ETV Bharat / state

ಮಳೆಯಿಂದ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ವಿದ್ಯಾರ್ಥಿನಿಯರು!

author img

By

Published : Oct 4, 2019, 9:21 PM IST

ಹಾವೇರಿಯಲ್ಲಿ ಧಾರಾಕಾರ ಮಳೆಯ ಕಾರಣ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ಮೂವರು ವಿದ್ಯಾರ್ಥಿನಿಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ವಿದ್ಯಾರ್ಥಿನಿಯರು.

ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆಯ ಪರಿಣಾಮ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ಮೂವರು ಶಾಲಾ ವಿದ್ಯಾರ್ಥಿನಿಯರು ಸುದೈವವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಹಾನಗಲ್ ರಸ್ತೆಯಲ್ಲಿರೋ ಸರಸ್ವತಿ ಚಿತ್ರಮಂದಿರದ ಕ್ರಾಸ್​ ಬಳಿ ವಿದ್ಯಾರ್ಥಿನಿಯರು ಕಾಲು ಜಾರಿ ಚರಂಡಿಗೆ ಬಿದ್ದು ಒದ್ದಾಡ್ತಿರೋದನ್ನ ಗಮನಿಸಿದ ಸ್ಥಳೀಯರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.

ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ವಿದ್ಯಾರ್ಥಿನಿಯರು, ಸ್ಥಳೀಯರಿಂದ ರಕ್ಷಣೆ

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗ್ತಿದ್ದು, ರಸ್ತೆ, ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದವು. ಆಗ ವಿದ್ಯಾರ್ಥಿನಿಯರು ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಜಾರಿ ಬಿದ್ದಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾದ ವಿದ್ಯಾರ್ಥಿನಿಯರು ಬದುಕಿದೆಯಾ ಬಡಜೀವವೇ.. ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

ಹಾವೇರಿ: ಜಿಲ್ಲೆಯಲ್ಲಿ ಸುರಿಯುತ್ತಿದ್ದ ಧಾರಾಕಾರ ಮಳೆಯ ಪರಿಣಾಮ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ಮೂವರು ಶಾಲಾ ವಿದ್ಯಾರ್ಥಿನಿಯರು ಸುದೈವವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ನಡೆದಿದೆ.

ಹಾನಗಲ್ ರಸ್ತೆಯಲ್ಲಿರೋ ಸರಸ್ವತಿ ಚಿತ್ರಮಂದಿರದ ಕ್ರಾಸ್​ ಬಳಿ ವಿದ್ಯಾರ್ಥಿನಿಯರು ಕಾಲು ಜಾರಿ ಚರಂಡಿಗೆ ಬಿದ್ದು ಒದ್ದಾಡ್ತಿರೋದನ್ನ ಗಮನಿಸಿದ ಸ್ಥಳೀಯರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಿಸಿದ್ದಾರೆ.

ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದ ವಿದ್ಯಾರ್ಥಿನಿಯರು, ಸ್ಥಳೀಯರಿಂದ ರಕ್ಷಣೆ

ಶಾಲೆ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗ್ತಿದ್ದು, ರಸ್ತೆ, ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದವು. ಆಗ ವಿದ್ಯಾರ್ಥಿನಿಯರು ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಜಾರಿ ಬಿದ್ದಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾದ ವಿದ್ಯಾರ್ಥಿನಿಯರು ಬದುಕಿದೆಯಾ ಬಡಜೀವವೇ.. ಎಂದು ನಿಟ್ಟುಸಿರು ಬಿಟ್ಟಿದ್ದಾರೆ.

