕಬಳಿಸಲು ಯತ್ನಿಸುತ್ತಿದೆ ಎಂದು ದೂರಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಇವರನ್ನು ಮಾನ್ಯ ಮುಖ್ಯಮಂತ್ರಿಗಳು ಬೀದಿಗೆ ತಳ್ಳಲು ಮುಂದಾಗಿರುವುದು ಖಂಡನಾರ್ಹ. ಸರ್ಕಾರ ರೈತರ ಪರ ಕೆಲಸ ಮಾಡಬೇಕೇ ಹೊರತು ಉಳ್ಳವರ ಏಜೆಂಟರಂತೆ ವರ್ತಿಸಬಾರದು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್​ ಬಸನಗೌಡ ‌ಕೋಟೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ರಾಣೇಬೆನ್ನೂರು : ರಾಜ್ಯ ಸರ್ಕಾರದ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ತಹಶೀಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಕರ್ನಾಟಕ ರಾಜ್ಯ ರೈತ ಸಂಘಟನೆಯಿಂದ ಪ್ರತಿಭಟನೆ
ಈ ವೇಳೆ ತಾಲೂಕು ಅಧ್ಯಕ್ಷ ಕರಬಸಪ್ಪ ಅಗಸಿಬಾಗಿಲ ಮಾತನಾಡಿ, ಕರ್ನಾಟಕ ಸರ್ಕಾರ ಭೂ ಸುಧಾರಣೆ ಕಾಯ್ದೆಯನ್ನು ತಿದ್ದುಪಡಿ ಮಾಡಿ ಸುಗ್ರಿವಾಜ್ಞೆ ಮೂಲಕ ರೈತರ ಮತ್ತು ಕೂಲಿ‌ಕಾರ್ಮಿಕರ ಭೂಮಿಯನ್ನು ಕಿತ್ತುಕೊಳ್ಳುವ ತಂತ್ರ ರೂಪಿಸಿದೆ. ಆದರೆ, ರಾಜ್ಯದಲ್ಲಿ ಕೊವಿಡ್-19 ಮತ್ತು ಕಳೆದ ಅತಿವೃಷ್ಠಿ ನಡುವೆ ರೈತರು ಸಂಕಷ್ಟ ಎದುರಿಸಿದ್ದಾರೆ. ಇಂತಹ ಸಮಯದಲ್ಲಿ ರಾಜ್ಯ ಸರ್ಕಾರ ರೈತರ ಸಮಸ್ಯೆಗಳನ್ನು ಸ್ಪಂದಿಸುವ ಬದಲಾಗಿ ಸುಗ್ರಿವಾಜ್ಞೆ ಎಂಬ ಪದ ಉಪಯೋಗಿಸಿ ರೈತರ ಜಮೀನು ಕಬಳಿಸಲು ಯತ್ನಿಸುತ್ತಿದೆ ಎಂದು ದೂರಿದರು.
ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಕೃಷಿಯನ್ನು ನಂಬಿ ಜೀವನ ನಡೆಸುತ್ತಿದ್ದಾರೆ. ಇವರನ್ನು ಮಾನ್ಯ ಮುಖ್ಯಮಂತ್ರಿಗಳು ಬೀದಿಗೆ ತಳ್ಳಲು ಮುಂದಾಗಿರುವುದು ಖಂಡನಾರ್ಹ. ಸರ್ಕಾರ ರೈತರ ಪರ ಕೆಲಸ ಮಾಡಬೇಕೇ ಹೊರತು ಉಳ್ಳವರ ಏಜೆಂಟರಂತೆ ವರ್ತಿಸಬಾರದು ಎಂದು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ತಹಶೀಲ್ದಾರ್​ ಬಸನಗೌಡ ‌ಕೋಟೂರ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.