ETV Bharat / state

ಲಂಚ: ಲೋಕಾಯುಕ್ತ ಬಲೆಗೆ ಬಿದ್ದ ರಾಣೆಬೆನ್ನೂರು ತಹಶೀಲ್ದಾರ್​

author img

By ETV Bharat Karnataka Team

Published : Jan 5, 2024, 6:19 PM IST

ತಹಶೀಲ್ದಾರ್​ ಹನುಮಂತಪ್ಪ 12 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ.

Ranebennur Tehsildar Hanumanthappa
ರಾಣೆಬೆನ್ನೂರು ತಹಶೀಲ್ದಾರ್​ ಹನುಮಂತಪ್ಪ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರಾಣೆಬೆನ್ನೂರಿನ ತಹಶೀಲ್ದಾರ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್​ ಹನುಮಂತಪ್ಪ ಶಿರಹಟ್ಟಿ ಹಾಗೂ ಅವರ ಕಾರು ಚಾಲಕನನ್ನು ಬಂಧಿಸಲಾಗಿದೆ.

ಮರಳು ಲಾರಿಗೆ ಗ್ರಾವೇಲ್ ತುಂಬಲು ತಹಶೀಲ್ದಾರ್ ಹನುಮಂತಪ್ಪ ರಾಣೆಬೆನ್ನೂರು ನಗರದ ನಿವಾಸಿಯಾದ ಲಾರಿ ಚಾಲಕ ಮಂಜು ವಾಲಿಕರ್​ ಎಂಬವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆತನಿಂದ ಹಣ ಪಡೆಯುವ ಸಂದರ್ಭದಲ್ಲಿ ಹಾವೇರಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹನುಮಂತಪ್ಪ 20 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದು, 12 ಸಾವಿರ ರೂ. ಸ್ವೀಕರಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ: ಕ್ರಮದ ಎಚ್ಚರಿಕೆ ನೀಡಿದ ರಾಜ್ಯಪಾಲ

ಹಾವೇರಿ: ಲಂಚ ಪಡೆಯುತ್ತಿದ್ದಾಗ ರಾಣೆಬೆನ್ನೂರಿನ ತಹಶೀಲ್ದಾರ್​ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ತಹಶೀಲ್ದಾರ್​ ಹನುಮಂತಪ್ಪ ಶಿರಹಟ್ಟಿ ಹಾಗೂ ಅವರ ಕಾರು ಚಾಲಕನನ್ನು ಬಂಧಿಸಲಾಗಿದೆ.

ಮರಳು ಲಾರಿಗೆ ಗ್ರಾವೇಲ್ ತುಂಬಲು ತಹಶೀಲ್ದಾರ್ ಹನುಮಂತಪ್ಪ ರಾಣೆಬೆನ್ನೂರು ನಗರದ ನಿವಾಸಿಯಾದ ಲಾರಿ ಚಾಲಕ ಮಂಜು ವಾಲಿಕರ್​ ಎಂಬವರಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಆತನಿಂದ ಹಣ ಪಡೆಯುವ ಸಂದರ್ಭದಲ್ಲಿ ಹಾವೇರಿ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಹನುಮಂತಪ್ಪ 20 ಸಾವಿರ ರೂಪಾಯಿಗೆ ಬೇಡಿಕೆಯಿಟ್ಟಿದ್ದು, 12 ಸಾವಿರ ರೂ. ಸ್ವೀಕರಿಸುತ್ತಿದ್ದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಇಡಿ ಅಧಿಕಾರಿಗಳ ಮೇಲೆ ದಾಳಿ: ಕ್ರಮದ ಎಚ್ಚರಿಕೆ ನೀಡಿದ ರಾಜ್ಯಪಾಲ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.