ಹಾವೇರಿ: ದೆಹಲಿಯಲ್ಲಿ ನಡೆದ ನಿಜಾಮುದ್ದೀನ್ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ಯಾರೂ ಪಾಲ್ಗೊಂಡಿಲ್ಲ. ಆದರೆ ಆ ಸಮಯದಲ್ಲಿ ಜಿಲ್ಲೆಯ ಕೆಲವರು ಅಜ್ಮೀರ್ ಸೇರಿದಂತೆ ವಿವಿಧ ಸ್ಥಳಗಳಿಗೆ ಪ್ರವಾಸ ಮಾಡಿದ್ದಾರೆ. ಅವರನ್ನ ತಪಾಸಣೆಗೆ ಒಳಪಡಿಸಲಾಗಿದ್ದು, ಯಾರಲ್ಲಿಯೂ ಸಹ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಹಾವೇರಿ ಡಿಹೆಚ್ಒ ರಾಜೇಂದ್ರ ದೊಡ್ಡಮನಿ ಸ್ಪಷ್ಟಪಡಿಸಿದ್ದಾರೆ.
ಈ ಕುರಿತಂತೆ ಹಾವೇರಿ ಎಸ್ಪಿ ಕೆ.ಜೆ.ದೇವರಾಜ್ ಸಹ ಹೇಳಿಕೆ ನೀಡಿದ್ದು, ಜಿಲ್ಲೆಯಿಂದ ಯಾರೂ ಸಹ ದೆಹಲಿ ಕಾರ್ಯಕ್ರಮದಲ್ಲಿ ಪಾಲ್ಗೊಂಡಿಲ್ಲ ಎಂದು ತಿಳಿಸಿದ್ದಾರೆ.