ETV Bharat / state

ಉಕ್ರೇನ್​ನಲ್ಲಿ ಮೃತಪಟ್ಟ ಹಾವೇರಿಯ ನವೀನ್​ ಕುಟುಂಬಕ್ಕೆ ಸರ್ಕಾರದಿಂದ ₹25 ಲಕ್ಷ ಪರಿಹಾರ

author img

By

Published : Mar 5, 2022, 7:20 PM IST

Updated : Mar 5, 2022, 7:56 PM IST

ಉಕ್ರೇನ್​ನಲ್ಲಿ ರಷ್ಯಾ ಬಾಂಬ್​ ದಾಳಿಗೆ ಮೃತಪಟ್ಟ ಜಿಲ್ಲೆಯ ನವೀನ್​ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್​ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ನೀಡಿದ್ದಾರೆ.

compensation
ಪರಿಹಾರ

ಹಾವೇರಿ: ಉಕ್ರೇನ್​ನಲ್ಲಿ ಬಾಂಬ್​ ದಾಳಿಗೆ ಬಲಿಯಾದ ಜಿಲ್ಲೆಯ ನವೀನ್​ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್​ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.

ಉಕ್ರೇನ್​ನಲ್ಲಿ ಮೃತಪಟ್ಟ ಹಾವೇರಿಯ ನವೀನ್​ ಕುಟುಂಬಕ್ಕೆ ಸರ್ಕಾರದಿಂದ ₹25 ಲಕ್ಷ ಪರಿಹಾರ

ಇಂದು ನವೀನ್​ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್​ ದಾಳಿಗೆ ಉಕ್ರೇನ್​ನಲ್ಲಿ ಮೃತಪಟ್ಟ ರಾಜ್ಯದ ಯುವಕ ನವೀನ್​ ಪಾರ್ಥಿವ ಶರೀರವನ್ನು ತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ. ಕೇಂದ್ರ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಹೆಚ್ಚಾಗಿದೆ. ಹೀಗಾಗಿ ನವೀನ್​ ಮೃತದೇಹ ತರಲು ಆಗುತ್ತಿಲ್ಲ. ಇಂದು ಯುದ್ಧ ವಿರಾಮ ನೀಡಲಾಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಉಕ್ರೇನ್​ನಲ್ಲಿ ಯುದ್ಧ ನಿಲ್ಲಲಿ ಎಂದು ಪ್ರಾರ್ಥಿಸಲಾಗುವುದು. ಅಲ್ಲಿ ಸಿಲುಕಿರುವ ಕನ್ನಡಿಗರು ನಡೆದುಕೊಂಡು ಬೇರೆ ದೇಶದ ಗಡಿಗಳಿಗೆ ಬಂದಿದ್ದಾರೆ. ಕೆಲವರು ಬಂಕರ್​ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ 10 ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದರು.

ನವೀನ್​ ಕುಟುಂಬಕ್ಕೆ 25 ಲಕ್ಷ ರೂ. ಚೆಕ್​ ವಿತರಣೆ: ಉಕ್ರೇನ್​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಅಸುನೀಗಿದ ನವೀನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೇ, ಹಿರಿಯ ಸಹೋದರನಿಗೆ ಸೂಕ್ತ ಉದ್ಯೋಗ ನಿಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.

ನವೀನ್​ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಹಾಗೂ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಮುಂದಿರುವ 2 ದೊಡ್ಡ ಸವಾಲುಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಓದಿ: ನಮಗೆ ಅಪಾಯವಾದರೆ ಸರ್ಕಾರವೇ ಹೊಣೆ: ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಅಳಲು

ಹಾವೇರಿ: ಉಕ್ರೇನ್​ನಲ್ಲಿ ಬಾಂಬ್​ ದಾಳಿಗೆ ಬಲಿಯಾದ ಜಿಲ್ಲೆಯ ನವೀನ್​ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ. ಅಲ್ಲದೇ, ನವೀನ್​ ಅವರ ಹಿರಿಯ ಸಹೋದರನಿಗೆ ಉದ್ಯೋಗ ನೀಡುವ ಭರವಸೆಯನ್ನು ಸಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನೀಡಿದ್ದಾರೆ.

