ETV Bharat / state

ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಪಟ್ಟು: ಸಾರ್ವಜನಿಕರ ಪ್ರತಿಭಟನೆ

author img

By

Published : Jan 20, 2020, 6:16 PM IST

ಅಂಜುಮನ್ ಸಂಸ್ಥೆಗೆ ಸೇರಿದ ಸ್ಮಶಾನ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮಳಿಗೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ನಗರಸಭೆ ಮುಂದೆ ಧರಣಿ ನಡೆಸಿ ಕಾಮಗಾರಿ ಸ್ಥಗಿತಗೊಳಿಸುವಂತೆ ಒತ್ತಾಯಿಸಿದರು.

public-protest-against-clearing-of-illegal-building
ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಸಾರ್ವಜನಿಕರ ಪ್ರತಿಭಟನೆ

ರಾಣೆಬೆನ್ನೂರ: ನಗರದ ಸಿಟಿಎಸ್ ನಂ, 578(ಬ) ಅಂಜುಮನ್ ಸಂಸ್ಥೆಗೆ ಸೇರಿದ ಸ್ಮಶಾನ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮಳಿಗೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ನಗರಸಭೆ ಮುಂದೆ ಧರಣಿ ನಡೆಸಿದರು.

ಸಾರ್ವಜನಿಕ ಸ್ಮಶಾನದ ಜಾಗದಲ್ಲಿ ಯಾವುದೇ ರೀತಿಯ ಕಟ್ಟಡ ಹಾಗೂ ಮಳಿಗೆಗಳನ್ನು ನಿರ್ಮಾಣ ಮಾಡಬಾರದು ಎಂದು ಈ ಹಿಂದೆ ನಗರಸಭೆಗೆ ಅನೇಕ ಬಾರಿ ಮನವಿ ‌ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದಲ್ಲದೇ ಬೆಳಗಾವಿಯ ವಕ್ಪ್ ಬೋರ್ಡ್ ಈ ಕುರಿತು ನ್ಯಾಯಾಲಯದ ಗಮನಕ್ಕೆ ತಂದಿತ್ತು. ನಂತರ ಕೋರ್ಟ್ ಕೂಡ ಆ ಜಾಗದಲ್ಲಿ ಯಾವುದೇ ವಾಣಿಜ್ಯ ಮಳಿಗೆಗಳನ್ನು ಕಟ್ಟದೆ, ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತ್ತು. ಆದರೆ, ಅಂಜುಮನ್ ಕಮಿಟಿಯು ನ್ಯಾಯಾಲಯದ ಸೂಚನೆಗೆ ಕಿಂಚಿತ್ತೂ ಬೆಲೆ ಕೊಡದೇ ಮತ್ತೆ ಅಕ್ರಮ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಸಾರ್ವಜನಿಕರ ಪ್ರತಿಭಟನೆ

ನಂತರ ನಗರಸಭೆ ಪೌರಾಯುಕ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ಮಾತನಾಡಿದ ಅವರು, ಕೂಡಲೇ ಕಾಮಗಾರಿ ಬಂದ್ ಮಾಡಿಸಲಾಗುವುದು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಮಿಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

ರಾಣೆಬೆನ್ನೂರ: ನಗರದ ಸಿಟಿಎಸ್ ನಂ, 578(ಬ) ಅಂಜುಮನ್ ಸಂಸ್ಥೆಗೆ ಸೇರಿದ ಸ್ಮಶಾನ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮಳಿಗೆಗಳನ್ನು ತೆರವುಗೊಳಿಸುವಂತೆ ಆಗ್ರಹಿಸಿ ಸಾರ್ವಜನಿಕರು ನಗರಸಭೆ ಮುಂದೆ ಧರಣಿ ನಡೆಸಿದರು.

ಸಾರ್ವಜನಿಕ ಸ್ಮಶಾನದ ಜಾಗದಲ್ಲಿ ಯಾವುದೇ ರೀತಿಯ ಕಟ್ಟಡ ಹಾಗೂ ಮಳಿಗೆಗಳನ್ನು ನಿರ್ಮಾಣ ಮಾಡಬಾರದು ಎಂದು ಈ ಹಿಂದೆ ನಗರಸಭೆಗೆ ಅನೇಕ ಬಾರಿ ಮನವಿ ‌ಮಾಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಇದಲ್ಲದೇ ಬೆಳಗಾವಿಯ ವಕ್ಪ್ ಬೋರ್ಡ್ ಈ ಕುರಿತು ನ್ಯಾಯಾಲಯದ ಗಮನಕ್ಕೆ ತಂದಿತ್ತು. ನಂತರ ಕೋರ್ಟ್ ಕೂಡ ಆ ಜಾಗದಲ್ಲಿ ಯಾವುದೇ ವಾಣಿಜ್ಯ ಮಳಿಗೆಗಳನ್ನು ಕಟ್ಟದೆ, ಯಥಾಸ್ಥಿತಿ ಕಾಪಾಡುವಂತೆ ಸೂಚಿಸಿತ್ತು. ಆದರೆ, ಅಂಜುಮನ್ ಕಮಿಟಿಯು ನ್ಯಾಯಾಲಯದ ಸೂಚನೆಗೆ ಕಿಂಚಿತ್ತೂ ಬೆಲೆ ಕೊಡದೇ ಮತ್ತೆ ಅಕ್ರಮ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಸಾರ್ವಜನಿಕರ ಪ್ರತಿಭಟನೆ

ನಂತರ ನಗರಸಭೆ ಪೌರಾಯುಕ್ತರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ಮಾತನಾಡಿದ ಅವರು, ಕೂಡಲೇ ಕಾಮಗಾರಿ ಬಂದ್ ಮಾಡಿಸಲಾಗುವುದು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕಮಿಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.

