ಹಾನಗಲ್: ತುಂಬಿ ಹರಿಯುತ್ತಿರುವ ಮಳಗಿ ಧರ್ಮಾ ಜಲಾಶಯಕ್ಕೆ ಎಂಎಲ್ಸಿ ಶ್ರೀನಿವಾಸ ಮಾನೆ ಅವರು ಕಾರ್ಯಕರ್ತರೊಂದಿಗೆ ತೆರಳಿ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.
ಈ ವೇಳೆ ಮಾತನಾಡಿದ ಶ್ರೀನಿವಾಸ ಮಾನೆ, ಹಾನಗಲ್ ತಾಲೂಕಿನ ಬಹುತೇಕ ಹಳ್ಳಿಗಳ ಜನರು ಈ ಜಲಾಶಯದ ನೀರಿನಿಂದ ಜೀವನ ಸಾಗಿಸುತಿದ್ದಾರೆ. ಬಹುತೇಕ ಕೆರೆ ಕಟ್ಟೆಗಳು ತುಂಬಿ ಹರಿಯುತ್ತಿವೆ. ಈ ಜಲಾಶಯ ನಮ್ಮ ತಾಲೂಕಿನ ರೈತರ ಜೀವನಾಡಿಯಾಗಿದೆ ಎಂದು ಹೇಳಿದರು.