ಉಕ್ರೇನ್​ನಲ್ಲಿ ಮೃತಪಟ್ಟ ಹಾವೇರಿಯ ನವೀನ್​ ಕುಟುಂಬಕ್ಕೆ ಸರ್ಕಾರದಿಂದ ₹25 ಲಕ್ಷ ಪರಿಹಾರ

ಇಂದು ನವೀನ್​ ಅವರ ಕುಟುಂಬಸ್ಥರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್​ ದಾಳಿಗೆ ಉಕ್ರೇನ್​ನಲ್ಲಿ ಮೃತಪಟ್ಟ ರಾಜ್ಯದ ಯುವಕ ನವೀನ್​ ಪಾರ್ಥಿವ ಶರೀರವನ್ನು ತರಲು ಸರ್ವಪ್ರಯತ್ನ ಮಾಡಲಾಗುತ್ತಿದೆ. ಕೇಂದ್ರ ವಿದೇಶಾಂಗ ಸಚಿವರ ಜೊತೆಗೆ ಸಂಪರ್ಕದಲ್ಲಿದ್ದೇವೆ. ಅಲ್ಲಿ ಸುತ್ತಲೂ ಬಾಂಬಿಂಗ್ ಹೆಚ್ಚಾಗಿದೆ. ಹೀಗಾಗಿ ನವೀನ್​ ಮೃತದೇಹ ತರಲು ಆಗುತ್ತಿಲ್ಲ. ಇಂದು ಯುದ್ಧ ವಿರಾಮ ನೀಡಲಾಗಿದೆ. ಆದಷ್ಟು ಬೇಗ ಪಾರ್ಥಿವ ಶರೀರವನ್ನ ತರುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಉಕ್ರೇನ್​ನಲ್ಲಿ ಯುದ್ಧ ನಿಲ್ಲಲಿ ಎಂದು ಪ್ರಾರ್ಥಿಸಲಾಗುವುದು. ಅಲ್ಲಿ ಸಿಲುಕಿರುವ ಕನ್ನಡಿಗರು ನಡೆದುಕೊಂಡು ಬೇರೆ ದೇಶದ ಗಡಿಗಳಿಗೆ ಬಂದಿದ್ದಾರೆ. ಕೆಲವರು ಬಂಕರ್​ಗಳಲ್ಲಿದ್ದಾರೆ. ನಮ್ಮ ಜಿಲ್ಲೆಯಿಂದ 10 ಜನರು ಹೋಗಿದ್ದರು. ಐವರು ಬಂದಿದ್ದಾರೆ, ಉಳಿದ ಐವರನ್ನು ಕರೆತರುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಸಿಎಂ ಹೇಳಿದರು.

ನವೀನ್​ ಕುಟುಂಬಕ್ಕೆ 25 ಲಕ್ಷ ರೂ. ಚೆಕ್​ ವಿತರಣೆ: ಉಕ್ರೇನ್​ನಲ್ಲಿ ರಷ್ಯಾದ ಬಾಂಬ್​ ದಾಳಿಗೆ ಅಸುನೀಗಿದ ನವೀನ್ ಕುಟುಂಬಕ್ಕೆ ಸರ್ಕಾರದಿಂದ 25 ಲಕ್ಷ ರೂ. ಪರಿಹಾರ ನೀಡಲಾಗಿದೆ. ಅಲ್ಲದೇ, ಹಿರಿಯ ಸಹೋದರನಿಗೆ ಸೂಕ್ತ ಉದ್ಯೋಗ ನಿಡುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದರು.

ನವೀನ್​ ಪಾರ್ಥಿವ ಶರೀರ ತಾಯ್ನಾಡಿಗೆ ತರುವ ಹಾಗೂ ಅಲ್ಲಿ ಸಿಲುಕಿಕೊಂಡಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರುವುದು ನಮ್ಮ ಮುಂದಿರುವ 2 ದೊಡ್ಡ ಸವಾಲುಗಳು ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಓದಿ: ನಮಗೆ ಅಪಾಯವಾದರೆ ಸರ್ಕಾರವೇ ಹೊಣೆ: ಉಕ್ರೇನ್​ನಲ್ಲಿರುವ ಭಾರತೀಯ ವಿದ್ಯಾರ್ಥಿಗಳ ಅಳಲು

Last Updated : Mar 5, 2022, 7:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.