Intro:Kn_rnr_02_illegal_building_removed_kac10001.

ಅಕ್ರಮ ಕಟ್ಟಡ ತೆರವುಗೊಳಿಸುವಂತೆ ಪ್ರತಿಭಟನೆ...

ರಾಣೆಬೆನ್ನೂರ: ನಗರದ ಸಿಟಿಎಸ್ ನಂ, 578ಬ ಅಂಜುಮನ್ ಸಂಸ್ಥೆಗೆ ಸೇರಿದ ಸ್ಮಶಾನ ಜಾಗದಲ್ಲಿ ಅನಧಿಕೃತವಾಗಿ ನಿರ್ಮಾಣ ಮಾಡಿರುವ ಮಳಿಗೆಗಳನ್ನು ತೆರವುಗೊಳಿಸುವಂತೆ ಸಾರ್ವಜನಿಕರು ನಗರಸಭೆ ಮುಂದೆ ಧರಣಿ ನಡೆಸಿದರು.

Body:ಸಾರ್ವಜನಿಕರ ಸ್ಮಶಾನ ಜಾಗದಲ್ಲಿ ಯಾವುದೇ ರೀತಿಯ ಕಟ್ಟಡ ಹಾಗೂ ಮಳಿಗೆಗಳನ್ನು ನಿರ್ಮಾಣ ಮಾಡಬಾರದು ಎಂದು ಈ ಹಿಂದೆ ನಗರಸಭೆಗೆ ಅನೇಕ ಬಾರಿ ಮನವಿ ‌ಮಾಡಿದರು ಯಾವುದೇ ಕ್ರಮ ಕೈಗೊಂಡಿಲ್ಲ. ಇದಲ್ಲದೆ ಬೆಳಗಾವಿಯ ವಕ್ಪ್ ಬೋರ್ಡ್ ನ್ಯಾಯಾಲಯಕ್ಕೆ ಇದರ ಬಗ್ಗೆ ಗಮನಕ್ಕೆ ತರಲಾಗಿದೆ. ನಂತರ ಕೋರ್ಟ್ ಕೂಡ ಆ ಜಾಗದಲ್ಲಿ ಯಾವುದೇ ವಾಣಿಜ್ಯ ಮಳಿಗೆಗಳನ್ನು ಕಟ್ಟದೆ, ಯಥಾಸ್ಥಿತಿಯಲ್ಲಿ ಕಾಪಾಡುವಂತೆ ಸೂಚಿಸಲಾಯಿತು. ಆದರೆ ಅಂಜುಮನ್ ಕಮೀಟಿ ನ್ಯಾಯಾಲಯದ ಸೂಚನೆಗೆ ಕಿಂಚಿತ್ತೂ ಬೆಲೆ ಕೊಡದೆ ಮತ್ತೆ ಅಕ್ರಮ ಮಳಿಗೆಗಳನ್ನು ನಿರ್ಮಾಣ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ನಂತರ ನಗರಸಭೆ ಪೌರಾಯುಕ್ತರು ಪ್ರತಿಭಟನಾಕಾರರು ಸ್ಥಳಕ್ಕೆ ಆಗಮಿಸಿ ಅಹವಾಲು ಆಲಿಸಿದರು. ನಂತರ ಮಾತನಾಡಿದ ಅವರು ಈ ಕೂಡಲೇ ಅಕ್ರಮವಾಗಿ ನಿರ್ಮಾಣ ಮಾಡುತ್ತಿರುವ ಮಳಿಗೆಗಳ ಕಾಮಗಾರಿಯನ್ನು ಬಂದ್ ಮಾಡಿಸಲಾಗುವುದು. ಬಂದ್ ಮಾಡದಿದ್ದರೆ ಮುಂದಿನ ದಿನಗಳಲ್ಲಿ ಕಮಿಟಿಯ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪ್ರತಿಭಟನಾಕಾರರಿಗೆ ಭರವಸೆ ನೀಡಿದರು.
ಇದಕ್ಕೆ ಸಹಕರಿಸಿದ ಪ್ರತಿಭಟನಾಕಾರರು ತಮ್ಮ ಪ್ರತಿಭಟನೆಯನ್ನು ಕೈ ಬಿಟ್ಟರು.

Conclusion:ರೈತ ಮುಖಂಡ ಹನುಮಂತ ಕಬ್ಬಾರ, ರಾಯಣ್ಣ ಮಾಗನೂರು, ನಾಗರಾಜ ಬಣಕಾರ, ಧರ್ಮಣ್ಣ ಅರಳಿಕಟ್ಟಿ, ನಾಗಪ್ಪ ಕೊರವರು ಸೇರಿದಂತೆ ಇತರರು ಹಾಜರಿದ್ದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.