ಹಾವೇರಿ: ಫಲಾನುಭವಿಗಳ ಪಟ್ಟಿಯಿಂದ ಹೆಸರು ಬಿಟ್ಟ ಕಾರಣ ನೆರೆ ಸಂತ್ರಸ್ತನೊಬ್ಬ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ, ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನೆರೆ ಸಂತ್ರಸ್ತ..!
ಮನೆ ಕಟ್ಟಿಕೊಳ್ಳಲು ವರ್ಕ್ ಆರ್ಡರ್ ನೀಡಿದ ಅಧಿಕಾರಿಗಳೇ ಫಲಾನುಭವಿಗಳ ಪಟ್ಟಿಯಿಂದ ರೇವಣೆಪ್ಪ ಹೆಸರು ಬಿಡಲಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತು ಇಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
![ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ನೆರೆ ಸಂತ್ರಸ್ತ..! suicide attempt in haveri](https://etvbharatimages.akamaized.net/etvbharat/prod-images/768-512-7727570-thumbnail-3x2-smk.jpg?imwidth=3840)
ರೇವಣೆಪ್ಪ ಗುದಗಿ (38) ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕಳೆದ ವರ್ಷ ನೆರೆ ಹಾವಳಿಯಲ್ಲಿ ಮನೆ ಕಳೆದುಕೊಂಡಿದ್ದ. ಮನೆ ಬಿದ್ದ ಕಾರಣ ಸರ್ಕಾರದಿಂದ ಮನೆ ಕಟ್ಟಿಕೊಳ್ಳಲು ವರ್ಕ್ ಆರ್ಡರ್ ಸಹ ಸಿಕ್ಕಿತ್ತು. ಇದರಿಂದ ರೇವಣೆಪ್ಪ ಸಾಲ ಮಾಡಿ ಮನೆ ಕಟ್ಟಿಸಿಕೊಂಡಿದ್ದ.
ಮನೆ ಕಟ್ಟಿಕೊಳ್ಳಲು ವರ್ಕ್ ಆರ್ಡರ್ ನೀಡಿದ ಅಧಿಕಾರಿಗಳೇ ಫಲಾನುಭವಿಗಳ ಪಟ್ಟಿಯಿಂದ ರೇವಣೆಪ್ಪ ಹೆಸರು ಬಿಡಲಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತು ಇಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.
ಹಾವೇರಿ: ಫಲಾನುಭವಿಗಳ ಪಟ್ಟಿಯಿಂದ ಹೆಸರು ಬಿಟ್ಟ ಕಾರಣ ನೆರೆ ಸಂತ್ರಸ್ತನೊಬ್ಬ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ, ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.
ರೇವಣೆಪ್ಪ ಗುದಗಿ (38) ಎಂಬ ವ್ಯಕ್ತಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಕಳೆದ ವರ್ಷ ನೆರೆ ಹಾವಳಿಯಲ್ಲಿ ಮನೆ ಕಳೆದುಕೊಂಡಿದ್ದ. ಮನೆ ಬಿದ್ದ ಕಾರಣ ಸರ್ಕಾರದಿಂದ ಮನೆ ಕಟ್ಟಿಕೊಳ್ಳಲು ವರ್ಕ್ ಆರ್ಡರ್ ಸಹ ಸಿಕ್ಕಿತ್ತು. ಇದರಿಂದ ರೇವಣೆಪ್ಪ ಸಾಲ ಮಾಡಿ ಮನೆ ಕಟ್ಟಿಸಿಕೊಂಡಿದ್ದ.
ಮನೆ ಕಟ್ಟಿಕೊಳ್ಳಲು ವರ್ಕ್ ಆರ್ಡರ್ ನೀಡಿದ ಅಧಿಕಾರಿಗಳೇ ಫಲಾನುಭವಿಗಳ ಪಟ್ಟಿಯಿಂದ ರೇವಣೆಪ್ಪ ಹೆಸರು ಬಿಡಲಾಗಿದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದರಿಂದ ಬೇಸತ್ತು ಇಂದು ಮಧ್ಯಾಹ್ನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.