ETV Bharat / state

ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಸಮುದಾಯದಿಂದ ಹೋರಾಟ

author img

By

Published : Sep 21, 2022, 10:44 PM IST

Updated : Sep 21, 2022, 11:05 PM IST

ಮಳೆಗಾಲದ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಿಗ್ಗಾಂವಿಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು.

Madiga community protest
ಸದಾಶಿವ ಆಯೋಗದ ವರದಿ ಜಾರಿಗೆ ಬರುವಂತೆ ಮಾದಿಗ ಸಮುದಾಯದಿಂದ ಹೋರಾಟ

ಹಾವೇರಿ : ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು. ತಾಲೂಕು ಪಂಚಾಯತ್ ಕಚೇರಿಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಜನಸಂಪರ್ಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಗೂ ಮುನ್ನ ಕಿತ್ತೂರು ರಾಣಿಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ನಂತರ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಪಂಚಾಯತ್ ಕಚೇರಿವರೆಗೂ ನಡೆಯಿತು. ಜಾಂಜ್ ಮೇಳ ಹಲಗೆ ಸದ್ದಿನೊಂದಿಗೆ ಹೆಜ್ಜೆ ಹಾಕಿದ ಪ್ರತಿಭಟನಾಕರರು ಮಾದಿಗ ಸಮಾಜ ಪರ ಘೋಷಣೆ ಹಾಕಿದರು.

ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಸಮುದಾಯದಿಂದ ಹೋರಾಟ

ನಂತರ ಸಿಎಂ ಬಸವರಾಜ್ ಬೊಮ್ಮಾಯಿ ಜನಸಂಪರ್ಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾದಿಗ ಹೋರಾಟ ಸಮಿತಿಯ ಸದಸ್ಯರು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನಂತರ ಶಿಗ್ಗಾಂವಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ : ಗೋಲ್ಡ್ ರಿಕವರಿ ಹೆಸರಿನಲ್ಲಿ ಕಿರುಕುಳ ಆರೋಪ: ತಮಿಳುನಾಡು ಪೊಲೀಸರನ್ನು ಕೂಡಿಹಾಕಿದ ಸ್ಥಳೀಯರು

ಹಾವೇರಿ : ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ಹಾವೇರಿ ಜಿಲ್ಲೆ ಶಿಗ್ಗಾಂವಿಯಲ್ಲಿ ಮಾದಿಗ ಮೀಸಲಾತಿ ಹೋರಾಟ ಸಮಿತಿ ಪ್ರತಿಭಟನೆ ನಡೆಸಿತು. ತಾಲೂಕು ಪಂಚಾಯತ್ ಕಚೇರಿಯಲ್ಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಜನಸಂಪರ್ಕ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಗೂ ಮುನ್ನ ಕಿತ್ತೂರು ರಾಣಿಚೆನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಮುಖಂಡರು ನಂತರ ಪ್ರತಿಭಟನಾ ಮೆರವಣಿಗೆ ನಡೆಸಿದರು. ರಾಣಿ ಚೆನ್ನಮ್ಮ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಪಂಚಾಯತ್ ಕಚೇರಿವರೆಗೂ ನಡೆಯಿತು. ಜಾಂಜ್ ಮೇಳ ಹಲಗೆ ಸದ್ದಿನೊಂದಿಗೆ ಹೆಜ್ಜೆ ಹಾಕಿದ ಪ್ರತಿಭಟನಾಕರರು ಮಾದಿಗ ಸಮಾಜ ಪರ ಘೋಷಣೆ ಹಾಕಿದರು.

ಸದಾಶಿವ ಆಯೋಗದ ವರದಿ ಜಾರಿಗೆ ಮಾದಿಗ ಸಮುದಾಯದಿಂದ ಹೋರಾಟ

ನಂತರ ಸಿಎಂ ಬಸವರಾಜ್ ಬೊಮ್ಮಾಯಿ ಜನಸಂಪರ್ಕ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮಾದಿಗ ಹೋರಾಟ ಸಮಿತಿಯ ಸದಸ್ಯರು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಸದಾಶಿವ ಆಯೋಗದ ವರದಿ ಜಾರಿಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ನಂತರ ಶಿಗ್ಗಾಂವಿ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಿದರು.

ಇದನ್ನೂ ಓದಿ : ಗೋಲ್ಡ್ ರಿಕವರಿ ಹೆಸರಿನಲ್ಲಿ ಕಿರುಕುಳ ಆರೋಪ: ತಮಿಳುನಾಡು ಪೊಲೀಸರನ್ನು ಕೂಡಿಹಾಕಿದ ಸ್ಥಳೀಯರು

Last Updated : Sep 21, 2022, 11:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.