Intro:ANCHOR ಹಾವೇರಿಯಲ್ಲಿ ಸಂಜೆ ಸುರಿಯುತ್ತಿದ್ದ ಧಾರಾಕಾರ ಮಳೆಯ ಸಂದರ್ಭದಲ್ಲಿ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೂವರು ಶಾಲಾ ವಿದ್ಯಾರ್ಥಿನಿಯರು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಹಾವೇರಿ ನಗರದ ಹಾನಗಲ್ ರಸ್ತೆಯಲ್ಲಿರೋ ಸರಸ್ವತಿ ಚಿತ್ರಮಂದಿರದ ಕ್ರಾಸ್ ನ ರಸ್ತೆಯಲ್ಲಿ ವಿದ್ಯಾರ್ಥಿನಿಯರು ಚರಂಡಿಗೆ ಬಿದ್ದು ಒದ್ದಾಡ್ತಿರೋದನ್ನ ಗಮನಿಸಿದ ಸ್ಥಳೀಯರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿನಿಯರನ್ನ ರಕ್ಷಿಸಿದ್ದಾರೆ. ಶಾಲೆ ಮುಗಿಸಿ ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಾಲೆ ಮುಗಿಸಿ ಮನೆಗೆ ತೆರಳಬೇಕು ಅನ್ನೋವಷ್ಟರಲ್ಲಿ ನಗರದಲ್ಲಿ ಮಳೆರಾಯನ ಆರ್ಭಟ ಶುರುವಾಗಿತ್ತು. ರಸ್ತೆ, ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದವು. ಆಗ ವಿದ್ಯಾರ್ಥಿನಿಯರು ಆಯತಪ್ಪಿ ತುಂಬಿ ಹರಿತಿದ್ದ ಚರಂಡಿಗೆ ಜಾರಿದ್ರು. ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾದ ವಿದ್ಯಾರ್ಥಿನಿಯರು ನಿಟ್ಟುಸಿರುಬಿಟ್ಟು ಸಂಭವಿಸಬಹುದಾಗಿದ್ದ ಅನಾಹುತದಿಂದ ಪಾರಾಗಿದ್ದಾರೆ.Body:SameConclusion:ANCHOR ಹಾವೇರಿಯಲ್ಲಿ ಸಂಜೆ ಸುರಿಯುತ್ತಿದ್ದ ಧಾರಾಕಾರ ಮಳೆಯ ಸಂದರ್ಭದಲ್ಲಿ ಆಯತಪ್ಪಿ ತುಂಬಿ ಹರಿಯುತ್ತಿದ್ದ ಚರಂಡಿಗೆ ಬಿದ್ದು ಮೂವರು ಶಾಲಾ ವಿದ್ಯಾರ್ಥಿನಿಯರು ಅದೃಷ್ಟವಶಾತ್ ಪಾರಾದ ಘಟನೆ ನಡೆದಿದೆ. ಹಾವೇರಿ ನಗರದ ಹಾನಗಲ್ ರಸ್ತೆಯಲ್ಲಿರೋ ಸರಸ್ವತಿ ಚಿತ್ರಮಂದಿರದ ಕ್ರಾಸ್ ನ ರಸ್ತೆಯಲ್ಲಿ ವಿದ್ಯಾರ್ಥಿನಿಯರು ಚರಂಡಿಗೆ ಬಿದ್ದು ಒದ್ದಾಡ್ತಿರೋದನ್ನ ಗಮನಿಸಿದ ಸ್ಥಳೀಯರು, ತಕ್ಷಣವೇ ಸ್ಥಳಕ್ಕೆ ಧಾವಿಸಿ ವಿದ್ಯಾರ್ಥಿನಿಯರನ್ನ ರಕ್ಷಿಸಿದ್ದಾರೆ. ಶಾಲೆ ಮುಗಿಸಿ ವಿದ್ಯಾರ್ಥಿನಿಯರು ಮನೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಶಾಲೆ ಮುಗಿಸಿ ಮನೆಗೆ ತೆರಳಬೇಕು ಅನ್ನೋವಷ್ಟರಲ್ಲಿ ನಗರದಲ್ಲಿ ಮಳೆರಾಯನ ಆರ್ಭಟ ಶುರುವಾಗಿತ್ತು. ರಸ್ತೆ, ಚರಂಡಿಗಳು ಮಳೆ ನೀರಿನಿಂದ ತುಂಬಿ ಹರಿಯುತ್ತಿದ್ದವು. ಆಗ ವಿದ್ಯಾರ್ಥಿನಿಯರು ಆಯತಪ್ಪಿ ತುಂಬಿ ಹರಿತಿದ್ದ ಚರಂಡಿಗೆ ಜಾರಿದ್ರು. ಸ್ಥಳೀಯರ ಸಮಯಪ್ರಜ್ಞೆಯಿಂದ ಪಾರಾದ ವಿದ್ಯಾರ್ಥಿನಿಯರು ನಿಟ್ಟುಸಿರುಬಿಟ್ಟು ಸಂಭವಿಸಬಹುದಾಗಿದ್ದ ಅನಾಹುತದಿಂದ ಪಾರಾಗಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.